23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಡ್ತಿಕಲ್ಲು: ಆಧಾರ್ ನೋಂದಣಿ-ತಿದ್ದುಪಡಿ ಶಿಬಿರದ ಉದ್ಘಾಟನೆ

ವೇಣೂರು: ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇವರ ನೇತೃತ್ವದಲ್ಲಿ ಮೂಡುಕೋಡಿಯ ನಡ್ತಿಕಲ್ಲು ಶ್ರೀರಾಮ ಭಜನ ಮಂಡಳಿ ಇದರ ಸಹಭಾಗಿತ್ವದಲ್ಲಿ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಮೇಳವು ಆ.12ರಂದು ಮೂಡುಕೋಡಿಯ ನಡ್ತಿಕಲ್ಲು ಶ್ರೀರಾಮ ಭಜನ ಮಂದಿರದಲ್ಲಿ ಉದ್ಘಾಟನೆಗೊಂಡಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋ.ಯ ಗುರುವಾಯನಕೆರೆ ಯೋಜನಾಧಿಕಾರಿ ದಯಾನಂದ ಅವರು ಕಾರ್ಯಕ್ರಮ ಉದ್ಘಾಟಿಸಿ, ಸರಕಾರ ತರುವ ಹಲವಾರು ಜನಪರ ಯೋಜನೆಗಳನ್ನು ಜನರಿಗೆ ತಲುಪಿಸುವುದು ಸವಾಲಿನ ಕೆಲಸವಾಗಿದೆ. ಇಂತಹ ಶಿಬಿರಗಳ ಮೂಲಕ ಗ್ರಾಮೀಣ ಭಾಗದ ಜನರು ತಮ್ಮ ದಾಖಲೆಗಳನ್ನು ನವೀಕರಣ ಮಾಡಲು ಸುಲಭಸಾಧ್ಯವಾಗಲಿದ್ದು, ಸರಕಾರಿ ಯೋಜನೆಗಳನ್ನು ಪಡೆಯಲು ಸಾಧ್ಯವಾಗುತ್ತದೆ ಎಂದರು.

ವೇಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಸುಂದರ ಹೆಗ್ಡೆ ಬಿ.ಇ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವೇಣೂರು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನ ಮೆನೇಜರ್ ವಿಶ್ವೇಶ್ವರ್, ನಡ್ತಿಕಲ್ಲು ಶ್ರೀರಾಮ ಭಜನ ಮಂಡಳಿ ಅಧ್ಯಕ್ಷ ಪ್ರವೀಣ್ ಆಚಾರ್ಯ, ಅಂಚೆ ಇಲಾಖೆಯ ಹರೀಶ್ ಕಾಶಿಪಟ್ಣ, ವೇಣೂರು ಗ್ರಾ.ಪಂ. ಸದಸ್ಯರಾದ ಉಮೇಶ್ ಎನ್., ವೀಣಾ ದೇವಾಡಿಗ, ಮೂಡುಕೋಡಿ ಹಾಲು ಉ.ಸ. ಸಂಘದ ಅಧ್ಯಕ್ಷರಾದ ಪ್ರಕಾಶ್ ಭಟ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಡಿ.2: ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಬೆಳ್ತಂಗಡಿ ಕೆಂಬರ್ಜೆ ನಿವಾಸಿ ಗುರುವಪ್ಪ ಪೂಜಾರಿ ನಿಧನ

Suddi Udaya

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ ದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಮಚ್ಚಿನ: ಅಪಾಯದಂಚಿನಲ್ಲಿರುವ ವಿದ್ಯುತ್ ಕಂಬ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಸಂಚಾರ ನಿಯಂತ್ರಣ ಮತ್ತು ರಸ್ತೆ ಸುರಕ್ಷತಾ ಮಾಹಿತಿ ಕಾರ್ಯಾಗಾರ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕ್ಯಾಂಪೋರಿಯಲ್ಲಿ ಸಮಗ್ರ ಪ್ರಶಸ್ತಿ ಮುಡಿಗೇರಿಸಿಕೊಂಡ ಬೆಳ್ತಂಗಡಿ ಸ್ಥಳೀಯ ಸಂಸ್ಥೆ

Suddi Udaya
error: Content is protected !!