April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಧನ ಸಂಗ್ರಹ, ಹಸ್ತಾಂತರ

ಹತ್ಯಡ್ಕ: ಇಲ್ಲಿಯ ಮುದ್ದಿಗೆ, ಕುಂಟಾಲಪಳಿಕೆ, ಕಳೆಂಜವನ್ನು ಕೊಕ್ಕಡಕ್ಕೆ ಸಂಪರ್ಕಿಸುವ ರಸ್ತೆಯಲ್ಲಿ ಕಪಿಲಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕಿರುರಸ್ತೆಯ ದುರಸ್ತಿ ಕಾರ್ಯ ಇತ್ತೀಚೆಗೆ ನಡೆಯಿತು.

ಈ ಸಂದರ್ಭದಲ್ಲಿ ಊರ ಪರವೂರ ದಾನಿಗಳಿಂದ, ವಿವಿಧ ಸಂಘಟನೆಗಳಿಂದ ಧನಸಹಾಯವನ್ನು ಯಾಚಿಸಲಾಯಿತು. ಕಪಿಲ ಕೇಸರಿ ಯುವಕ ಮಂಡಲ ಕುಂಟಾಲಪಳಿಕೆ ಇದರ ಕಾರ್ಯಕರ್ತರು ಯುವಕ ಮಂಡಲದ ಸದಸ್ಯರುಗಳಿಂದ ಹಾಗೂ ಊರ ದಾನಿಗಳಿಂದ ಸಂಗ್ರಹಿಸಿದ ರೂ.25,360 ಮೊತ್ತವನ್ನು ಯುವಕ ಮಂಡಲದ ಅಧ್ಯಕ್ಷ ರಾಜೇಶ್ ಬೊಳ್ಳೋಡಿ ಇವರ ಮುಂದಾಳತ್ವದಲ್ಲಿ ಸೇತುವೆ ದುರಸ್ತಿ ಕಾರ್ಯ ಸಮಿತಿ ಕಾರ್ಯದರ್ಶಿ ಪ್ರಶಾಂತ ಹೆಬ್ಬಾರ್ ಅವರಿಗೆ ಹಸ್ತಾಂತರಿಸಲಾಯಿತು.

ಯುವಕ ಮಂಡಲದ ಕಾರ್ಯದರ್ಶಿ ಸುಮಂತ್ ಗೌಡ, ಉಪಾಧ್ಯಕ್ಷ ಹರಿಪ್ರಸಾದ್ ಗೌಡ ಹಾಗೂ ಸದಸ್ಯ ಜಿತೇಂದ್ರ ಹೆಬ್ಬಾರ್ ಉಪಸ್ಥಿತರಿದ್ದರು.

Related posts

ಬೆಳಾಲು ಗ್ರಾಮ ಪಂಚಾಯತ್‌ನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಭಾರೀ ಮಳೆ : ತೆಕ್ಕಾರುವಿನ ಅಜಿಲ ಮುಗೇರು ಮಸೀದಿಯ ಎದುರು ರಸ್ತೆ ಸಂಪೂರ್ಣ ಜಲಾವೃತ

Suddi Udaya

ಹೀರ್ಯ “ಅಕ್ಷಯ ನಿಲಯ” ಗೃಹ ಪ್ರವೇಶ, ಭಜನಾ ಸೇವೆ ಹಾಗೂ ಯಕ್ಷಗಾನ ಬಯಲಾಟ

Suddi Udaya

ಫ್ರೆಂಡ್ಸ್ ಗರ್ಡಾಡಿ ವತಿಯಿಂದ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಬಂದಾರು: ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನ

Suddi Udaya

ಪಡಂಗಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!