25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಧನ ಸಂಗ್ರಹ, ಹಸ್ತಾಂತರ

ಹತ್ಯಡ್ಕ: ಇಲ್ಲಿಯ ಮುದ್ದಿಗೆ, ಕುಂಟಾಲಪಳಿಕೆ, ಕಳೆಂಜವನ್ನು ಕೊಕ್ಕಡಕ್ಕೆ ಸಂಪರ್ಕಿಸುವ ರಸ್ತೆಯಲ್ಲಿ ಕಪಿಲಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕಿರುರಸ್ತೆಯ ದುರಸ್ತಿ ಕಾರ್ಯ ಇತ್ತೀಚೆಗೆ ನಡೆಯಿತು.

ಈ ಸಂದರ್ಭದಲ್ಲಿ ಊರ ಪರವೂರ ದಾನಿಗಳಿಂದ, ವಿವಿಧ ಸಂಘಟನೆಗಳಿಂದ ಧನಸಹಾಯವನ್ನು ಯಾಚಿಸಲಾಯಿತು. ಕಪಿಲ ಕೇಸರಿ ಯುವಕ ಮಂಡಲ ಕುಂಟಾಲಪಳಿಕೆ ಇದರ ಕಾರ್ಯಕರ್ತರು ಯುವಕ ಮಂಡಲದ ಸದಸ್ಯರುಗಳಿಂದ ಹಾಗೂ ಊರ ದಾನಿಗಳಿಂದ ಸಂಗ್ರಹಿಸಿದ ರೂ.25,360 ಮೊತ್ತವನ್ನು ಯುವಕ ಮಂಡಲದ ಅಧ್ಯಕ್ಷ ರಾಜೇಶ್ ಬೊಳ್ಳೋಡಿ ಇವರ ಮುಂದಾಳತ್ವದಲ್ಲಿ ಸೇತುವೆ ದುರಸ್ತಿ ಕಾರ್ಯ ಸಮಿತಿ ಕಾರ್ಯದರ್ಶಿ ಪ್ರಶಾಂತ ಹೆಬ್ಬಾರ್ ಅವರಿಗೆ ಹಸ್ತಾಂತರಿಸಲಾಯಿತು.

ಯುವಕ ಮಂಡಲದ ಕಾರ್ಯದರ್ಶಿ ಸುಮಂತ್ ಗೌಡ, ಉಪಾಧ್ಯಕ್ಷ ಹರಿಪ್ರಸಾದ್ ಗೌಡ ಹಾಗೂ ಸದಸ್ಯ ಜಿತೇಂದ್ರ ಹೆಬ್ಬಾರ್ ಉಪಸ್ಥಿತರಿದ್ದರು.

Related posts

ಜಿಲ್ಲಾ ಮಟ್ಟದ ಕ್ರೀಡೋತ್ಸವ ಸ್ಪರ್ಧೆ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿಗಳು ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ

Suddi Udaya

ಉಜಿರೆ ಗ್ರಾ.ಪಂ. ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟದ ನೇತೃತ್ವದಲ್ಲಿ “ಅಕ್ಕ ಕೆಫೆ ” ಶುಭಾರಂಭ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಜೇನು ಕುಟುಂಬಕ್ಕಾಗಿ ಕಾಡಿಗೆ ತೆರಳಿದ್ದ ಅಣ್ಣ ಸಂತೋಷ್‌ಗೆ ಕಚ್ಚಿದ ಹಾವು: ಬಾಯಿಯಿಂದ ವಿಷ ಹೀರಿ ಅಣ್ಣನ ಜೀವ ಉಳಿಸಿದ ತಮ್ಮ ಗಣೇಶ್

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ IGNITE 2K25

Suddi Udaya

ವೇಣೂರು ಸಿಎ ಬ್ಯಾಂಕಿನಿಂದ ಹೊಸ ಬಸ್ ತಂಗುದಾನಕ್ಕೆ ಕುಡಿಯುವ ನೀರಿನ ಪಿಲ್ಟರ್ ಕೊಡುಗೆ

Suddi Udaya
error: Content is protected !!