ಬೆಳ್ತಂಗಡಿ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮುಗುಳಿ ಸ.ಹಿ.ಪ್ರಾ ಶಾಲೆಗೆ ರವಿಚಂದ್ರ ಗೌಡ ದಂಪತಿಯಿಂದ ಧ್ವಜಸ್ತಂಭ ಕೊಡುಗೆ

Suddi Udaya

ಬೆಳ್ತಂಗಡಿ : ಸ.ಹಿ.ಪ್ರಾ..ಶಾಲೆ ಮುಗುಳಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ನಿವೃತ್ತ ಸೈನಿಕರು ಹಾಗೂ ಎಸ್.ಬಿ.ಐ ಉದ್ಯೋಗಿ ದಾಸರಬೆಟ್ಟು ರವಿಚಂದ್ರ ಗೌಡ ಮತ್ತು ಶ್ರೀಮತಿ ಶಾರದಾ ದಂಪತಿಗಳು ಶಾಲೆಗೆ ಧ್ವಜಸ್ಥಂಭವನ್ನು ಕೊಡುಗೆಯಾಗಿ ನೀಡಿ ಅದರ ಉದ್ಘಾಟನೆಯನ್ನು ನೆರವೇರಿಸಿ, ಧ್ವಜಾರೋಹಣ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಈ ಸಂದರ್ಭ ಮಾತನಾಡಿದ ರವಿಚಂದ್ರ ಗೌಡರವರರು ಸ್ವಾತಂತ್ರ್ಯೋತ್ಸವದ ಮಹತ್ವವನ್ನು ತಿಳಿಸಿಕೊಟ್ಟರು. ಈ ಸಂದರ್ಭದಲ್ಲಿ ಮುಗುಳಿ ನಾರಾಯಣ್ ರಾವ್, ಹಳೆವಿದ್ಯಾರ್ಥಿ ಸನತ್ ಕುಮಾರ್ ಜೈನ್ ಅನಿಸಿಕೆ ವ್ಯಕ್ತಪಡಿಸಿದರು.
ಈ ಸಂದರ್ಭ ಧ್ವಜಸ್ತಂಭ ಕೊಡುಗೆ ನೀಡಿದ ರವಿಚಂದ್ರ ಗೌಡ ಹಾಗೂ ಶ್ರೀಮತಿ ಶಾರದಾ ದಂಪತಿಯನ್ನು ಗೌರವಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಲೀನಾ ಸ್ವಾಗತಿಸಿದರು. ಹಿರಿಯ ಶಿಕ್ಷಕಿ ಸವಿತಾ ಕೆ. ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿಯರಾದ ಶಶಿಕಲಾ, ಸ್ವಾತಿ ಧನ್ಯವಾದವಿತ್ತರು. ಈ ಸಂದರ್ಭ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಬಿಸಿಯೂಟ ಸಿಬ್ಬಂದಿಗಳು, ಅಂಗನವಾಡಿ ಶಿಕ್ಷಕಿ ಪದ್ಮಾವತಿ ಹಾಗೂ ಪೋಷಕರು, ಊರವರು ಉಪಸ್ಥಿತರಿದ್ದರು.

Leave a Comment

error: Content is protected !!