22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ

ಮೇಲಂತಬೆಟ್ಟು: ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಾಲಯ ಪಿತಾಮಹ ಪದ್ಮಶ್ರೀ ಪುರಸ್ಕೃತ ಡಾ.ಎಸ್ ಆರ್ ರಂಗನಾಥ ರವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು

ಪಂಚಾಯತ್ ಅಧ್ಯಕ್ಷೆ ಹರಿಣಾಕ್ಷಿ ದೀಪ ಬೆಳಗಿಸಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಗ್ರಂಥಾಲಯ ಮೇಲ್ವಿಚಾರಕರು ಸ್ವಾಗತಿಸಿ ಗ್ರಂಥಾಲಯ ಪಿತಾಮಹ ಎಸ್ಆರ್ ರಂಗನಾಥ ರವರ ಬಗ್ಗೆ ಸವಿಸ್ತಾರವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಪಂಚಾಯತ್ ಕಾರ್ಯದರ್ಶಿ ನಿರ್ಮಲ್ ಕುಮಾರ್ ಭಾಗವಹಿಸಿ ಗ್ರಂಥಾಲಯ ಉಪಯೋಗ ಹಾಗೂ ಅದರ ರೀತಿ ಯ ಬಗ್ಗೆ ಮಕ್ಕಳಿಗೆ ಹಿತವಚನ ನೀಡಿದರು. ಕಾರ್ಯಕ್ರಮದ ಉದ್ಘಾಟಕರು ಮಕ್ಕಳಿಗೆ ಗ್ರಂಥಾಲಯದ ಸದುಪಯೋಗ ಪಡೆಯುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರು ,ಸಿಬ್ಬಂದಿಗಳು ಹಾಗೂ ಸಂಜೀವಿನಿ ಮಹಿಳಾ ಸಂಘದ ಎಂಬಿಕೆ ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಪುಸ್ತಕ ಹಾಗೂ ಪೆನ್ ನ್ನು ಪಂಚಾಯತ್ ವತಿಯಿಂದ ಕೊಡುಗೆಯಾಗಿ ನೀಡಲಾಯಿತು. ಕಾರ್ಯದರ್ಶಿ ವಂದಿಸಿದರು.

Related posts

ಬೆಳ್ತಂಗಡಿ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಝಿಯವರನ್ನು ಭೇಟಿಯಾದ ಎಸ್‌ಡಿಪಿಐಯ ಜಿಲ್ಲಾ ನಾಯಕರು

Suddi Udaya

ಸೋಣಂದೂರು: ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಆಶ್ರಯದಲ್ಲಿ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಸೌಜನ್ಯ ಅತ್ಯಾಚಾರ ಪ್ರಕರಣ: ನೈಜ ಆರೋಪಿಗಳ ಪತ್ತೆಗಾಗಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಮಾನ ಮಾಡದಂತೆ ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ವೇಣೂರು: ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ, ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಕಲ್ಲೇರಿ: ಕಾರು ಮತ್ತು ಸ್ಕೂಟಿಯ ನಡುವೆ ಭೀಕರ ರಸ್ತೆ ಅಪಘಾತ: ಓರ್ವ ಮೃತ್ಯು

Suddi Udaya

ಬೆಳ್ತಂಗಡಿ ಔಷಧಿ ವ್ಯಾಪಾರಸ್ಥರ ಸಂಘದ ಜಂಟಿ ಸಭೆ

Suddi Udaya
error: Content is protected !!