September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಸಮಿತಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಉಜಿರೆ ಹಳೆಪೇಟೆ ಸಮಿತಿ ವತಿಯಿಂದ 77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ” ಪ್ರತಿಯೊಬ್ಬ ಕಾರ್ಮಿಕನೂ ಸ್ವಾತಂತ್ರ್ಯದ ರಕ್ಷಕರಾಗಲಿ ಎಂಬ ಧ್ಯೇಯ ವಾಕ್ಯದೊಂದಿಗೆ ಕಾರ್ಯಕ್ರಮ ಅಧ್ಯಕ್ಷರಾದ ಬಶೀರ್ ಅತ್ತಾಜೆ ಅವರ ಅಧ್ಯಕ್ಷತೆಯಲ್ಲಿ ಹಳೆಪೇಟೆ ಟಿ-ಬಿ ಕ್ರಾಸ್ ಬಳಿ ನಡೆಯಿತು.


77ನೇ ಸ್ವಾತಂತ್ರ್ಯ ದಿನಾಚರಣೆ ದ್ವಜಾರೋಹಣವನ್ನು ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣಾಧಿಕಾರಿ ಅರ್ಜುನ್ ಅವರು ನೆರವೇರಿಸಿ ಸ್ವಾತಂತ್ರ್ಯ ದಿನದ ಮಹತ್ವದ ಬಗ್ಗೆ ಮಾತನಾಡಿದರು.
ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕಾರ್ಮಿಕರ ತೊಡಗುವಿಕೆಯ ಬಗ್ಗೆ ಮತ್ತು ಹೋರಾಟಗಳ ಬಗ್ಗೆ ಎಸ್‌ಡಿಟಿಯು ರಾಜ್ಯ ನಾಯಕರಾದ ಖಾದರ್ ಫರಂಗಿಪೇಟೆ ಯವರು ಪ್ರಸ್ತಾವಿಕ ಭಾಷಣ ಮಾತನಾಡಿದರು.


ಮುಖ್ಯ ಅತಿಥಿಗಳಾಗಿ ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸೀದಿ ಖತಿಬಾರದ ಅಬುಸ್ವಾಲಿ ಕಾಮಿಲ್ ಸಖಾಫಿ, ಉದ್ಯಮಿ ಪಾಂಡುರಂಗ ಭಂಡಾರ್ಕರ್, ಬೆಳ್ತಂಗಡಿ ತಾಲೂಕು ಘಟಕ ಅಧ್ಯಕ್ಷರಾದ ಸಾಲಿ ಮದ್ದಡ್ಕ, ಕಾರ್ಯದರ್ಶಿ ರಿಯಾಜ್ ಪನಕಜೆ, ಸೂರಪ್ಪ, ಸುರೇಶ್, ಲತೀಫ್ ಉಜಿರೆ, ಲಾಯಿಲ ಪಂಚಾಯತ್ ಸದಸ್ಯರಾದ ಶಮಾ ಆಲಿ, ಮರಿಯಮ್ಮ ಸಲೀಮ್ ಕುಂಟಿನಿ, ಎಸ್‌ಡಿಟಿಯು ಪದಾಧಿಕಾರಿಗಳು ಮತ್ತು ಉಜಿರೆ ಹಳೆಪೇಟೆ ರಿಕ್ಷಾ ಚಾಲಕರು ಮಾಲಕರು ಉಪಸ್ಥಿತರಿದ್ದರು.


ಬೆಳ್ತಂಗಡಿ ತಾಲೂಕು ಸಮಿತಿ ಸದಸ್ಯ ಸಾಹುಲ್ ಉಜಿರೆ ಕಾರ್ಯಕ್ರಮವನ್ನು ನಿರೂಪಿಸಿ ಧನ್ಯವಾದಗೈದರು.

Related posts

ಲಾಯಿಲ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಧರ್ಮಸ್ಥಳದಲ್ಲಿ ಅಹೋರಾತ್ರಿ ಸಾಮೂಹಿಕ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ

Suddi Udaya

ಬ್ರೈಟ್ ಹೊರೈಝನ್ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭೆಗೆ ‘ವಿಂಗ್ಸ್ ಆಫ್ ವಿಸ್ಡಮ್’ ವೇದಿಕೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಚಿಂತನಾ ದಿನಾಚರಣೆ

Suddi Udaya

ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ.ವಂ. ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್

Suddi Udaya

ನ.16-17: ಉಜಿರೆಯಲ್ಲಿ ಇಂಟರಾಕ್ಟ್ ಜಿಲ್ಲಾ ಸಮ್ಮೇಳನ – ಯೂತ್ ಕಾರ್ನಿವಾಲ್: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

Suddi Udaya
error: Content is protected !!