25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಧನ ಸಂಗ್ರಹ, ಹಸ್ತಾಂತರ

ಹತ್ಯಡ್ಕ: ಇಲ್ಲಿಯ ಮುದ್ದಿಗೆ, ಕುಂಟಾಲಪಳಿಕೆ, ಕಳೆಂಜವನ್ನು ಕೊಕ್ಕಡಕ್ಕೆ ಸಂಪರ್ಕಿಸುವ ರಸ್ತೆಯಲ್ಲಿ ಕಪಿಲಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕಿರುರಸ್ತೆಯ ದುರಸ್ತಿ ಕಾರ್ಯ ಇತ್ತೀಚೆಗೆ ನಡೆಯಿತು.

ಈ ಸಂದರ್ಭದಲ್ಲಿ ಊರ ಪರವೂರ ದಾನಿಗಳಿಂದ, ವಿವಿಧ ಸಂಘಟನೆಗಳಿಂದ ಧನಸಹಾಯವನ್ನು ಯಾಚಿಸಲಾಯಿತು. ಕಪಿಲ ಕೇಸರಿ ಯುವಕ ಮಂಡಲ ಕುಂಟಾಲಪಳಿಕೆ ಇದರ ಕಾರ್ಯಕರ್ತರು ಯುವಕ ಮಂಡಲದ ಸದಸ್ಯರುಗಳಿಂದ ಹಾಗೂ ಊರ ದಾನಿಗಳಿಂದ ಸಂಗ್ರಹಿಸಿದ ರೂ.25,360 ಮೊತ್ತವನ್ನು ಯುವಕ ಮಂಡಲದ ಅಧ್ಯಕ್ಷ ರಾಜೇಶ್ ಬೊಳ್ಳೋಡಿ ಇವರ ಮುಂದಾಳತ್ವದಲ್ಲಿ ಸೇತುವೆ ದುರಸ್ತಿ ಕಾರ್ಯ ಸಮಿತಿ ಕಾರ್ಯದರ್ಶಿ ಪ್ರಶಾಂತ ಹೆಬ್ಬಾರ್ ಅವರಿಗೆ ಹಸ್ತಾಂತರಿಸಲಾಯಿತು.

ಯುವಕ ಮಂಡಲದ ಕಾರ್ಯದರ್ಶಿ ಸುಮಂತ್ ಗೌಡ, ಉಪಾಧ್ಯಕ್ಷ ಹರಿಪ್ರಸಾದ್ ಗೌಡ ಹಾಗೂ ಸದಸ್ಯ ಜಿತೇಂದ್ರ ಹೆಬ್ಬಾರ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಹನ್ನೆರಡನೇ ಸುತ್ತಿನಲ್ಲಿ 11360 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಎಸ್‌ಡಿಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಎಸ್‌ಡಿಎಂ ಕಾಲೇಜು ಆಫ್ ನ್ಯಾಚುರೋಪತಿ ಸಂಯುಕ್ತ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನದ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya

ಜಾತಕ ತೋರಿಸಲು ಬಂದ ಯುವತಿಯ ಹಿಂದೆ ಬಿದ್ದ ಜ್ಯೋತಿಷಿ: ವಿವಾಹಯಾಗುವಂತೆ ಒತ್ತಾಯಿಸಿ ಮಾಟಮಂತ್ರ ಮಾಡಿದ ಜ್ಯೋತಿಷಿಯನ್ನು ಬಂಧಿಸಿದ ಪೊಲೀಸರು

Suddi Udaya

ಚಾರ್ಮಾಡಿಯಲ್ಲಿ ಕಾಡುಪ್ರಾಣಿ ಬೇಟೆ ಪ್ರಕರಣ: ಇಬ್ಬರು ಆರೋಪಿಗಳ ಮೇಲೆ ಪ್ರಕರಣ ದಾಖಲು

Suddi Udaya

ಉಪ್ಪಿನಂಗಡಿ: ನೇತ್ರಾವತಿ ಮತ್ತು ಕುಮಾರಧಾರ ನದಿಯಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ: ಸಂಗಮ ಆಗಲು 2 ಮೆಟ್ಟಿಲು ಬಾಕಿ; ನಿರೀಕ್ಷೆಯಲ್ಲಿ ಭಕ್ತರು

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ಕಾರ್ಯಕ್ರಮ

Suddi Udaya
error: Content is protected !!