25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಜಿರೆ: ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಬಜಿರೆ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಜಿರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾದ ದಿನೇಶ್ ಪಿ. ನೆರವೇರಿಸಿದರು.

ಈ ಸಂದರ್ಭ “ನಮ್ಮ ಶಾಲೆ ನಮ್ಮ ಕೊಡುಗೆ” ಎನ್ನುವ ವಿನೂತನ ಪರಿಕಲ್ಪನೆಯಡಿ 2013-14ನೇ ಸಾಲಿನ ಹಳೆ ವಿದ್ಯಾರ್ಥಿಗಳು ಶಾಲೆಯಲ್ಲಿರುವ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶಾಲೆಗೆ ದೇಣಿಗೆಯನ್ನು ಮಾನ್ಯ ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಮುಖ್ಯ ಶಿಕ್ಷಕರಿಗೆ ಹಸ್ತಾಂತರಿಸಿದರು.

ವೇದಿಕೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷರು, ಗ್ರಾಮ ಪಂಚಾಯತ್ ಸದಸ್ಯರಾದ ಲೋಕಯ್ಯ ಪೂಜಾರಿ, ಸುನಿಲ್ ಕುಮಾರ್, ಶ್ರೀಮತಿ ಮಲ್ಲಿಕಾ ಕಾಶಿನಾಥ್, ಸುಜಾತ, ಗ್ರಾಪಂ ಮಾಜಿ ಅಧ್ಯಕ್ಷರು ಹಾಗೂ ಎಸ್‌ಡಿಎಂಸಿ ಮಾಜಿ ಅಧ್ಯಕ್ಷರಾದ ಸತೀಶ್ ಹೆಗ್ಡೆ, ಮಾಜಿ ಎಸ್‌ಡಿಎಂಸಿ ಅಧ್ಯಕ್ಷರಾದ ಶಿವಾನಂದ ಗೌಡ, ತಾಯಂದಿರ ಸಮಿತಿ ಅಧ್ಯಕ್ಷರಾದ ಜಯಶ್ರೀ, ಮುಖ್ಯ ಶಿಕ್ಷಕಿ ಕಮಲಾಜಿ ಎಸ್. ಜೈನ್, ಹಳೆ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ಪದ್ಮಾವತಿ, ಎಸ್‌ಬಿಸಿಯ ಉಪಾಧ್ಯಕ್ಷರಾದ ನವೀನ್ ಪಚ್ಚೇರಿ ಉಪಸ್ಥಿತರಿದ್ದರು.

ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಈ ಸಂದರ್ಭ ಎಲ್ಲಾ ಶಿಕ್ಷಕ ವೃಂದದವರು, ಪೋಷಕರು, ಹಳೆ ವಿದ್ಯಾರ್ಥಿಗಳು, ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಕುಣಿತ ಭಜನಾ ತರಬೇತಿ ನೀಡುತ್ತಿರುವ ತರಬೇತಿದಾರರುಗಳ ಸಭೆ: ಪ್ರಥಮ ಬಾರಿಗೆ ಭಜನೆಯಲ್ಲಿ ನಿನ್ನೆ ಇಂದು ನಾಳೆಯ ಬಗ್ಗೆ ಗಂಭೀರ ಚರ್ಚೆ

Suddi Udaya

ಅ.31: ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ದೀಪಾವಳಿ ದೋಸೆಹಬ್ಬ ಹಾಗೂ ಗೋ ಪೂಜಾ ಉತ್ಸವ

Suddi Udaya

ವಿದ್ಯಾಮಾತಾದ ವಿದ್ಯಾರ್ಥಿಗಳಿಬ್ಬರು ಕೆ -ಸೆಟ್ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್‌ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಶ್ರೀ.ಧ.ಮಂ. ಕಾಲೇಜಿನಲ್ಲಿ ‘ತೆರಿಗೆಯ ಮೂಲಭೂತ ಅಂಶಗಳು’ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮ

Suddi Udaya

ರಾಷ್ಟ್ರ ಪ್ರಶಸ್ತಿ ವಿಜೇತ, ನಿರ್ದೇಶಕ ಚೇತನ್ ಮುಂಡಾಡಿ ರವರ ಬಹುಭಾಷಾ ಚಿತ್ರಕ್ಕೆ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಭವನದಲ್ಲಿ ಆಡಿಷನ್

Suddi Udaya
error: Content is protected !!