25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆ: ಶಾಲಾ ವಿದ್ಯಾರ್ಥಿಗಳ ಅನುಪಸ್ಥಿತಿಯಲ್ಲಿ ಗ್ರಾ.ಪಂ ಅಧ್ಯಕ್ಷ, ಸದಸ್ಯರು ಮತ್ತು ಗ್ರಾಮಸ್ಥರಿಂದ ಸ್ವಾತಂತ್ರ್ಯೋತ್ಸವ ಆಚರಣೆ

ಪಟ್ರಮೆ: ಪಟ್ರಮೆಯ ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದಾಗಿ ನೊಂದ ಪೋಷಕರು ಕಳೆದ ಜುಲೈ 14 ರಂದು ಕ್ಷೇತ್ರ ಶಿಕ್ಷಣಾಧಿಕಾರಿಯವರಿಗೆ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಶಾಲಾ ವತಿಯಿಂದ ಹಾಗೂ ಊರಿನವರ ವತಿಯಿಂದ ಮನವಿ ಸಲ್ಲಿಸಿದ್ದರು.

ಈ ಸಂದರ್ಭದಲ್ಲಿ ಒಂದು ವಾರದೊಳಗೆ ಬದಲಿ ವ್ಯವಸ್ಥೆ ಮಾಡಿಕೊಡುವುದಾಗಿ ಅಧಿಕಾರಿಗಳು
ಭರವಸೆ ನೀಡಿದ್ದರು. ಆದರೆ ಇದುವರೆಗೂ ಅಧಿಕೃತ ಶಿಕ್ಷಕರು ಶಾಲೆಗೆ ಒದಗಿಸಿಲ್ಲ. ಇದರಿಂದ ಆಕ್ರೋಶಗೊಂಡ ಪೋಷಕರು ಆ.14ರಂದು ಮಕ್ಕಳನ್ನು ಶಾಲೆಗೆ ಕಳುಹಿಸದೇ ಪ್ರತಿಭಟನೆ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತ ಪಡಿಸಿದ್ದಾರೆ. ಈ ಹಿನ್ನಲೆಯಲ್ಲಿ ಆ.14ರಂದು ಸಂಜೆ ಶಿಕ್ಷಣಾಧಿಕಾರಿ ಶಾಲೆಗೆ ಭೇಟಿ ನೀಡಿ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರಾದ ಧನಂಜಯ್ ಗೌಡರವರ ಜೊತೆಗೆ ಮಾತುಕತೆ ನಡೆಸಿದ್ದರು. ಆದರೆ ಸಮಸ್ಯೆ ಪರಿಹಾರಗೊಳ್ಳದ ಕಾರಣ ಪೋಷಕರು ಮಕ್ಕಳನ್ನು ಆ.೧೫ರಂದು ಸ್ವಾತಂತ್ರ್ಯೋತ್ಸವ ಆಚರಣೆಗೆ ಶಾಲೆಗೆ ಕಳುಹಿಸದೇ ಇದ್ದ ಕಾರಣ ಶಾಲಾ ಶಿಕ್ಷಕರು, ಪಂಚಾಯತ್ ಅಧ್ಯಕ್ಷ ಮನೋಜ್, ಸದಸ್ಯರು, ಗ್ರಾಮಸ್ಥರು ಸೇರಿ ಸ್ವಾತಂತ್ರ್ಯೋತ್ಸವ ಆಚರಿಸಿದರು.

Related posts

ಬರೆಂಗಾಯ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆ ಉತ್ಸವ

Suddi Udaya

ಅರಸಿನಮಕ್ಕಿ ವಲಯ ಶ್ರೀ ಕ್ಷೇ. ಧ. ಗ್ರಾ. ಯೋಜನೆಯ ಪ್ರಗತಿ ಬಂಧು ಸ್ವಸಹಾಯ ಸಂಘಕ್ಕೆ ವಾರ್ಷಿಕ ಲೆಕ್ಕ ಪರಿಶೋಧನೆಯ ಗ್ರೇಡಿಂಗ್ ಪತ್ರ ವಿತರಣೆ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢಶಾಲಾ ವಿಭಾಗ ಹಾಗೂ ಪದವಿಪೂರ್ವ ಕಾಲೇಜು ಜಂಟಿಯಾಗಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮಾ.9: ಧರ್ಮಸ್ಥಳದ ಪಶು ಆಸ್ಪತ್ರೆಯ ನೂತನ ಕಟ್ಟಡ ಲೋಕಾರ್ಪಣೆ

Suddi Udaya

ಬೆಳ್ತಂಗಡಿ: ಸ್ನೇಹ ಜ್ಯೋತಿ ಮಹಿಳಾ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಾಲಾಡಿ: ಶುದ್ಧ ಕುಡಿಯುವ ನೀರಿನ ಘಟಕ ಸರಿಯಾಗಿ ನಿರ್ವಹಣೆ ಮಾಡದೆ ಲಕ್ಷಾಂತರ ರೂ. ಬೆಲೆಬಾಳುವ ಮಿಷನರಿಗಳು ಕಳ್ಳರ ಪಾಲು : ಸಂಬಂಧಪಟ್ಟ ಇಲಾಖೆಯವರು ಗಮನಹರಿಸಿ ನೀರಿನ ಘಟಕವನ್ನು ಜನಸಾಮಾನ್ಯರಿಗೆ ಉಪಯೋಗ ಆಗುವ ರೀತಿಯಲ್ಲಿ ಮಾಡುವಂತೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!