July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿಶಾಲಾ ಕಾಲೇಜು

ತುಳು ಲಿಪಿ ಆನ್-ಲೈನ್ ಪರೀಕ್ಷೆ: ಪಂಚಮಿ ಬಿ.ಆರ್ ಶತಃ ಪ್ರತಿಶತ ಸಾಧನೆ

ಬೆಳ್ತಂಗಡಿ: ತುಳುನಾಡು ಸಹಿತ ವಿಶ್ವದ ನಾನಾ ಭಾಗಗಳಲ್ಲಿ ಇರುವ ತುಳು ಭಾಷಿಕರಲ್ಲಿ ತುಳು ಲಿಪಿಯ ಬಗ್ಗೆ ಅರಿವು ಮತ್ತು ಆಸಕ್ತಿ ಮೂಡಿಸುವ ಉದ್ದೇಶದಿಂದ ‘ಜೈ ತುಳುನಾಡು (ರಿ.) ಸಂಘಟನೆ ನಡೆಸುವ ತುಳು ಲಿಪಿ ಆನ್-ಲೈನ್ ತರಗತಿಯಲ್ಲಿ ಭಾಗವಹಿಸಿ ಬಳಿಕ ನಡೆದ ಆನ್-ಲೈನ್ ಪರೀಕ್ಷೆಯಲ್ಲಿ ಪಂಚಮಿ ಬಿ.ಆರ್. 100 ಕ್ಕೆ 100 ಅಂಕಗಳನ್ನು ಗಳಿಸುವ ಮೂಲಕ ವಿಶೇಷ ಸಾಧನೆಯನ್ನು ಮಾಡಿದ್ದಾರೆ.

ಧಾರವಾಡದಲ್ಲಿರುವ JJS ಮಂಜುನಾಥೇಶ್ವರ ಸೆಂಟ್ರಲ್ ಸ್ಕೂಲ್ ನಲ್ಲಿ 8ನೇ ತರಗತಿ ವ್ಯಾಸಾಂಗ ಮಾಡುತ್ತಿರುವ ಇವರು ಕಾಸರಗೂಡಿನ ದೇಲಂಪಾಡಿ ಗ್ರಾಮದ ಬಂದ್ಯಡ್ಕ ರಾಜೇಶ್ ಹಾಗೂ ಚಿತ್ರಕಲಾ ದಂಪತಿಯ ಪುತ್ರಿ.

ಕಳೆದ ವರ್ಷ ನವಂಬರ್ 22ರಂದು ತುಳು ಲಿಪಿ ತರಗತಿಯನ್ನು ಆನ್ ಲೈನ್ ಮುಖಾಂತರ ಜೈ ತುಳುನಾಡು (ರಿ) ಸಂಘಟನೆ ಆಯೋಜಿಸಿತ್ತು. ಸುಮಾರು 3-4 ತಿಂಗಳುಗಳ ಕಾಲ ನಡೆದ ಈ ತರಗತಿಯಲ್ಲಿ ಮೂವರು ಶಿಕ್ಷಕರು ತುಳು ವರ್ಣಮಾಲೆ, ಕಾಗುಣಿತ ಮತ್ತು ಅಂಕೆಗಳ ಪಾಠವನ್ನು ಹೇಳಿಕೊಡುತ್ತಿದ್ದರು.

ಬಳಿಕ, ಶಬ್ದಗಳು, ವಾಕ್ಯ ರಚನೆ, ತುಳುವಿನಿಂದ ಕನ್ನಡಕ್ಕೆ ಬರೆಯೋದು, ಕನ್ನಡದಿಂದ ತುಳು ಭಾಷೆಯ ಲಿಪಿಯಲ್ಲಿ ಬರೆಯೋದನ್ನು ಶಿಕ್ಷಕರು ದಿನನಿತ್ಯ ಹೇಳಿಕೊಡುತ್ತಿದ್ದರು.

ಈ ಪಾಠವೆಲ್ಲಾ ಮುಗಿದ ಬಳಿಕ, ಜುಲೈ. 23ರಂದು ಜೈ ತುಳುನಾಡು ಸಂಘಟನೆ ಮುಖಾತರ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಪರೀಕ್ಷೆಗಳ ಫಲಿತಾಂಶ ಆಗಸ್ಟ್ 15ರಂದು ಬಂದಿದ್ದು ಇದರಲ್ಲಿ ಪಂಚಮಿ ಬಿ ಆರ್ 100ಕ್ಕೆ 100 ಅಂಕಗಳನ್ನು ತೆಗೆದುಕೊಂಡು ಮೊದಲ ಸ್ಥಾನ ಪಡೆದಿಕೊಂಡಿದ್ದಾರೆ. ಕರ್ನಾಟಕ ತುಳು ಅಕಾಡೆಮಿ ಶೀಘ್ರದಲ್ಲೇ ಪ್ರಮಾಣ ಪತ್ರವನ್ನು ವಿತರಿಸಲಿದೆ.

Related posts

ಲಾಯಿಲ ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವತಿಯಿಂದ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮುಮ್ತಾಜ್ ಇವರ ಚಿಕಿತ್ಸಾ ವೆಚ್ಚದ ಸಹಾಯಾರ್ಥವಾಗಿ ಲಕ್ಕಿ ಡ್ರಾ: ರೂ. 250/- ಗೆ ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ 5 ಸೆಂಟ್ಸ್ ಜಾಗ ಮತ್ತು ಮನೆ

Suddi Udaya

ಜಿಲ್ಲಾಮಟ್ಟದ ವಿದ್ಯಾರತ್ನ ಪ್ರಶಸ್ತಿ ಪುರಸ್ಕೃತೆ ಉಮಾ ಡಿ ಗೌಡರಿಗೆ ಬೆಳ್ತಂಗಡಿ ತಾಲೂಕು ಮುಖ್ಯ ಶಿಕ್ಷಕರ ಸಂಘದಿಂದ ಸನ್ಮಾನ

Suddi Udaya

ಕುಂಟಿನಿ ಅಲ್-ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರಕ್ಕೆ ನೂತನ ಪಲ್ಲಕ್ಕಿ ಸಮರ್ಪಣೆ

Suddi Udaya

ಧರ್ಮಸ್ಥಳದಲ್ಲಿ ಡಾ|| ಬಾಬಾ ಸಾಹೇಬ್ ಅಂಬೇಡ್ಕರ್‌ರವರ 135ನೇ ಜನ್ಮದಿನದ ಸಂಭ್ರಮಾಚರಣೆ

Suddi Udaya
error: Content is protected !!