25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಸಮಿತಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಉಜಿರೆ ಹಳೆಪೇಟೆ ಸಮಿತಿ ವತಿಯಿಂದ 77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ” ಪ್ರತಿಯೊಬ್ಬ ಕಾರ್ಮಿಕನೂ ಸ್ವಾತಂತ್ರ್ಯದ ರಕ್ಷಕರಾಗಲಿ ಎಂಬ ಧ್ಯೇಯ ವಾಕ್ಯದೊಂದಿಗೆ ಕಾರ್ಯಕ್ರಮ ಅಧ್ಯಕ್ಷರಾದ ಬಶೀರ್ ಅತ್ತಾಜೆ ಅವರ ಅಧ್ಯಕ್ಷತೆಯಲ್ಲಿ ಹಳೆಪೇಟೆ ಟಿ-ಬಿ ಕ್ರಾಸ್ ಬಳಿ ನಡೆಯಿತು.


77ನೇ ಸ್ವಾತಂತ್ರ್ಯ ದಿನಾಚರಣೆ ದ್ವಜಾರೋಹಣವನ್ನು ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣಾಧಿಕಾರಿ ಅರ್ಜುನ್ ಅವರು ನೆರವೇರಿಸಿ ಸ್ವಾತಂತ್ರ್ಯ ದಿನದ ಮಹತ್ವದ ಬಗ್ಗೆ ಮಾತನಾಡಿದರು.
ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕಾರ್ಮಿಕರ ತೊಡಗುವಿಕೆಯ ಬಗ್ಗೆ ಮತ್ತು ಹೋರಾಟಗಳ ಬಗ್ಗೆ ಎಸ್‌ಡಿಟಿಯು ರಾಜ್ಯ ನಾಯಕರಾದ ಖಾದರ್ ಫರಂಗಿಪೇಟೆ ಯವರು ಪ್ರಸ್ತಾವಿಕ ಭಾಷಣ ಮಾತನಾಡಿದರು.


ಮುಖ್ಯ ಅತಿಥಿಗಳಾಗಿ ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸೀದಿ ಖತಿಬಾರದ ಅಬುಸ್ವಾಲಿ ಕಾಮಿಲ್ ಸಖಾಫಿ, ಉದ್ಯಮಿ ಪಾಂಡುರಂಗ ಭಂಡಾರ್ಕರ್, ಬೆಳ್ತಂಗಡಿ ತಾಲೂಕು ಘಟಕ ಅಧ್ಯಕ್ಷರಾದ ಸಾಲಿ ಮದ್ದಡ್ಕ, ಕಾರ್ಯದರ್ಶಿ ರಿಯಾಜ್ ಪನಕಜೆ, ಸೂರಪ್ಪ, ಸುರೇಶ್, ಲತೀಫ್ ಉಜಿರೆ, ಲಾಯಿಲ ಪಂಚಾಯತ್ ಸದಸ್ಯರಾದ ಶಮಾ ಆಲಿ, ಮರಿಯಮ್ಮ ಸಲೀಮ್ ಕುಂಟಿನಿ, ಎಸ್‌ಡಿಟಿಯು ಪದಾಧಿಕಾರಿಗಳು ಮತ್ತು ಉಜಿರೆ ಹಳೆಪೇಟೆ ರಿಕ್ಷಾ ಚಾಲಕರು ಮಾಲಕರು ಉಪಸ್ಥಿತರಿದ್ದರು.


ಬೆಳ್ತಂಗಡಿ ತಾಲೂಕು ಸಮಿತಿ ಸದಸ್ಯ ಸಾಹುಲ್ ಉಜಿರೆ ಕಾರ್ಯಕ್ರಮವನ್ನು ನಿರೂಪಿಸಿ ಧನ್ಯವಾದಗೈದರು.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ ಪ್ರೌ. ಶಾಲಾ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ರಾಜ್ಯಕ್ಕೆ 2ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ

Suddi Udaya

ಉಜಿರೆಯಲ್ಲಿ ರಮ್ಯಾ 1ಗ್ರಾಂ ಗೋಲ್ಡ್, ಫ್ಯಾನ್ಸಿ ಮತ್ತು ಫೂಟ್ ವೇ‌ರ್ ನೂತನ ಶೋರೂಮ್ ಶುಭಾರಂಭ

Suddi Udaya

ರಾಜ್ಯ ಮಟ್ಟದ ಜೂನಿಯರ್ ರೆಡ್ ಕ್ರಾಸ್ ಪರೀಕ್ಷೆ : ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಮೂಡುಕೋಡಿ: ಕೊಪ್ಪದಬಾಕಿಮಾರು ಶ್ರೀ ಸತ್ಯ ಸಾರಮಾನಿ ದೈವಸ್ಥಾನ ಟ್ರಸ್ಟ್ ವತಿಯಿಂದ ದೇಲoಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಮೃತ್ಯುoಜಯ ಹೋಮ

Suddi Udaya

ಕರಾಯ ತ್ರಿವರ್ಣ ಸಂಗಮ ಆಟೋ ಚಾಲಕ ಮಾಲಕ ಸಂಘದ ಸಮಿತಿ ರಚನೆ: ಅಧ್ಯಕ್ಷರಾಗಿ ವೆಂಕಟೇಶ್ ಪೂಜಾರಿ ಅವಿರೋಧ ಆಯ್ಕೆ

Suddi Udaya
error: Content is protected !!