ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ

Suddi Udaya

ಮೇಲಂತಬೆಟ್ಟು: ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಾಲಯ ಪಿತಾಮಹ ಪದ್ಮಶ್ರೀ ಪುರಸ್ಕೃತ ಡಾ.ಎಸ್ ಆರ್ ರಂಗನಾಥ ರವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು

ಪಂಚಾಯತ್ ಅಧ್ಯಕ್ಷೆ ಹರಿಣಾಕ್ಷಿ ದೀಪ ಬೆಳಗಿಸಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಗ್ರಂಥಾಲಯ ಮೇಲ್ವಿಚಾರಕರು ಸ್ವಾಗತಿಸಿ ಗ್ರಂಥಾಲಯ ಪಿತಾಮಹ ಎಸ್ಆರ್ ರಂಗನಾಥ ರವರ ಬಗ್ಗೆ ಸವಿಸ್ತಾರವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಪಂಚಾಯತ್ ಕಾರ್ಯದರ್ಶಿ ನಿರ್ಮಲ್ ಕುಮಾರ್ ಭಾಗವಹಿಸಿ ಗ್ರಂಥಾಲಯ ಉಪಯೋಗ ಹಾಗೂ ಅದರ ರೀತಿ ಯ ಬಗ್ಗೆ ಮಕ್ಕಳಿಗೆ ಹಿತವಚನ ನೀಡಿದರು. ಕಾರ್ಯಕ್ರಮದ ಉದ್ಘಾಟಕರು ಮಕ್ಕಳಿಗೆ ಗ್ರಂಥಾಲಯದ ಸದುಪಯೋಗ ಪಡೆಯುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರು ,ಸಿಬ್ಬಂದಿಗಳು ಹಾಗೂ ಸಂಜೀವಿನಿ ಮಹಿಳಾ ಸಂಘದ ಎಂಬಿಕೆ ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಪುಸ್ತಕ ಹಾಗೂ ಪೆನ್ ನ್ನು ಪಂಚಾಯತ್ ವತಿಯಿಂದ ಕೊಡುಗೆಯಾಗಿ ನೀಡಲಾಯಿತು. ಕಾರ್ಯದರ್ಶಿ ವಂದಿಸಿದರು.

Leave a Comment

error: Content is protected !!