27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮುಗುಳಿ ಸ.ಹಿ.ಪ್ರಾ ಶಾಲೆಗೆ ರವಿಚಂದ್ರ ಗೌಡ ದಂಪತಿಯಿಂದ ಧ್ವಜಸ್ತಂಭ ಕೊಡುಗೆ

ಬೆಳ್ತಂಗಡಿ : ಸ.ಹಿ.ಪ್ರಾ..ಶಾಲೆ ಮುಗುಳಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ನಿವೃತ್ತ ಸೈನಿಕರು ಹಾಗೂ ಎಸ್.ಬಿ.ಐ ಉದ್ಯೋಗಿ ದಾಸರಬೆಟ್ಟು ರವಿಚಂದ್ರ ಗೌಡ ಮತ್ತು ಶ್ರೀಮತಿ ಶಾರದಾ ದಂಪತಿಗಳು ಶಾಲೆಗೆ ಧ್ವಜಸ್ಥಂಭವನ್ನು ಕೊಡುಗೆಯಾಗಿ ನೀಡಿ ಅದರ ಉದ್ಘಾಟನೆಯನ್ನು ನೆರವೇರಿಸಿ, ಧ್ವಜಾರೋಹಣ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಈ ಸಂದರ್ಭ ಮಾತನಾಡಿದ ರವಿಚಂದ್ರ ಗೌಡರವರರು ಸ್ವಾತಂತ್ರ್ಯೋತ್ಸವದ ಮಹತ್ವವನ್ನು ತಿಳಿಸಿಕೊಟ್ಟರು. ಈ ಸಂದರ್ಭದಲ್ಲಿ ಮುಗುಳಿ ನಾರಾಯಣ್ ರಾವ್, ಹಳೆವಿದ್ಯಾರ್ಥಿ ಸನತ್ ಕುಮಾರ್ ಜೈನ್ ಅನಿಸಿಕೆ ವ್ಯಕ್ತಪಡಿಸಿದರು.
ಈ ಸಂದರ್ಭ ಧ್ವಜಸ್ತಂಭ ಕೊಡುಗೆ ನೀಡಿದ ರವಿಚಂದ್ರ ಗೌಡ ಹಾಗೂ ಶ್ರೀಮತಿ ಶಾರದಾ ದಂಪತಿಯನ್ನು ಗೌರವಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಲೀನಾ ಸ್ವಾಗತಿಸಿದರು. ಹಿರಿಯ ಶಿಕ್ಷಕಿ ಸವಿತಾ ಕೆ. ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿಯರಾದ ಶಶಿಕಲಾ, ಸ್ವಾತಿ ಧನ್ಯವಾದವಿತ್ತರು. ಈ ಸಂದರ್ಭ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಬಿಸಿಯೂಟ ಸಿಬ್ಬಂದಿಗಳು, ಅಂಗನವಾಡಿ ಶಿಕ್ಷಕಿ ಪದ್ಮಾವತಿ ಹಾಗೂ ಪೋಷಕರು, ಊರವರು ಉಪಸ್ಥಿತರಿದ್ದರು.

Related posts

ಪ್ರಪ್ರಥಮ ಬಾರಿಗೆ ಏಕಕಾಲದಲ್ಲಿ ಚಿತ್ರಮಂದಿರ ಮತ್ತು ಟಾಕೀಸ್ ಆ್ಯಪ್ ಒಟಿಟಿಯಲ್ಲಿ ಬಿಡುಗಡೆಗೊಳ್ಳುತ್ತಿರುವ “ಹೌದ್ದೋ ಹುಲಿಯ”

Suddi Udaya

ನಾಲ್ಕೂರು ಕುದ್ರೋಟ್ಟು ಪರಿಸರದಲ್ಲಿ ಗುಡ್ಡ ಕುಸಿತ, ರಸ್ತೆ ಬಂದ್

Suddi Udaya

ಮಡಂತ್ಯಾರು: ಬಿ ಎಂ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಸಭೆ

Suddi Udaya

ಬೆಳ್ತಂಗಡಿ: ವಿವಿಧ ಸೇತುವೆ ರಚನೆ ಕಾಮಗಾರಿಗಳಿಗೆ ರೂ. 6 ಕೋಟಿ 25 ಲಕ್ಷ ಅನುದಾನ ಸರ್ಕಾರದಿಂದ ಮಂಜೂರು: ರಕ್ಷಿತ್ ಶಿವರಾಮ್

Suddi Udaya

ಕಲ್ಮಂಜ: ಸಿದ್ದಬೈಲು ಪರಾರಿ ಸ.ಹಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಸುದ್ದಿ ಉದಯ ವಾರ ಪತ್ರಿಕೆ ದೀಪಾವಳಿ ವಿಶೇಷಾಂಕ ಹಾಗೂ ‘ಹೇ ಶಾರದೆ’ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya
error: Content is protected !!