27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಜಿರೆ: ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಬಜಿರೆ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಜಿರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾದ ದಿನೇಶ್ ಪಿ. ನೆರವೇರಿಸಿದರು.

ಈ ಸಂದರ್ಭ “ನಮ್ಮ ಶಾಲೆ ನಮ್ಮ ಕೊಡುಗೆ” ಎನ್ನುವ ವಿನೂತನ ಪರಿಕಲ್ಪನೆಯಡಿ 2013-14ನೇ ಸಾಲಿನ ಹಳೆ ವಿದ್ಯಾರ್ಥಿಗಳು ಶಾಲೆಯಲ್ಲಿರುವ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶಾಲೆಗೆ ದೇಣಿಗೆಯನ್ನು ಮಾನ್ಯ ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಮುಖ್ಯ ಶಿಕ್ಷಕರಿಗೆ ಹಸ್ತಾಂತರಿಸಿದರು.

ವೇದಿಕೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷರು, ಗ್ರಾಮ ಪಂಚಾಯತ್ ಸದಸ್ಯರಾದ ಲೋಕಯ್ಯ ಪೂಜಾರಿ, ಸುನಿಲ್ ಕುಮಾರ್, ಶ್ರೀಮತಿ ಮಲ್ಲಿಕಾ ಕಾಶಿನಾಥ್, ಸುಜಾತ, ಗ್ರಾಪಂ ಮಾಜಿ ಅಧ್ಯಕ್ಷರು ಹಾಗೂ ಎಸ್‌ಡಿಎಂಸಿ ಮಾಜಿ ಅಧ್ಯಕ್ಷರಾದ ಸತೀಶ್ ಹೆಗ್ಡೆ, ಮಾಜಿ ಎಸ್‌ಡಿಎಂಸಿ ಅಧ್ಯಕ್ಷರಾದ ಶಿವಾನಂದ ಗೌಡ, ತಾಯಂದಿರ ಸಮಿತಿ ಅಧ್ಯಕ್ಷರಾದ ಜಯಶ್ರೀ, ಮುಖ್ಯ ಶಿಕ್ಷಕಿ ಕಮಲಾಜಿ ಎಸ್. ಜೈನ್, ಹಳೆ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ಪದ್ಮಾವತಿ, ಎಸ್‌ಬಿಸಿಯ ಉಪಾಧ್ಯಕ್ಷರಾದ ನವೀನ್ ಪಚ್ಚೇರಿ ಉಪಸ್ಥಿತರಿದ್ದರು.

ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಈ ಸಂದರ್ಭ ಎಲ್ಲಾ ಶಿಕ್ಷಕ ವೃಂದದವರು, ಪೋಷಕರು, ಹಳೆ ವಿದ್ಯಾರ್ಥಿಗಳು, ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಕಾರುಗಳ ನಡುವೆ ಅಪಘಾತ:

Suddi Udaya

ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮಾ.1: ಉಜಿರೆಯಲ್ಲಿ ಅನು ಇಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಶುಭಾರಂಭ

Suddi Udaya

ಬೆಳ್ತಂಗಡಿ: ಹೊಸ ನ್ಯಾಯಾಲಯ ಸಂಕೀರ್ಣ ಕಟ್ಟಡ ಕಾಮಗಾರಿಯ ಬಗ್ಗೆ ಸ್ಪೀಕರ್ ಖಾದರ್ ರೊಂದಿಗೆ ಚರ್ಚೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ಗಣೇಶ್ ಗೌಡ ನೆಲ್ಲಿಪಲ್ಕೆ ಬೆಂಬಲ

Suddi Udaya

ಕಳಿಯ: ಮನೆಗೆ ನುಗ್ಗಿದ್ದ ಕಳ್ಳರು : ಸುಮಾರು ರೂ.46450 ಮೌಲ್ಯದ ಸೊತ್ತುಗಳು ಕಳವು

Suddi Udaya
error: Content is protected !!