37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಮಸ್ಯೆ

ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ಕೊರತೆ: ಶಾಲಾ ಮಕ್ಕಳಿಗೆ ಪಾಠ ಮಾಡಲು ಶಿಕ್ಷಕರ ಇಲ್ಲಂದತಹ ಪರಿಸ್ಥಿತಿ: ಮಕ್ಕಳನ್ನು ಶಾಲೆಗೆ ಕಳುಹಿಸದೇ ಪೋಷಕರ ಪ್ರತಿಭಟನೆ

ಪಟ್ರಮೆ: ಪಟ್ರಮೆಯ ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದಾಗಿ ಶಾಲಾ ಮಕ್ಕಳಿಗೆ ಪಾಠ ಮಾಡಲು ಶಿಕ್ಷಕರ ಇಲ್ಲಂದತಹ ಪರಿಸ್ಥಿತಿ ನಿರ್ಮಾಣವಾಗಿದೆ. ವರ್ಷಗಳ ಹಿಂದೆ ಕೊಠಡಿಗಳ ಕೊರತೆಯಿಂದಾಗಿ ಬಳಲುತ್ತಿದ್ದ ಈ ಶಾಲೆ ಊರ ಪರವೂರ ಸಹೃದಯಿಗಳ ಸಹಕಾರದಿಂದ ಕೊಠಡಿಗಳ ಕೊರತೆ ನೀಗಿತ್ತು. ಇದೀಗ ಮತ್ತೆ ಈ ಶಾಲೆ ಸಮಸ್ಯೆಗೊಳಗಾಗಿದೆ. ಇದರಿಂದಾಗಿ ನೊಂದ ಪೋಷಕರು ಕಳೆದ ಜುಲೈ 14 ರಂದು ಕ್ಷೇತ್ರ ಶಿಕ್ಷಣಾಧಿಕಾರಿಯವರಿಗೆ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಶಾಲಾವತಿಯಿಂದ ಹಾಗೂ ಊರಿನವರ ವತಿಯಿಂದ ಬೇರೆ, ಬೇರೆ ಮನವಿ ಸಲ್ಲಿಸಿದ್ದರು.

ಈ ಸಂದರ್ಭದಲ್ಲಿ ಒಂದು ವಾರದೊಳಗೆ ಬದಲಿ ವ್ಯವಸ್ಥೆ ಮಾಡಿಕೊಡುವುದಾಗಿ ಅಧಿಕಾರಿಗಳು
ಭರವಸೆ ನೀಡಿದ್ದರು. ಆದರೆ ಇದುವರೆಗೂ ಅಧಿಕೃತ ಶಿಕ್ಷಕರು ಶಾಲೆಗೆ ಒದಗಿಸಿಲ್ಲ. ಇದರಿಂದ ಆಕ್ರೋಶಗೊಂಡ ಪೋಷಕರು ಶಿಕ್ಷಕರಿಲ್ಲದೆ ಮಕ್ಕಳಿಗೆ ಪಾಠವೂ ಇಲ್ಲ ಜೊತೆಗೆ ಮಕ್ಕಳನ್ನು ನೋಡಿಕೊಳ್ಳುವವರೂ ಇಲ್ಲ. ಹೀಗಾದರೆ ಯಾವ ಧೈರ್ಯದಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸುವುದು, ಶಾಲೆಗೆ ಶಿಕ್ಷಕರನ್ನು ಒದಗಿಸದೇ ಇದ್ದಲ್ಲಿ ನಾವು ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಆ.14ರಂದು ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸದೇ ಪ್ರತಿಭಟನೆ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತ ಪಡಿಸಿದ್ದಾರೆ. ಈ ಹಿನ್ನಲೆಯಲ್ಲಿ ಇಂದು ಮಧ್ಯಾಹ್ನದ ವೇಳೆ ಶಿಕ್ಷಣಾಧಿಕಾರಿ ಶಾಲೆಗೆ ಭೇಟಿ ನೀಡಿ ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷರಾದ ಧನಂಜಯ್ ಗೌಡರವರ ಜೊತೆಗೆ ಮಾತುಕತೆ ನಡೆಸಿದ್ದಾರೆ.

ಪಟ್ರಮೆಯ ಅನಾರು ಏಕೈಕ ಹಿರಿಯ ಪ್ರಾಥಮಿಕ ಶಾಲೆ ಇದೀಗ ಸರ್ಕಾರದ ಎಡವಟ್ಟಿನಿಂದ ಸಮಸ್ಯೆ ಎದುರಿಸುತ್ತಿದೆ. ತುರ್ತು ಕ್ರಮ ಕೈಗೊಳ್ಳದೇ ಹೋದರೆ ಮಕ್ಕಳಿಲ್ಲದ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದ ಶಾಲೆ ಎಂಬ ಅಪಖ್ಯಾತಿಗೆ ಒಳಗಾಗುವ ಪ್ರಸಂಗ ಅನಾರು ಶಾಲೆಗೆ ಎದುರಾಗಲಿದ್ದು ಈ ಸಂಕಷ್ಟದಿಂದ ಶಾಲೆಯು ಯಾವ ರೀತಿ ಪಾರಾಗಲಿದೆ ಎಂದು ಕಾದುನೋಡಬೇಕಿದೆ.

Related posts

ವಲಯ ಮಟ್ಟದ ಕ್ರೀಡಾಕೂಟ: ನಯನಾಡು ಸರಕಾರಿ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಕಳೆಂಜ ಸಂತ ಸೆಬಾಸ್ಟಿಯನ್ ದೇವಾಲಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರಕ್ಕೆ ಚಾಲನೆ

Suddi Udaya

ಸೆ.26-27: ಬೆಳ್ತಂಗಡಿಯಲ್ಲಿ ಊದು ಪೂಜೆ ಮತ್ತು ಬೋಳ್ತೆರ್ದ ಪಿಲಿಕುಲೆನ ಅಬ್ಬರದ ನಲಿಕೆ

Suddi Udaya

ಬಿಎಂಎಸ್ ರಿಕ್ಷಾ ಚಾಲಕರ ಸಂಘ ಬೆಳ್ತಂಗಡಿ ತಾಲೂಕು ಇದರ ವಾರ್ಷಿಕ ಸಭೆ ಹಾಗೂ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯಿಂದ ಪೂರ್ವಭಾವಿ ಸಭೆ

Suddi Udaya

ಅ.24 : ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ ನಾರಾವಿ, ಲಾಯಿಲ ಹಾಗೂ ಬಳ್ಳಮಂಜ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!