22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಡ್ತಿಕಲ್ಲು: ಆಧಾರ್ ನೋಂದಣಿ-ತಿದ್ದುಪಡಿ ಶಿಬಿರದ ಉದ್ಘಾಟನೆ

ವೇಣೂರು: ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇವರ ನೇತೃತ್ವದಲ್ಲಿ ಮೂಡುಕೋಡಿಯ ನಡ್ತಿಕಲ್ಲು ಶ್ರೀರಾಮ ಭಜನ ಮಂಡಳಿ ಇದರ ಸಹಭಾಗಿತ್ವದಲ್ಲಿ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಮೇಳವು ಆ.12ರಂದು ಮೂಡುಕೋಡಿಯ ನಡ್ತಿಕಲ್ಲು ಶ್ರೀರಾಮ ಭಜನ ಮಂದಿರದಲ್ಲಿ ಉದ್ಘಾಟನೆಗೊಂಡಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋ.ಯ ಗುರುವಾಯನಕೆರೆ ಯೋಜನಾಧಿಕಾರಿ ದಯಾನಂದ ಅವರು ಕಾರ್ಯಕ್ರಮ ಉದ್ಘಾಟಿಸಿ, ಸರಕಾರ ತರುವ ಹಲವಾರು ಜನಪರ ಯೋಜನೆಗಳನ್ನು ಜನರಿಗೆ ತಲುಪಿಸುವುದು ಸವಾಲಿನ ಕೆಲಸವಾಗಿದೆ. ಇಂತಹ ಶಿಬಿರಗಳ ಮೂಲಕ ಗ್ರಾಮೀಣ ಭಾಗದ ಜನರು ತಮ್ಮ ದಾಖಲೆಗಳನ್ನು ನವೀಕರಣ ಮಾಡಲು ಸುಲಭಸಾಧ್ಯವಾಗಲಿದ್ದು, ಸರಕಾರಿ ಯೋಜನೆಗಳನ್ನು ಪಡೆಯಲು ಸಾಧ್ಯವಾಗುತ್ತದೆ ಎಂದರು.

ವೇಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಸುಂದರ ಹೆಗ್ಡೆ ಬಿ.ಇ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವೇಣೂರು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನ ಮೆನೇಜರ್ ವಿಶ್ವೇಶ್ವರ್, ನಡ್ತಿಕಲ್ಲು ಶ್ರೀರಾಮ ಭಜನ ಮಂಡಳಿ ಅಧ್ಯಕ್ಷ ಪ್ರವೀಣ್ ಆಚಾರ್ಯ, ಅಂಚೆ ಇಲಾಖೆಯ ಹರೀಶ್ ಕಾಶಿಪಟ್ಣ, ವೇಣೂರು ಗ್ರಾ.ಪಂ. ಸದಸ್ಯರಾದ ಉಮೇಶ್ ಎನ್., ವೀಣಾ ದೇವಾಡಿಗ, ಮೂಡುಕೋಡಿ ಹಾಲು ಉ.ಸ. ಸಂಘದ ಅಧ್ಯಕ್ಷರಾದ ಪ್ರಕಾಶ್ ಭಟ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಬೃಂದಾವನ ಸಂಜೀವಿನಿ ಮಹಿಳಾ ಒಕ್ಕೂಟ ಮತ್ತು ಗ್ರಾ.ಪಂ. ಕುಕ್ಕೇಡಿ ವತಿಯಿಂದ ನರೇಗಾ ಫಲಾನುಭವಿಗಳಿಗೆ ಗಿಡ ವಿತರಣೆ

Suddi Udaya

ಗುರುವಾಯನಕೆರೆ: ಮಹಿಳೆಗೆ ಜೀವಬೆದರಿಕೆ, ಹಲ್ಲೆ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಅಂಗವಾಗಿ ಬೆಳ್ತಂಗಡಿ ತಾ.ಪಂ. ನಲ್ಲಿ ಬಾಲ ಕಾರ್ಮಿಕ ನಿರ್ಮೂಲನೆ ಕುರಿತು ಪ್ರಮಾಣ ವಚನ

Suddi Udaya

ಅ. 24: ಕೊಕ್ಕಡ ಶ್ರೀ ಮಹಾಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಕಳೆಂಜ: ಶಾಲೆತ್ತಡ್ಕ ಸರಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಕುಂಟಿನಿ ಸ.ಕಿ.ಪ್ರಾ. ಶಾಲೆಯ ಎಸ್.ಡಿ.ಎಮ್.ಸಿ. ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಪವಿತ್ರ, ಉಪಾಧ್ಯಕ್ಷರಾಗಿ ಇಲ್ಯಾಸ್ ಆಯ್ಕೆ

Suddi Udaya
error: Content is protected !!