22.5 C
ಪುತ್ತೂರು, ಬೆಳ್ತಂಗಡಿ
June 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು ಗ್ರಾ. ಪಂ.ನಲ್ಲಿ ಸ್ವಾತಂತ್ರ್ಯೋತ್ಸವ: ಡಿಜಿಟಲ್ ಗ್ರಂಥಾಲಯದ ಉದ್ಘಾಟನೆ

ನಾವೂರು: 77 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮ ಮತ್ತು ಡಿಜಿಟಲ್ ಗ್ರಂಥಾಲಯದ ಉದ್ಘಾಟಣೆಯನ್ನು ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಶ್ರೀಮತಿ ಸುನಂದ ಇವರು ನೆರವೇರಿಸಿದರು.

ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರು ರಾಷ್ಟ್ರಭಕ್ತಿ ಗೀತೆಗಳನ್ನು ಹಾಡಿದರು ನಿವೃತ್ತ ಪ್ರಾಂಶುಪಾಲರಾದ ಆಂಟನಿ ಟಿ.ಪಿ ಇವರು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರ ಬಗ್ಗೆ ಮತ್ತು ದೇಶದ ಬಗ್ಗೆ ಸವಿಸ್ತಾರವಾಗಿ ಮಾತನಾಡಿದರು.

ಭಾರತೀಯ ಸೇನೆಯಲ್ಲಿ 28 ವರ್ಷ ಸೇವೆ ಸಲ್ಲಿಸಿದ ಪೂವಪ್ಪ ಗೌಡ ಇವರು ಶಿಲಾಫಲಕ ವನ್ನು ಉದ್ಘಾಟಿಸಿದರು ಹಾಗೂ ಗ್ರಾಮ ಪಂಚಾಯತ್ ವತಿಯಿಂದ ಇವರಿಗೆ ಸನ್ಮಾನ ಮಾಡಲಾಯಿತು.

ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಶ್ರೀಮತಿ ಸುನಂದ ,ಉಪಾಧ್ಯಕ್ಷರಾದ ಶ್ರೀಮತಿ ಮಮತಾ ಇವರು ವಸೂದಾ ವಂದನ ಕಾರ್ಯಕ್ರಮದಲ್ಲಿ 75 ವಿವಿಧ ಜಾತಿಯ ಗಿಡಗಳನ್ನು ನೆಡುವ ಬಗ್ಗೆ ಸಾಂಕೇತಿಕವಾಗಿ ಗಿಡಗಳನ್ನು ನೆಟ್ಟು ಕಾರ್ಯಕ್ರಮ ನೆರವೇರಿಸಿದರು. ನನ್ನ ಮಣ್ಣು ನನ್ನ ದೇಶ ಎಂಬ ಕಾರ್ಯಕ್ರಮದಲ್ಲಿ ಮಣ್ಣನ್ನು ಸಂಗ್ರಹಿಸಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವಸದಸ್ಯರು ಹಾಗೂ ಊರಿನ ಗೌರವಾನ್ವಿತ ಗಣ್ಯರು ಮತ್ತು ವಿವಿಧ ಸಂಘಸಂಸ್ಥೆಗಳ ಅಧ್ಯಕ್ಷರು/ ಪದಾಧಿಕಾರಿಗಳು,ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷರು/ ಪದಾಧಿಕಾರಿಗಳು ಶಾಲಾ ಮಕ್ಕಳು,ಪಂಚಾಯಿತಿ ಪಂಚಾಯತ್ ಅಭಿವದ್ದಿ ಅಧಿಕಾರಿ,ಕಾರ್ಯದರ್ಶಿ ,ಸಿಬ್ಬಂದಿ ವರ್ಗ ಮತ್ತು ಗ್ರಾಮಸ್ಧರು ಉಪಸ್ಧಿತರಿದ್ದರು.

Related posts

ನಿಡ್ಲೆ : ನೆಕ್ಕರೆ ನಿವಾಸಿ ಧರ್ಣಮ್ಮ ನಿಧನ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವಿಧಾನ ಸಭಾ ಕ್ಷೇತ್ರ ಸಮಿತಿಯಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

Suddi Udaya

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ : ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 13504 ಅಂತರದಿಂದ ಮುನ್ನಡೆ

Suddi Udaya

78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ಹಳೆಪೇಟೆ, ಉಜಿರೆ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ

Suddi Udaya

ಯೂಟ್ಯೂಬ್ ಚಾನಲ್ ನ ಸಂದರ್ಶನದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಜೈನ ಧರ್ಮದ ಜನರ ನಿಂದಿಸಿದ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವನವರ್ ಮತ್ತು ಶ್ರೀಮತಿ ರಾಧಿಕಾ ಕಾಸರಗೋಡು ಇವರ ಮೇಲೆ ಕೇಸು

Suddi Udaya

ಬಿರು ಬೇಸಿಗೆಯಲ್ಲಿ ನೀರಿನ ಕೊರತೆಯ ನಡುವೆ ಕುಡಿಯುವ ನೀರನ್ನು ಪೂರೈಸಿ ಮಾದರಿ ಎನಿಸಿಕೊಂಡ ಲಾಯಿಲ ಗ್ರಾ.ಪಂ. ಸದಸ್ಯರು

Suddi Udaya
error: Content is protected !!