22.1 C
ಪುತ್ತೂರು, ಬೆಳ್ತಂಗಡಿ
March 30, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಸಮಿತಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಉಜಿರೆ ಹಳೆಪೇಟೆ ಸಮಿತಿ ವತಿಯಿಂದ 77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ” ಪ್ರತಿಯೊಬ್ಬ ಕಾರ್ಮಿಕನೂ ಸ್ವಾತಂತ್ರ್ಯದ ರಕ್ಷಕರಾಗಲಿ ಎಂಬ ಧ್ಯೇಯ ವಾಕ್ಯದೊಂದಿಗೆ ಕಾರ್ಯಕ್ರಮ ಅಧ್ಯಕ್ಷರಾದ ಬಶೀರ್ ಅತ್ತಾಜೆ ಅವರ ಅಧ್ಯಕ್ಷತೆಯಲ್ಲಿ ಹಳೆಪೇಟೆ ಟಿ-ಬಿ ಕ್ರಾಸ್ ಬಳಿ ನಡೆಯಿತು.


77ನೇ ಸ್ವಾತಂತ್ರ್ಯ ದಿನಾಚರಣೆ ದ್ವಜಾರೋಹಣವನ್ನು ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣಾಧಿಕಾರಿ ಅರ್ಜುನ್ ಅವರು ನೆರವೇರಿಸಿ ಸ್ವಾತಂತ್ರ್ಯ ದಿನದ ಮಹತ್ವದ ಬಗ್ಗೆ ಮಾತನಾಡಿದರು.
ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕಾರ್ಮಿಕರ ತೊಡಗುವಿಕೆಯ ಬಗ್ಗೆ ಮತ್ತು ಹೋರಾಟಗಳ ಬಗ್ಗೆ ಎಸ್‌ಡಿಟಿಯು ರಾಜ್ಯ ನಾಯಕರಾದ ಖಾದರ್ ಫರಂಗಿಪೇಟೆ ಯವರು ಪ್ರಸ್ತಾವಿಕ ಭಾಷಣ ಮಾತನಾಡಿದರು.


ಮುಖ್ಯ ಅತಿಥಿಗಳಾಗಿ ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸೀದಿ ಖತಿಬಾರದ ಅಬುಸ್ವಾಲಿ ಕಾಮಿಲ್ ಸಖಾಫಿ, ಉದ್ಯಮಿ ಪಾಂಡುರಂಗ ಭಂಡಾರ್ಕರ್, ಬೆಳ್ತಂಗಡಿ ತಾಲೂಕು ಘಟಕ ಅಧ್ಯಕ್ಷರಾದ ಸಾಲಿ ಮದ್ದಡ್ಕ, ಕಾರ್ಯದರ್ಶಿ ರಿಯಾಜ್ ಪನಕಜೆ, ಸೂರಪ್ಪ, ಸುರೇಶ್, ಲತೀಫ್ ಉಜಿರೆ, ಲಾಯಿಲ ಪಂಚಾಯತ್ ಸದಸ್ಯರಾದ ಶಮಾ ಆಲಿ, ಮರಿಯಮ್ಮ ಸಲೀಮ್ ಕುಂಟಿನಿ, ಎಸ್‌ಡಿಟಿಯು ಪದಾಧಿಕಾರಿಗಳು ಮತ್ತು ಉಜಿರೆ ಹಳೆಪೇಟೆ ರಿಕ್ಷಾ ಚಾಲಕರು ಮಾಲಕರು ಉಪಸ್ಥಿತರಿದ್ದರು.


ಬೆಳ್ತಂಗಡಿ ತಾಲೂಕು ಸಮಿತಿ ಸದಸ್ಯ ಸಾಹುಲ್ ಉಜಿರೆ ಕಾರ್ಯಕ್ರಮವನ್ನು ನಿರೂಪಿಸಿ ಧನ್ಯವಾದಗೈದರು.

Related posts

ವೇಣೂರು ಜುಮಾ ಮಸೀದಿಯಲ್ಲಿ 75ನೇ ಗಣರಾಜೋತ್ಸವ ದಿನಾಚರಣೆ

Suddi Udaya

ಬೈಕ್ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಬೆಳಾಲಿನ ಶೀನಪ್ಪ ಗೌಡ ನಿಧನ

Suddi Udaya

ಶ್ರೀ ಬಾಹುಬಲಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ: 130 ಕೋಟಿ ವ್ಯವಹಾರ- ರೂ.17.92 ಲಕ್ಷ ಲಾಭ -ಶೇ 14 ಡಿವಿಡೆಂಟ್

Suddi Udaya

ತುಳುವೆರೆ ಪಕ್ಷದ ಅಭ್ಯರ್ಥಿ ಶೈಲೇಶ್ ಆರ್. ಜೆ. ಮತದಾನ

Suddi Udaya

ಮೈಸೂರು ದಸರಾ ಸಿ.ಎಂ ಕಪ್ ನ ಸ್ನಾಚ್, ಕ್ಲೀನ್ ಮತ್ತು ಜೆರ್ಕ್ ನಲ್ಲಿ ನಿಡ್ಲೆಯ ಪ್ರತ್ಯುಷ್‌ ರವರಿಗೆ ಗೋಲ್ಡ್ ಮೆಡಲ್

Suddi Udaya

ಅಂತರ್ ಕಾಲೇಜು ಪ.ಪೂ. ವಿದ್ಯಾರ್ಥಿಗಳ “ಯುನಿಟಸ್ 2023” : ಪ್ರಸನ್ನ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ