July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಸಮಿತಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಉಜಿರೆ ಹಳೆಪೇಟೆ ಸಮಿತಿ ವತಿಯಿಂದ 77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ” ಪ್ರತಿಯೊಬ್ಬ ಕಾರ್ಮಿಕನೂ ಸ್ವಾತಂತ್ರ್ಯದ ರಕ್ಷಕರಾಗಲಿ ಎಂಬ ಧ್ಯೇಯ ವಾಕ್ಯದೊಂದಿಗೆ ಕಾರ್ಯಕ್ರಮ ಅಧ್ಯಕ್ಷರಾದ ಬಶೀರ್ ಅತ್ತಾಜೆ ಅವರ ಅಧ್ಯಕ್ಷತೆಯಲ್ಲಿ ಹಳೆಪೇಟೆ ಟಿ-ಬಿ ಕ್ರಾಸ್ ಬಳಿ ನಡೆಯಿತು.


77ನೇ ಸ್ವಾತಂತ್ರ್ಯ ದಿನಾಚರಣೆ ದ್ವಜಾರೋಹಣವನ್ನು ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣಾಧಿಕಾರಿ ಅರ್ಜುನ್ ಅವರು ನೆರವೇರಿಸಿ ಸ್ವಾತಂತ್ರ್ಯ ದಿನದ ಮಹತ್ವದ ಬಗ್ಗೆ ಮಾತನಾಡಿದರು.
ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕಾರ್ಮಿಕರ ತೊಡಗುವಿಕೆಯ ಬಗ್ಗೆ ಮತ್ತು ಹೋರಾಟಗಳ ಬಗ್ಗೆ ಎಸ್‌ಡಿಟಿಯು ರಾಜ್ಯ ನಾಯಕರಾದ ಖಾದರ್ ಫರಂಗಿಪೇಟೆ ಯವರು ಪ್ರಸ್ತಾವಿಕ ಭಾಷಣ ಮಾತನಾಡಿದರು.


ಮುಖ್ಯ ಅತಿಥಿಗಳಾಗಿ ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸೀದಿ ಖತಿಬಾರದ ಅಬುಸ್ವಾಲಿ ಕಾಮಿಲ್ ಸಖಾಫಿ, ಉದ್ಯಮಿ ಪಾಂಡುರಂಗ ಭಂಡಾರ್ಕರ್, ಬೆಳ್ತಂಗಡಿ ತಾಲೂಕು ಘಟಕ ಅಧ್ಯಕ್ಷರಾದ ಸಾಲಿ ಮದ್ದಡ್ಕ, ಕಾರ್ಯದರ್ಶಿ ರಿಯಾಜ್ ಪನಕಜೆ, ಸೂರಪ್ಪ, ಸುರೇಶ್, ಲತೀಫ್ ಉಜಿರೆ, ಲಾಯಿಲ ಪಂಚಾಯತ್ ಸದಸ್ಯರಾದ ಶಮಾ ಆಲಿ, ಮರಿಯಮ್ಮ ಸಲೀಮ್ ಕುಂಟಿನಿ, ಎಸ್‌ಡಿಟಿಯು ಪದಾಧಿಕಾರಿಗಳು ಮತ್ತು ಉಜಿರೆ ಹಳೆಪೇಟೆ ರಿಕ್ಷಾ ಚಾಲಕರು ಮಾಲಕರು ಉಪಸ್ಥಿತರಿದ್ದರು.


ಬೆಳ್ತಂಗಡಿ ತಾಲೂಕು ಸಮಿತಿ ಸದಸ್ಯ ಸಾಹುಲ್ ಉಜಿರೆ ಕಾರ್ಯಕ್ರಮವನ್ನು ನಿರೂಪಿಸಿ ಧನ್ಯವಾದಗೈದರು.

Related posts

ಪಡಂಗಡಿ ಗ್ರಾ.ಪಂ. ಗ್ರಂಥಾಲಯಕ್ಕೆ ಪ್ರವೀಣ್ ರೈ ರವರಿಂದ 54 ಪುಸ್ತಕಗಳ ಕೊಡುಗೆ

Suddi Udaya

ಸ್ಕೂಟರ್-ಟಿಪ್ಪರ್ ನಡುವೆ ಅಪಘಾತ: ಕೂಟದಕಲ್ಲು ನಿವಾಸಿ ಸುಧಾಕರ್ ರವರಿಗೆ ಗಾಯ

Suddi Udaya

ಸಂಬೋಳ್ಯ ನಿವಾಸಿ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ಶೀಘ್ರ ತನಿಖೆಗಾಗಿ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಕಳಿಯ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಗ್ರಂಥಾಲಯ ಮೇಲ್ವಿಚಾರಕರಿಗೆ ಡಿಜಿಟಲ್ ಕೌಶಲ್ಯ, ನಾಯಕತ್ವ ಮತ್ತು ಸಹಭಾಗಿತ್ವ ಚಟುವಟಿಕೆಯ ತರಬೇತಿ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಕಿಂಡರ್ಗಾರ್ಟನ್ ವಿಭಾಗದಲ್ಲಿ “ಗ್ರೀನ್ ಡೇ” ಆಚರಣೆ

Suddi Udaya
error: Content is protected !!