April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮುಗುಳಿ ಸ.ಹಿ.ಪ್ರಾ ಶಾಲೆಗೆ ರವಿಚಂದ್ರ ಗೌಡ ದಂಪತಿಯಿಂದ ಧ್ವಜಸ್ತಂಭ ಕೊಡುಗೆ

ಬೆಳ್ತಂಗಡಿ : ಸ.ಹಿ.ಪ್ರಾ..ಶಾಲೆ ಮುಗುಳಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ನಿವೃತ್ತ ಸೈನಿಕರು ಹಾಗೂ ಎಸ್.ಬಿ.ಐ ಉದ್ಯೋಗಿ ದಾಸರಬೆಟ್ಟು ರವಿಚಂದ್ರ ಗೌಡ ಮತ್ತು ಶ್ರೀಮತಿ ಶಾರದಾ ದಂಪತಿಗಳು ಶಾಲೆಗೆ ಧ್ವಜಸ್ಥಂಭವನ್ನು ಕೊಡುಗೆಯಾಗಿ ನೀಡಿ ಅದರ ಉದ್ಘಾಟನೆಯನ್ನು ನೆರವೇರಿಸಿ, ಧ್ವಜಾರೋಹಣ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಈ ಸಂದರ್ಭ ಮಾತನಾಡಿದ ರವಿಚಂದ್ರ ಗೌಡರವರರು ಸ್ವಾತಂತ್ರ್ಯೋತ್ಸವದ ಮಹತ್ವವನ್ನು ತಿಳಿಸಿಕೊಟ್ಟರು. ಈ ಸಂದರ್ಭದಲ್ಲಿ ಮುಗುಳಿ ನಾರಾಯಣ್ ರಾವ್, ಹಳೆವಿದ್ಯಾರ್ಥಿ ಸನತ್ ಕುಮಾರ್ ಜೈನ್ ಅನಿಸಿಕೆ ವ್ಯಕ್ತಪಡಿಸಿದರು.
ಈ ಸಂದರ್ಭ ಧ್ವಜಸ್ತಂಭ ಕೊಡುಗೆ ನೀಡಿದ ರವಿಚಂದ್ರ ಗೌಡ ಹಾಗೂ ಶ್ರೀಮತಿ ಶಾರದಾ ದಂಪತಿಯನ್ನು ಗೌರವಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಲೀನಾ ಸ್ವಾಗತಿಸಿದರು. ಹಿರಿಯ ಶಿಕ್ಷಕಿ ಸವಿತಾ ಕೆ. ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿಯರಾದ ಶಶಿಕಲಾ, ಸ್ವಾತಿ ಧನ್ಯವಾದವಿತ್ತರು. ಈ ಸಂದರ್ಭ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಬಿಸಿಯೂಟ ಸಿಬ್ಬಂದಿಗಳು, ಅಂಗನವಾಡಿ ಶಿಕ್ಷಕಿ ಪದ್ಮಾವತಿ ಹಾಗೂ ಪೋಷಕರು, ಊರವರು ಉಪಸ್ಥಿತರಿದ್ದರು.

Related posts

ಆ. 3- 17: ಗುರುವಾಯನಕೆರೆ ಶಿವಂ ಟೆಕ್ಸ್‌ಟೈಲ್ಸ್‌ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್: ಅಮೋಘ 10% ರಿಂದ 40% ವರೆಗೆ ಗ್ರಾಹಕರಿಗೆ ರಿಯಾಯಿತಿ

Suddi Udaya

ಎಲ್ ಸಿ ಆರ್ ವಿದ್ಯಾ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ಮೇಲೆ ದೌರ್ಜನ್ಯ ಮಾಡುತ್ತಿರುವ ಚಿಕ್ಕಮಗಳೂರು ಜಿಲ್ಲೆಯ ಮೀನಾ ನಾಗರಾಜ್ ಮತ್ತು ಅಪರ ಜಿಲ್ಲಾಧಿಕಾರಿ ಕನಕರೆಡ್ಡಿ ಇವರನ್ನು ಕೂಡಲೇ ವರ್ಗಾವಣೆ ಮಾಡಿ ನ್ಯಾಯ ಒದಗಿಸಿಕೊಡುವಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ರವರಿಗೆ ಬೆಳ್ತಂಗಡಿ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿ ಸಂಘದಿಂದ ಮನವಿ

Suddi Udaya

ಬೆಳ್ತಂಗಡಿ: ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಪರ ತೆಂಕಕಾರಂದೂರುನಲ್ಲಿ ಮಹಿಳಾ ಕಾರ್ಯಕರ್ತರಿಂದ ಮತಯಾಚನೆ

Suddi Udaya

ಎಸ್‌ಡಿಎಂ ಪಿಜಿ ಕಾಲೇಜಿನಲ್ಲಿ ಮಾಸ್ಟರ್ಸ್ ಫ್ಯಾಶನ್ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಶ್ರೀ ಕ್ಷೇ. ಧ.ಗ್ರಾ. ಯೋಜನೆ ಬೆಳ್ತಂಗಡಿ ವಲಯದ ಭಜನಾ ಮಂಡಳಿಯ ಸಭೆ

Suddi Udaya
error: Content is protected !!