ಕೊಕ್ಕಡ ಗ್ರಾ. ಪಂ. ನಲ್ಲಿ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಸೌತಡ್ಕ ಕ್ಷೇತ್ರದ ವತಿಯಿಂದ ಗೌರವಾರ್ಪಣೆ

Suddi Udaya

ಕೊಕ್ಕಡ ಗ್ರಾಮ ಪಂಚಾಯತ್ ನ ನೂತನವಾಗಿ ಆಯ್ಕೆಯಾದ ಅಧ್ಯಕ್ಷೆ ಶ್ರೀಮತಿ ಬೇಬಿ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆ ಯಾದ ಪ್ರಭಾಕರ ಮಲ್ಲಿಗೆ ಮಜಲು ಇವರು ಇಂದು ಸ್ವಾತಂತ್ರ್ಯ ಉತ್ಸವ ದ ಧ್ವಜಾರೋಹಣವನ್ನು ನೆರವೇರಿಸಿ ಸೌತಡ್ಕ ಶ್ರೀ ಮಹಾಗಣಪತಿಯ ದರ್ಶನಕ್ಕೆ ಬಂದರು. ಆ ಸಂದರ್ಭದಲ್ಲಿ ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳನ್ನು ಕ್ಷೇತ್ರದ ವತಿಯಿಂದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ ಶಾಲು ಹೊದಿಸಿ ಪ್ರಸಾದ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರಾದ ಪುರಂದರ ಕಡೀರ, ಪ್ರಶಾಂತ್ ಪೂವಾಜೆ, ಶ್ರೀಮತಿ ಹೇಮಾವತಿ ಶಿವಾನಂದ, ಶ್ರೀಮತಿ ಯಶೋಧ ಉಮೇಶ್ ಶಬರಾಡಿ, ಅರ್ಚಕರು ಶ್ರೀ ಸುಬ್ರಮಣ್ಯ ತೋಡ್ತಿಲ್ಲಾಯರು ಮತ್ತು ದೇವಳದ ಸಿಬ್ಬಂದಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Leave a Comment

error: Content is protected !!