September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಇಂದಬೆಟ್ಟು ಗ್ರಾಮ ಪಂಚಾಯತ್ ಕಚೇರಿಯಲ್ಲಿ ಇಂದು 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅಧ್ಯಕ್ಷೆ ಶ್ರೀಮತಿ ಆಶಾಲತಾ ರವರು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.

ಆಜಾದಿ ಕಾ ಅಮೃತ ಮಹೋತ್ಸವ ದ ಅಂಗವಾಗಿ ‘ಪಂಚ್ ಪ್ರಾಣ್ ಪ್ರತಿಜ್ಞೆ’ ಮೂಲಕ ಸಸಿ ನೆಡುವ ಕಾರ್ಯಕ್ರಮ ನಡೆಯಿತು. ವೀರ ಯೋಧರಿಗೆ ಗೌರವ ಸಲ್ಲಿಸಲಾಯಿತು.

ಕಾರ್ಯಕ್ರಮವನ್ನು ದೇವನಾರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯರಾದ ಕಿಶೋರ್ ಕುಮಾರ್ ರವರು ನಿರ್ವಹಿಸಿದರು. ದೇವನಾರಿ ಶಾಲಾ ಮಕ್ಕಳು ರಾಷ್ಟ್ರಗೀತೆ, ವಂದೇ ಮಾತರಂ, ಧ್ವಜಗೀತೆ ಹಾಡಿದರು.

ಅಧ್ಯಕ್ಷರಾದ ಶ್ರೀಮತಿ ಆಶಾಲತಾ ರವರು ಸ್ವಾತಂತ್ರ್ಯೋತ್ಸವದ ಶುಭಾಶಯಗಳು ತಿಳಿಸಿದರು.

ಕಾರ್ಯಕ್ರಮದಲ್ಲಿ ಪಂಚಾಯತ್ ಸದಸ್ಯರು, ಸಿಬ್ಬಂದಿ ವರ್ಗದವರು, ದೇವನಾರಿ ಶಾಲಾ ಮಕ್ಕಳು, ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟ ಸದಸ್ಯರು, ಪ್ರಾಥಮಿಕ ಆರೋಗ್ಯ ಕೇಂದ್ರ ಇಂದಬೆಟ್ಟು ಸಿಬ್ಬಂದಿಗಳು, ಗೆಳೆಯರ ಬಳಗ ನೇತ್ರಾವತಿ ನಗರದ ಸದಸ್ಯರು, ಸುಧರ್ಮ ಆಟೋ ರಿಕ್ಷಾ ಚಾಲಕ ಮಾಲಕರು ಇಂದಬೆಟ್ಟು, ನವಭಾರತ್ ಗೆಳೆಯರ ಬಳಗ ಕಲ್ಲಾಜೆ-ಇಂದಬೆಟ್ಟು ಸದಸ್ಯರು, ಇಂದಬೆಟ್ಟು ಗ್ರಾಮಸ್ಥರು, ಗ್ರಾಮದ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

CRT ತಾಲೂಕು ಸಂಯೋಜಕರಾದ ವಿನೋದ್ ಪ್ರಸಾದ್ ರವರು ಧನ್ಯವಾದವಿತ್ತರು.

Related posts

ಮುಂಡೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ: ಶಾಲೆಗೆ ಕೊಡುಗೆ ನೀಡಿದ ದಾನಿಗಳಿಗೆ ಗೌರವಾರ್ಪಣೆ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಭಾರೀ ಮಳೆ ಹಿನ್ನೆಲೆ: ನಾಳೆ(ಆ. 3)ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ತುರ್ತು ಸಭೆ

Suddi Udaya

ಧರ್ಮಸ್ಥಳದಲ್ಲಿ ಪುರಾಣ ಪ್ರವಚನ

Suddi Udaya

ವಿದ್ಯಾರ್ಥಿ ಚಳವಳಿಯ ಮೇಲೆ ನಡೆದ ಪೈಶಾಚಿಕ ದಾಳಿ ಕೇಂದ್ರ ಸರ್ಕಾರದ ಸರ್ವಾಧಿಕಾರಿ ಆಡಳಿತಕ್ಕೆ ಸಾಕ್ಷಿ: ಶೇಖರ ಎಲ್

Suddi Udaya

ಬಳಂಜ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಬ್ರಹ್ಮಶ್ರೀ ಮಂಡಳಿಯಿಂದ ಪೆನ್ನು ವಿತರಣೆ

Suddi Udaya
error: Content is protected !!