25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಧನ ಸಂಗ್ರಹ, ಹಸ್ತಾಂತರ

ಹತ್ಯಡ್ಕ: ಇಲ್ಲಿಯ ಮುದ್ದಿಗೆ, ಕುಂಟಾಲಪಳಿಕೆ, ಕಳೆಂಜವನ್ನು ಕೊಕ್ಕಡಕ್ಕೆ ಸಂಪರ್ಕಿಸುವ ರಸ್ತೆಯಲ್ಲಿ ಕಪಿಲಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕಿರುರಸ್ತೆಯ ದುರಸ್ತಿ ಕಾರ್ಯ ಇತ್ತೀಚೆಗೆ ನಡೆಯಿತು.

ಈ ಸಂದರ್ಭದಲ್ಲಿ ಊರ ಪರವೂರ ದಾನಿಗಳಿಂದ, ವಿವಿಧ ಸಂಘಟನೆಗಳಿಂದ ಧನಸಹಾಯವನ್ನು ಯಾಚಿಸಲಾಯಿತು. ಕಪಿಲ ಕೇಸರಿ ಯುವಕ ಮಂಡಲ ಕುಂಟಾಲಪಳಿಕೆ ಇದರ ಕಾರ್ಯಕರ್ತರು ಯುವಕ ಮಂಡಲದ ಸದಸ್ಯರುಗಳಿಂದ ಹಾಗೂ ಊರ ದಾನಿಗಳಿಂದ ಸಂಗ್ರಹಿಸಿದ ರೂ.25,360 ಮೊತ್ತವನ್ನು ಯುವಕ ಮಂಡಲದ ಅಧ್ಯಕ್ಷ ರಾಜೇಶ್ ಬೊಳ್ಳೋಡಿ ಇವರ ಮುಂದಾಳತ್ವದಲ್ಲಿ ಸೇತುವೆ ದುರಸ್ತಿ ಕಾರ್ಯ ಸಮಿತಿ ಕಾರ್ಯದರ್ಶಿ ಪ್ರಶಾಂತ ಹೆಬ್ಬಾರ್ ಅವರಿಗೆ ಹಸ್ತಾಂತರಿಸಲಾಯಿತು.

ಯುವಕ ಮಂಡಲದ ಕಾರ್ಯದರ್ಶಿ ಸುಮಂತ್ ಗೌಡ, ಉಪಾಧ್ಯಕ್ಷ ಹರಿಪ್ರಸಾದ್ ಗೌಡ ಹಾಗೂ ಸದಸ್ಯ ಜಿತೇಂದ್ರ ಹೆಬ್ಬಾರ್ ಉಪಸ್ಥಿತರಿದ್ದರು.

Related posts

ಶಿಬಾಜೆ ಹರೀಶ್ ಮುಗೇರ ಆತ್ಮಹತ್ಯೆಗೆ ಯತ್ನಿಸಿಲ್ಲ: ಎಸ್.ಪಿ ಸ್ಪಷ್ಟನೆ

Suddi Udaya

ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕೊಕ್ಕಡ: ನಿವೃತ್ತ ಮುಖ್ಯೋಪಾಧ್ಯಾಯ ನಾರಾಯಣ ಶಬರಾಯ ನಿಧನ

Suddi Udaya

ಮೇ 31: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ : ಲಾರಿ- ಬೈಕ್ ಅಪಘಾತದಲ್ಲಿ ಇಬ್ಬರು ಸಾವು ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಿಂದ ಲಾರಿ ಚಾಲಕನಿಗೆ ದಂಡ ಹಾಗೂ ಜೈಲು ಶಿಕ್ಷೆ ಪ್ರಕಟ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಲಾಯಿಲ ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya
error: Content is protected !!