September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ಜೂನಿಯರ್ ಕಾಲೇಜಿನಲ್ಲಿ ಸಿಇಟಿ ತರಬೇತಿ ಮತ್ತು ಸ್ಪೋಕನ್ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ

ಬೆಳ್ತಂಗಡಿ: ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹಾಗೂ ವೃತ್ತಿಪರ ಶಿಕ್ಷಣಕ್ಕೆ ಒತ್ತು ನೀಡುವ ದೃಷ್ಟಿಯಿಂದ ಬೆಳ್ತಂಗಡಿ ಜೂನಿಯರ್ ಕಾಲೇಜಿನಲ್ಲಿ ಸಿಇಟಿ ತರಬೇತಿ ಹಾಗೂ ಸ್ಪೋಕನ್ ಇಂಗ್ಲೀಷ್ ಕೋಚಿಂಗ್ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

ಕಾರ್ಯಕ್ರಮವನ್ನು ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಜಯಾನಂದ ಗೌಡ,ಸುವರ್ಣ ಮಹೋತ್ಸವ ಸಮಿತಿ ಕಾರ್ಯಧ್ಯಕ್ಷರು ರೊನಾಲ್ಡ್ ಲೋಬೊ ಹಾಗೂ ಮೇಲಂತಬೆಟ್ಟು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲರು ಡಾ. ಆಂಟನಿ ಇವರುಗಳು ಜಂಟಿಯಾಗಿ ಉದ್ಘಾಟಿಸಿದರು.

ಕಾರ್ಯಕ್ರಮದ ಯಶಸ್ಸು ವಿದ್ಯಾರ್ಥಿಗಳ ಕೈಯಲ್ಲಿದೆ ಇದರ ಸದ್ಬಳಕೆ ಮಾಡಿಕೊಂಡು ತಮ್ಮ ಅಮೂಲ್ಯವಾದ ಜೀವನವನ್ನು ರೂಪಿಸಿಕೊಳ್ಳಿ ಎಂಬ ಸಲಹೆ ನೀಡಿದರು. ಯಾವುದೇ ಫಲಾಫೇಕ್ಷೆ ಇಲ್ಲದೆ ತರಬೇತಿ ನೀಡುತ್ತಿರುವ ಉಪನ್ಯಾಸಕರನ್ನು ಮುಕ್ತ ಕಂಠದಿಂದ ಪ್ರಶಂಶಿಸಿದರು.

ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಸುಕುಮಾರ್ ಜೈನ್ ವಹಿಸಿದ್ದರು. ಗಣಿತಶಾಸ್ತ್ರ ಉಪನ್ಯಾಸಕರಾದ ಮೋಹನ್ ಭಟ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕರದ ಶೀನಾ ನಾಡೋಳಿ ಸ್ವಾಗತಿಸಿದರೆ ಉಪನ್ಯಾಸಕ ಗಣಪತಿ ಭಟ್. ವಂದನಾರ್ಪಣೆಗೈದರು. ಕಾಲೇಜಿನ ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿ ವೃಂದದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Related posts

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಖಂಡನೆ

Suddi Udaya

ಕೊಕ್ಕಡ: ಹಿರಿಯರ ಸೇವಾ ಪ್ರತಿಷ್ಠಾನದಿಂದ ದಶ ಸಾಧಕರಿಗೆ ಗೌರವಾರ್ಪಣೆ     

Suddi Udaya

ಕೊಕ್ಕಡ ಡೇವಿಡ್ ಜೈಮಿ ರವರ ಮನೆಗೆ ಡೆಪ್ಯೂಟಿ ರಬ್ಬರ್ ಪ್ರೊಡಕ್ಷನ್ ಕಮೀಷನರ್ ಭೇಟಿ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿನಿಧಿಯಿಂದ ಪುಸ್ತಕ ವಿತರಣೆ

Suddi Udaya

ಧಮ೯ಸ್ಥಳ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಲಾಯಿಲ: ಪುತ್ರಬೈಲಿ‌ನಲ್ಲಿ ಸರಕಾರದ ಕುಡಿಯುವ ನೀರಿನ ಬಾವಿ ಕಲುಷಿತಗೊಳಿಸಿ ಜಾಗ ಒತ್ತುವರಿ

Suddi Udaya
error: Content is protected !!