September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಅಮೃತ ಗ್ರಾ. ಪಂ. ಹಾಗೂ ಅಮೃತ ಸರೋವರದಲ್ಲಿ ಸ್ವಾತಂತ್ರೋತ್ಸವ ಆಚರಣೆ: ನಿವೃತ್ತ ಸೈನಿಕರಿಗೆ ಗೌರವಾರ್ಪಣೆ

ಕೊಕ್ಕಡ ಅಮೃತ ಗ್ರಾಮಪಂಚಾಯತ್ ನಲ್ಲಿ ಸ್ವಾತಂತ್ರೋತ್ಸವ ಧ್ವಜಾರೋಹಣವನ್ನು ನಿವೃತ್ತ ಸೈನಿಕರು ಮುಂಡೂರುಪಲಿಕೆಯ ನಾಗೇಶ್ ರವರು ನೆರವೇರಿಸಿ ಶುಭ ಹಾರೈಸಿದರು.

ಬಳಿಕ ಅಮೃತ ಪಂಚಾಯತ್ ಅಮೃತ ಸರೋವರದಲ್ಲಿ ಧ್ವಜಾರೋಹಣವನ್ನು ಗ್ರಾಮಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿ ನೆರವೇರಿಸಿದರು.

ಈ ಸಂದರ್ಭ ನಿವೃತ್ತ ಸೈನಿಕರದ ನಾಗೇಶ್ ರವರನ್ನು ಹಾಗೂ ನಿವೃತ್ತ ಸೈನಿಕರು ಕೊಕ್ಕಡ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್ ರವರನ್ನು ಪಂಚಾಯತ್ ವತಿಯಿಂದ ಗೌರವಿಸಲಾಯಿತು.

ನಿವೃತ್ತ ಸೈನಿಕ ನಾಗೇಶರವರು ಮಾತನಾಡಿ ಗ್ರಾಮದ ಸರ್ವೋತೋಮೂಖ ಅಭಿವೃದ್ಧಿ ಗಳಿಂದ ದೇಶದ ಅಭಿವೃದ್ಧಿ ಸಾಧ್ಯ ಎಂದು ನುಡಿದರು.

ಪಂಚಾಯತ್ ಅಧ್ಯಕ್ಷರು ಮಾತನಾಡಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಪಂಚಾಯತ್ ಮಾಜಿ ಅಧ್ಯಕ್ಷ ಕುಶಾಲಪ್ಪ ಪುಡಿಕೆತ್ತುರ್, ಪಂಚಾಯತ್ ಉಪಾಧ್ಯಕ್ಷರು ಪ್ರಭಾಕರ್ ಗೌಡ, ನಿಕಟಪೂರ್ವ ಅಧ್ಯಕ್ಷರು ಯೋಗೀಶ್ ಆಳಂಬಿಲ, ಉಪಾಧ್ಯಕ್ಷರು ಶ್ರೀಮತಿ ಪವಿತ್ರ, ಸದಸ್ಯರುಗಳಾದ ಜಗದೀಶ್, ಪುರಷೋತ್ತಮ, ವಿಶ್ವನಾಥ್, ಶರತ್ ಕುಮಾರ್.,ವನಜಾಕ್ಷಿ , ಪಂಚಾಯತ್ ಕಾರ್ಯದರ್ಶಿ, ಸಿಬ್ಬಂದಿಗಳು ಉಪಸ್ಥಿತರಿದ್ದರು..

ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಸ್ವಾಗತಿಸಿ ವಂದಿಸಿದರು.

Related posts

ಉಜಿರೆ ಎಸ್.ಡಿ.ಎಂ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನಿಸರ್ಗದ ಮಡಿಲಲ್ಲಿ ಪರಿಸರ ಪಾಠ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ‌ದರ್ಜೆ ಕಾಲೇಜಿನಲ್ಲಿ ಅಂತರ್ ಕಾಲೇಜು ಮಟ್ಟದ ಸಾಂಸ್ಕೃತಿಕ ಹಬ್ಬ ಅವಿನ್ಯ- 2025

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ: ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಿಎಮ್ಎಸ್

Suddi Udaya

ಮುಗೇರಡ್ಕ ದೈವಗಳ ಸೇವಾ ಸಮಿತಿಯಿಂದ ಮೊಗ್ರು ಶಾಲೆಗೆ ವಿದ್ಯುತ್ ಚಾಲಿತ ನೀರು ಶುದ್ದಿಕರಣ ಯಂತ್ರ ಕೊಡುಗೆ

Suddi Udaya

ಸೆ.7-8: ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಮಿತಿಯ ವತಿಯಿಂದ 25 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya
error: Content is protected !!