25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಅಮೃತ ಗ್ರಾ. ಪಂ. ಹಾಗೂ ಅಮೃತ ಸರೋವರದಲ್ಲಿ ಸ್ವಾತಂತ್ರೋತ್ಸವ ಆಚರಣೆ: ನಿವೃತ್ತ ಸೈನಿಕರಿಗೆ ಗೌರವಾರ್ಪಣೆ

ಕೊಕ್ಕಡ ಅಮೃತ ಗ್ರಾಮಪಂಚಾಯತ್ ನಲ್ಲಿ ಸ್ವಾತಂತ್ರೋತ್ಸವ ಧ್ವಜಾರೋಹಣವನ್ನು ನಿವೃತ್ತ ಸೈನಿಕರು ಮುಂಡೂರುಪಲಿಕೆಯ ನಾಗೇಶ್ ರವರು ನೆರವೇರಿಸಿ ಶುಭ ಹಾರೈಸಿದರು.

ಬಳಿಕ ಅಮೃತ ಪಂಚಾಯತ್ ಅಮೃತ ಸರೋವರದಲ್ಲಿ ಧ್ವಜಾರೋಹಣವನ್ನು ಗ್ರಾಮಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿ ನೆರವೇರಿಸಿದರು.

ಈ ಸಂದರ್ಭ ನಿವೃತ್ತ ಸೈನಿಕರದ ನಾಗೇಶ್ ರವರನ್ನು ಹಾಗೂ ನಿವೃತ್ತ ಸೈನಿಕರು ಕೊಕ್ಕಡ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್ ರವರನ್ನು ಪಂಚಾಯತ್ ವತಿಯಿಂದ ಗೌರವಿಸಲಾಯಿತು.

ನಿವೃತ್ತ ಸೈನಿಕ ನಾಗೇಶರವರು ಮಾತನಾಡಿ ಗ್ರಾಮದ ಸರ್ವೋತೋಮೂಖ ಅಭಿವೃದ್ಧಿ ಗಳಿಂದ ದೇಶದ ಅಭಿವೃದ್ಧಿ ಸಾಧ್ಯ ಎಂದು ನುಡಿದರು.

ಪಂಚಾಯತ್ ಅಧ್ಯಕ್ಷರು ಮಾತನಾಡಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಪಂಚಾಯತ್ ಮಾಜಿ ಅಧ್ಯಕ್ಷ ಕುಶಾಲಪ್ಪ ಪುಡಿಕೆತ್ತುರ್, ಪಂಚಾಯತ್ ಉಪಾಧ್ಯಕ್ಷರು ಪ್ರಭಾಕರ್ ಗೌಡ, ನಿಕಟಪೂರ್ವ ಅಧ್ಯಕ್ಷರು ಯೋಗೀಶ್ ಆಳಂಬಿಲ, ಉಪಾಧ್ಯಕ್ಷರು ಶ್ರೀಮತಿ ಪವಿತ್ರ, ಸದಸ್ಯರುಗಳಾದ ಜಗದೀಶ್, ಪುರಷೋತ್ತಮ, ವಿಶ್ವನಾಥ್, ಶರತ್ ಕುಮಾರ್.,ವನಜಾಕ್ಷಿ , ಪಂಚಾಯತ್ ಕಾರ್ಯದರ್ಶಿ, ಸಿಬ್ಬಂದಿಗಳು ಉಪಸ್ಥಿತರಿದ್ದರು..

ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಸ್ವಾಗತಿಸಿ ವಂದಿಸಿದರು.

Related posts

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲಾ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ಪ್ರಾ.ಸ. ಕೃಷಿ ಮತ್ತು ಭೂ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿಗೆ ಸಂಜೀವ ಪೂಜಾರಿ ನಾಮನಿರ್ದೇಶನ

Suddi Udaya

ಶಿರ್ಲಾಲು: ಶ್ರೀ ರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ಭಜನಾ ಕಾರ್ಯಕ್ರಮ

Suddi Udaya

ಗುರುವಾಯನಕೆರೆ : ಯಡೂ೯ರು ಎಂಬಲ್ಲಿ ಮನೆಯೊಳಗಡೆ ಯುವಕ ಕವಚಿಬಿದ್ದ ಸ್ಥಿತಿಯಲ್ಲಿ ಪತ್ತೆ: ತಲೆಯ ಭಾಗದಿಂದ ನೆಲದಲ್ಲಿ ಹರಿದು ಹೋದ ನೆತ್ತರು

Suddi Udaya

ಕಣಿಯೂರು ಶೌರ್ಯ ವಿಪತ್ತು ನಿರ್ವಹಣೆ ಘಟಕದ ಮಾಸಿಕ ಸಭೆ

Suddi Udaya

ಬೆಳಾಲು: ಉಷಾ ಎನ್ ಉಡುಪ ಹೆಸರಿನ ಶಾಶ್ವತ ದತ್ತಿ ನಿಧಿ ವಿತರಣಾ ಕಾರ್ಯಕ್ರಮ

Suddi Udaya
error: Content is protected !!