25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಇಂದಬೆಟ್ಟು ಗ್ರಾಮ ಪಂಚಾಯತ್ ಕಚೇರಿಯಲ್ಲಿ ಇಂದು 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅಧ್ಯಕ್ಷೆ ಶ್ರೀಮತಿ ಆಶಾಲತಾ ರವರು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.

ಆಜಾದಿ ಕಾ ಅಮೃತ ಮಹೋತ್ಸವ ದ ಅಂಗವಾಗಿ ‘ಪಂಚ್ ಪ್ರಾಣ್ ಪ್ರತಿಜ್ಞೆ’ ಮೂಲಕ ಸಸಿ ನೆಡುವ ಕಾರ್ಯಕ್ರಮ ನಡೆಯಿತು. ವೀರ ಯೋಧರಿಗೆ ಗೌರವ ಸಲ್ಲಿಸಲಾಯಿತು.

ಕಾರ್ಯಕ್ರಮವನ್ನು ದೇವನಾರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯರಾದ ಕಿಶೋರ್ ಕುಮಾರ್ ರವರು ನಿರ್ವಹಿಸಿದರು. ದೇವನಾರಿ ಶಾಲಾ ಮಕ್ಕಳು ರಾಷ್ಟ್ರಗೀತೆ, ವಂದೇ ಮಾತರಂ, ಧ್ವಜಗೀತೆ ಹಾಡಿದರು.

ಅಧ್ಯಕ್ಷರಾದ ಶ್ರೀಮತಿ ಆಶಾಲತಾ ರವರು ಸ್ವಾತಂತ್ರ್ಯೋತ್ಸವದ ಶುಭಾಶಯಗಳು ತಿಳಿಸಿದರು.

ಕಾರ್ಯಕ್ರಮದಲ್ಲಿ ಪಂಚಾಯತ್ ಸದಸ್ಯರು, ಸಿಬ್ಬಂದಿ ವರ್ಗದವರು, ದೇವನಾರಿ ಶಾಲಾ ಮಕ್ಕಳು, ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟ ಸದಸ್ಯರು, ಪ್ರಾಥಮಿಕ ಆರೋಗ್ಯ ಕೇಂದ್ರ ಇಂದಬೆಟ್ಟು ಸಿಬ್ಬಂದಿಗಳು, ಗೆಳೆಯರ ಬಳಗ ನೇತ್ರಾವತಿ ನಗರದ ಸದಸ್ಯರು, ಸುಧರ್ಮ ಆಟೋ ರಿಕ್ಷಾ ಚಾಲಕ ಮಾಲಕರು ಇಂದಬೆಟ್ಟು, ನವಭಾರತ್ ಗೆಳೆಯರ ಬಳಗ ಕಲ್ಲಾಜೆ-ಇಂದಬೆಟ್ಟು ಸದಸ್ಯರು, ಇಂದಬೆಟ್ಟು ಗ್ರಾಮಸ್ಥರು, ಗ್ರಾಮದ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

CRT ತಾಲೂಕು ಸಂಯೋಜಕರಾದ ವಿನೋದ್ ಪ್ರಸಾದ್ ರವರು ಧನ್ಯವಾದವಿತ್ತರು.

Related posts

ನೆರಿಯ ಗ್ರಾಮ ಸಭೆ: ಜನವಸತಿಯಿರುವ ಪ್ರದೇಶಕ್ಕೆ ದಾರಿದೀಪ ವಿಸ್ತರಣೆಗೆ ಗ್ರಾಮಸ್ಥರ ಒತ್ತಾಯ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ.ಸಿ. ಟ್ರಸ್ಟ್ ಬೆಳ್ತಂಗಡಿ ತಾಲೂಕು ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ಬಾಲಕಿಯರ ತಂಡ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಮಾಲಾಡಿ ಗ್ರಾ.ಪಂ. ವ್ಯಾಪ್ತಿಯ ಶಕ್ತಿನಗರದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಕಾರ್ಯಕ್ರಮ

Suddi Udaya

ಪಿಲ್ಯ- ಕುದ್ಯಾಡಿ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಪದಗ್ರಹಣ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತೀ ವಂದನೀಯ ಜೇಮ್ಸ್ ಪಟ್ಟೇರಿಲ್ ಪಟ್ಟಾಭಿಷೇಕ

Suddi Udaya
error: Content is protected !!