September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿಶಾಲಾ ಕಾಲೇಜು

ತುಳು ಲಿಪಿ ಆನ್-ಲೈನ್ ಪರೀಕ್ಷೆ: ಪಂಚಮಿ ಬಿ.ಆರ್ ಶತಃ ಪ್ರತಿಶತ ಸಾಧನೆ

ಬೆಳ್ತಂಗಡಿ: ತುಳುನಾಡು ಸಹಿತ ವಿಶ್ವದ ನಾನಾ ಭಾಗಗಳಲ್ಲಿ ಇರುವ ತುಳು ಭಾಷಿಕರಲ್ಲಿ ತುಳು ಲಿಪಿಯ ಬಗ್ಗೆ ಅರಿವು ಮತ್ತು ಆಸಕ್ತಿ ಮೂಡಿಸುವ ಉದ್ದೇಶದಿಂದ ‘ಜೈ ತುಳುನಾಡು (ರಿ.) ಸಂಘಟನೆ ನಡೆಸುವ ತುಳು ಲಿಪಿ ಆನ್-ಲೈನ್ ತರಗತಿಯಲ್ಲಿ ಭಾಗವಹಿಸಿ ಬಳಿಕ ನಡೆದ ಆನ್-ಲೈನ್ ಪರೀಕ್ಷೆಯಲ್ಲಿ ಪಂಚಮಿ ಬಿ.ಆರ್. 100 ಕ್ಕೆ 100 ಅಂಕಗಳನ್ನು ಗಳಿಸುವ ಮೂಲಕ ವಿಶೇಷ ಸಾಧನೆಯನ್ನು ಮಾಡಿದ್ದಾರೆ.

ಧಾರವಾಡದಲ್ಲಿರುವ JJS ಮಂಜುನಾಥೇಶ್ವರ ಸೆಂಟ್ರಲ್ ಸ್ಕೂಲ್ ನಲ್ಲಿ 8ನೇ ತರಗತಿ ವ್ಯಾಸಾಂಗ ಮಾಡುತ್ತಿರುವ ಇವರು ಕಾಸರಗೂಡಿನ ದೇಲಂಪಾಡಿ ಗ್ರಾಮದ ಬಂದ್ಯಡ್ಕ ರಾಜೇಶ್ ಹಾಗೂ ಚಿತ್ರಕಲಾ ದಂಪತಿಯ ಪುತ್ರಿ.

ಕಳೆದ ವರ್ಷ ನವಂಬರ್ 22ರಂದು ತುಳು ಲಿಪಿ ತರಗತಿಯನ್ನು ಆನ್ ಲೈನ್ ಮುಖಾಂತರ ಜೈ ತುಳುನಾಡು (ರಿ) ಸಂಘಟನೆ ಆಯೋಜಿಸಿತ್ತು. ಸುಮಾರು 3-4 ತಿಂಗಳುಗಳ ಕಾಲ ನಡೆದ ಈ ತರಗತಿಯಲ್ಲಿ ಮೂವರು ಶಿಕ್ಷಕರು ತುಳು ವರ್ಣಮಾಲೆ, ಕಾಗುಣಿತ ಮತ್ತು ಅಂಕೆಗಳ ಪಾಠವನ್ನು ಹೇಳಿಕೊಡುತ್ತಿದ್ದರು.

ಬಳಿಕ, ಶಬ್ದಗಳು, ವಾಕ್ಯ ರಚನೆ, ತುಳುವಿನಿಂದ ಕನ್ನಡಕ್ಕೆ ಬರೆಯೋದು, ಕನ್ನಡದಿಂದ ತುಳು ಭಾಷೆಯ ಲಿಪಿಯಲ್ಲಿ ಬರೆಯೋದನ್ನು ಶಿಕ್ಷಕರು ದಿನನಿತ್ಯ ಹೇಳಿಕೊಡುತ್ತಿದ್ದರು.

ಈ ಪಾಠವೆಲ್ಲಾ ಮುಗಿದ ಬಳಿಕ, ಜುಲೈ. 23ರಂದು ಜೈ ತುಳುನಾಡು ಸಂಘಟನೆ ಮುಖಾತರ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಪರೀಕ್ಷೆಗಳ ಫಲಿತಾಂಶ ಆಗಸ್ಟ್ 15ರಂದು ಬಂದಿದ್ದು ಇದರಲ್ಲಿ ಪಂಚಮಿ ಬಿ ಆರ್ 100ಕ್ಕೆ 100 ಅಂಕಗಳನ್ನು ತೆಗೆದುಕೊಂಡು ಮೊದಲ ಸ್ಥಾನ ಪಡೆದಿಕೊಂಡಿದ್ದಾರೆ. ಕರ್ನಾಟಕ ತುಳು ಅಕಾಡೆಮಿ ಶೀಘ್ರದಲ್ಲೇ ಪ್ರಮಾಣ ಪತ್ರವನ್ನು ವಿತರಿಸಲಿದೆ.

Related posts

ಬೆಳ್ತಂಗಡಿ: ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ರಕ್ತಪರೀಕ್ಷಾ ಕೇಂದ್ರ ಸ್ಥಳಾಂತರಗೊಂಡು ಶುಭಾರಂಭ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಸೆಲೆಕ್ಷನ್ ಚಾಂಪಿಯನ್ ಶಿಪ್ ನಲ್ಲಿ ರಿತ್ವಿಕ್ ಕೆ. ಪಿ ಪ್ರಥಮ: ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕರಾಟೆ ಪಂದ್ಯಾಟಕ್ಕೆ ಆಯ್ಕೆ

Suddi Udaya

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಆರ್ಥಿಕ ನೆರವು

Suddi Udaya

ಶಿಶಿಲ: ನಾಗನಡ್ಕ ನಿವಾಸಿ ವ್ಯಾಸ ನಿಧನ

Suddi Udaya

ಧರ್ಮಸ್ಥಳ ಗ್ರಾ.ಪಂ. ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ಯೋಗ ದಿನಾಚರಣೆ

Suddi Udaya

ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಶ್ರೀ ಮಂಜುನಾಥ ಬನ್ನಿಸ್ ಟಂಟೋಲ’ ಘಟಕಕ್ಕೆ ಚಾಲನೆ

Suddi Udaya
error: Content is protected !!