22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮುಗುಳಿ ಸ.ಹಿ.ಪ್ರಾ ಶಾಲೆಗೆ ರವಿಚಂದ್ರ ಗೌಡ ದಂಪತಿಯಿಂದ ಧ್ವಜಸ್ತಂಭ ಕೊಡುಗೆ

ಬೆಳ್ತಂಗಡಿ : ಸ.ಹಿ.ಪ್ರಾ..ಶಾಲೆ ಮುಗುಳಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ನಿವೃತ್ತ ಸೈನಿಕರು ಹಾಗೂ ಎಸ್.ಬಿ.ಐ ಉದ್ಯೋಗಿ ದಾಸರಬೆಟ್ಟು ರವಿಚಂದ್ರ ಗೌಡ ಮತ್ತು ಶ್ರೀಮತಿ ಶಾರದಾ ದಂಪತಿಗಳು ಶಾಲೆಗೆ ಧ್ವಜಸ್ಥಂಭವನ್ನು ಕೊಡುಗೆಯಾಗಿ ನೀಡಿ ಅದರ ಉದ್ಘಾಟನೆಯನ್ನು ನೆರವೇರಿಸಿ, ಧ್ವಜಾರೋಹಣ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಈ ಸಂದರ್ಭ ಮಾತನಾಡಿದ ರವಿಚಂದ್ರ ಗೌಡರವರರು ಸ್ವಾತಂತ್ರ್ಯೋತ್ಸವದ ಮಹತ್ವವನ್ನು ತಿಳಿಸಿಕೊಟ್ಟರು. ಈ ಸಂದರ್ಭದಲ್ಲಿ ಮುಗುಳಿ ನಾರಾಯಣ್ ರಾವ್, ಹಳೆವಿದ್ಯಾರ್ಥಿ ಸನತ್ ಕುಮಾರ್ ಜೈನ್ ಅನಿಸಿಕೆ ವ್ಯಕ್ತಪಡಿಸಿದರು.
ಈ ಸಂದರ್ಭ ಧ್ವಜಸ್ತಂಭ ಕೊಡುಗೆ ನೀಡಿದ ರವಿಚಂದ್ರ ಗೌಡ ಹಾಗೂ ಶ್ರೀಮತಿ ಶಾರದಾ ದಂಪತಿಯನ್ನು ಗೌರವಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಲೀನಾ ಸ್ವಾಗತಿಸಿದರು. ಹಿರಿಯ ಶಿಕ್ಷಕಿ ಸವಿತಾ ಕೆ. ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿಯರಾದ ಶಶಿಕಲಾ, ಸ್ವಾತಿ ಧನ್ಯವಾದವಿತ್ತರು. ಈ ಸಂದರ್ಭ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಬಿಸಿಯೂಟ ಸಿಬ್ಬಂದಿಗಳು, ಅಂಗನವಾಡಿ ಶಿಕ್ಷಕಿ ಪದ್ಮಾವತಿ ಹಾಗೂ ಪೋಷಕರು, ಊರವರು ಉಪಸ್ಥಿತರಿದ್ದರು.

Related posts

ಲಾಯಿಲ: ಸಂವಿಧಾನ ಜಾಗೃತಿ ಜಾಥ

Suddi Udaya

ಬಾರ್ಯ ಗ್ರಾ.ಪಂ ನಲ್ಲಿ ಮಾನಸಿಕ ಆರೋಗ್ಯದ ಅರಿವು ಕಾರ್ಯಕ್ರಮ

Suddi Udaya

ಪುತ್ತೂರಿನ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಾಪತ್ರ ರವರು ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಹಾಗೂ ಗುರುವಾಯನಕರೆ ನವಶಕ್ತಿ ಮನೆಗೆ ಭೇಟಿ

Suddi Udaya

ಧರ್ಮಸ್ಥಳದಲ್ಲಿ ಯಾಂತ್ರೀಕೃತ ಕೃಷಿಗೆ ಚಾಲನೆ

Suddi Udaya

ಉಜಿರೆ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂಸೇವಕ ಭಾಸ್ಕರ ಆಚಾರ್ಯ ವಿಧಿವಶ

Suddi Udaya

ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ನ ಮಹಾಸಭೆ ಮತ್ತು ಮಾಹಿತಿ ಕಾರ್ಯಗಾರ

Suddi Udaya
error: Content is protected !!