33.4 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಕಾಲೇಜಿನ ತುಳು ಸಂಘದ ಆಶ್ರಯದಲ್ಲಿ ‘ಆಟಿ ಒಂಜಿ ನೆಂಪು’ ಕಾರ್ಯಕ್ರಮ

ಬೆಳ್ತಂಗಡಿ: ಜಗತ್ತಿನ ಆತ್ಮವೆನಿಸಿರುವ ಬೇಸಾಯದಲ್ಲಿ ತೊಡಗಿಸಿಕೊಳ್ಳುವುದರಿಂದ ಆಯಾ ಪ್ರದೇಶದ ಸಂಸ್ಕೃತಿ ಉಳಿಯಲು ಸಾಧ್ಯವಾಗುತ್ತದೆ ಎಂದು ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಹ ಪ್ರಾಧ್ಯಾಪಕ ಡಾ| ದಿವಾ ಕೊಕ್ಕಡ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನ ತುಳು ಸಂಘದ ಆಶ್ರಯದಲ್ಲಿ ನಡೆದ ‘ಆಟಿ ಒಂಜಿ ನೆಂಪು’ ಕಾರ್ಯಕ್ರಮವನ್ನು ಚೆನ್ನೆಮಣೆ ಆಟ ಆಡುವುದರೊಂದಿಗೆ ಉದ್ಘಾಟಿಸಿ ಮಾತನಾಡುತ್ತಾ, ಆಧುನೀಕರಣ ಜೀವನ ಶೈಲಿಯನ್ನು ಬದಲಾಯಿಸುತ್ತಿದೆ. ಕೃಷಿ, ಸಂಸ್ಕೃತಿ, ಪರಿಸರ ಎಲ್ಲವೂ ನಾಶವಾಗುತ್ತಿದೆ. ಆಟಿ ತಿಂಗಳಲ್ಲಿ ಜನರಿಗೆ ಆಹಾರದ ಕೊರತೆಯಾದಾಗ ಪ್ರಕೃತಿಯಲ್ಲಿ ಸಿಗುವ ಎಲೆಗಳನ್ನು, ಗೆಡ್ಡೆಗಳನ್ನು ತಿಂದು ಹಸಿವನ್ನು ನೀಗಿಸುತ್ತಿದ್ದರು. ಇದರಿಂದ ದೇಹದ ಆರೋಗ್ಯವನ್ನು ಕಾಪಾಡಿಕೊಂಡಿದ್ದರಲ್ಲದೆ ರೋಗ ರುಜಿನಗಳಿಂದ ಮುಕ್ತರಾಗಿದ್ದರು. ಜನಪದ ಎನ್ನುವುದು ಜ್ಞಾನಪದವಾಗಿದ್ದು ಬದುಕುವ ಕಲೆಯನ್ನು ತಿಳಿಸುವ ಪ್ರಕಾರವಾಗಿದೆ ಎಂದರು.

ವಿದ್ಯಾರ್ಥಿಗಳಿಗೆ ಚೆನ್ನೆಮಣೆ ಆಟ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದ್ದು ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಕಾಲೇಜಿನ ಉಪಪ್ರಾಂಶುಪಾಲರಾದ ವಿಷ್ಣುಪ್ರಕಾಶ್ ಎಂ ಅಧ್ಯಕ್ಷತೆ ವಹಿಸಿದ್ದರು. ತುಳು ಸಂಘದ ಸಂಯೋಜಕರಾದ ಮಹಾಬಲ ಗೌಡ ಸ್ವಾಗತಿಸಿದರು. ಉಪನ್ಯಾಸಕ ಬೆಳಿಯಪ್ಪ ಕೆ ವಂದಿಸಿದರು. ಉಪನ್ಯಾಸಕಿ ಮೀನಾಕ್ಷಿ ಕಾರ್ಯಕ್ರಮ ನಿರೂಪಿಸಿದರು.

Related posts

ಕೆ. ವಸಂತ ಬಂಗೇರ ನಿಧನಕ್ಕೆ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಹಾಗೂ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಅಂತಿಮ ನಮನ

Suddi Udaya

ಉಜಿರೆ: ಎಸ್.ಡಿ.ಎಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ “ಸ್ಫೂರ್ತಿದಾಯಕ ವ್ಯಕ್ತಿತ್ವ” ಕಾರ್ಯಕ್ರಮ

Suddi Udaya

ಅತ್ಯುತ್ತಮ ಪ್ರವಾಸಿ ತಾಣಗಳ ಸ್ಪರ್ಧೆಯಲ್ಲಿ ಕುತ್ಲೂರಿನ ಹರೀಶ್ ಡಾಕಯ್ಯ ಮತ್ತು ಶಿವರಾಜ್ ಅಂಚನ್ ರವರಿಗೆ ಪ್ರಶಸ್ತಿ: ದ.ಕ. ಮತ್ತು ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಗೌರರ್ವಾಪಣೆ

Suddi Udaya

ಮುಂಡಾಜೆ: ಯುವವಾಹಿನಿ ಬೆಳ್ತಂಗಡಿ ಇದರ ಆಶ್ರಯದಲ್ಲಿ ಪರೀಕ್ಷೆಯ ಪೂರ್ವ ತಯಾರಿಕೆಯ ಬಗ್ಗೆ ಕಾರ್ಯಾಗಾರ “ದೀವಿಗೆ “

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Suddi Udaya
error: Content is protected !!