24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಸಮಿತಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಉಜಿರೆ ಹಳೆಪೇಟೆ ಸಮಿತಿ ವತಿಯಿಂದ 77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ” ಪ್ರತಿಯೊಬ್ಬ ಕಾರ್ಮಿಕನೂ ಸ್ವಾತಂತ್ರ್ಯದ ರಕ್ಷಕರಾಗಲಿ ಎಂಬ ಧ್ಯೇಯ ವಾಕ್ಯದೊಂದಿಗೆ ಕಾರ್ಯಕ್ರಮ ಅಧ್ಯಕ್ಷರಾದ ಬಶೀರ್ ಅತ್ತಾಜೆ ಅವರ ಅಧ್ಯಕ್ಷತೆಯಲ್ಲಿ ಹಳೆಪೇಟೆ ಟಿ-ಬಿ ಕ್ರಾಸ್ ಬಳಿ ನಡೆಯಿತು.


77ನೇ ಸ್ವಾತಂತ್ರ್ಯ ದಿನಾಚರಣೆ ದ್ವಜಾರೋಹಣವನ್ನು ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣಾಧಿಕಾರಿ ಅರ್ಜುನ್ ಅವರು ನೆರವೇರಿಸಿ ಸ್ವಾತಂತ್ರ್ಯ ದಿನದ ಮಹತ್ವದ ಬಗ್ಗೆ ಮಾತನಾಡಿದರು.
ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕಾರ್ಮಿಕರ ತೊಡಗುವಿಕೆಯ ಬಗ್ಗೆ ಮತ್ತು ಹೋರಾಟಗಳ ಬಗ್ಗೆ ಎಸ್‌ಡಿಟಿಯು ರಾಜ್ಯ ನಾಯಕರಾದ ಖಾದರ್ ಫರಂಗಿಪೇಟೆ ಯವರು ಪ್ರಸ್ತಾವಿಕ ಭಾಷಣ ಮಾತನಾಡಿದರು.


ಮುಖ್ಯ ಅತಿಥಿಗಳಾಗಿ ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸೀದಿ ಖತಿಬಾರದ ಅಬುಸ್ವಾಲಿ ಕಾಮಿಲ್ ಸಖಾಫಿ, ಉದ್ಯಮಿ ಪಾಂಡುರಂಗ ಭಂಡಾರ್ಕರ್, ಬೆಳ್ತಂಗಡಿ ತಾಲೂಕು ಘಟಕ ಅಧ್ಯಕ್ಷರಾದ ಸಾಲಿ ಮದ್ದಡ್ಕ, ಕಾರ್ಯದರ್ಶಿ ರಿಯಾಜ್ ಪನಕಜೆ, ಸೂರಪ್ಪ, ಸುರೇಶ್, ಲತೀಫ್ ಉಜಿರೆ, ಲಾಯಿಲ ಪಂಚಾಯತ್ ಸದಸ್ಯರಾದ ಶಮಾ ಆಲಿ, ಮರಿಯಮ್ಮ ಸಲೀಮ್ ಕುಂಟಿನಿ, ಎಸ್‌ಡಿಟಿಯು ಪದಾಧಿಕಾರಿಗಳು ಮತ್ತು ಉಜಿರೆ ಹಳೆಪೇಟೆ ರಿಕ್ಷಾ ಚಾಲಕರು ಮಾಲಕರು ಉಪಸ್ಥಿತರಿದ್ದರು.


ಬೆಳ್ತಂಗಡಿ ತಾಲೂಕು ಸಮಿತಿ ಸದಸ್ಯ ಸಾಹುಲ್ ಉಜಿರೆ ಕಾರ್ಯಕ್ರಮವನ್ನು ನಿರೂಪಿಸಿ ಧನ್ಯವಾದಗೈದರು.

Related posts

ಅರುಣಾಚಲ ಪ್ರದೇಶದಲ್ಲಿ ಐಟಿಬಿಪಿ ಸಬ್ ಇನ್ಸ್‌ಪೆಕ್ಟರ್ ಆಗಿ ಕಡಿರುದ್ಯಾವರ ಹರ್ಷಿತ್ ನೇಮಕ

Suddi Udaya

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಸಮಿತಿ ರಚನೆ

Suddi Udaya

ಸೌತಡ್ಕ ಗೋಬರ್ ಗ್ಯಾಸ್ ಸ್ಥಾವರ ಕೇಂದ್ರಕ್ಕೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya

ಸೂಳಬೆಟ್ಟುವಿನಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ: ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಅರಣ್ಯ ಇಲಾಖೆ ಹಾಗೂ ಸ್ಥಳಿಯರು

Suddi Udaya

ತೆಗೆದುಕೊಂಡ ಒಡವೆಗಳನ್ನು ಯಾಕೆ ಇನ್ನು ಕೊಟ್ಟಿಲ್ಲ ಎಂದು ಪ್ರಶ್ನಿಸಿದ ಮಹಿಳೆಗೆ ಕೈಯಿಂದ ಹೊಡೆದು ಕುತ್ತಿಗೆಯನ್ನು ಹಿಚುಕಿ ಜೀವಬೆದರಿಕೆ

Suddi Udaya

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ವಾಹನಗಳು ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya
error: Content is protected !!