April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಜೂರು ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕಾಜೂರು ಶಾಲಾ ವಠಾರದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯು ನಡೆಯಿತು. ಕಾಜೂರು ದರ್ಗಾ ಸಮಿತಿ ಅಧ್ಯಕ್ಷರಾದ ಕೆ ಯು ಇಬ್ರಾಹಿಂ ದ್ವಜಾರೋಹಣಗೈದರು. ಸಯ್ಯಿದ್ ಝೈನುಲ್ ಆಬಿದ್ ಜಮಲುಲೈಲಿ ತಂಙಳ್ ರವರು ಶುಭ ಸಂದೇಶ ನೀಡಿ ಆಶಿರ್ವಚನ ಮಾಡಿದರು.

ಮುದರ್ರಿಸರಾದ ತೌಸೀಫ್ ಸಅದಿ ಹರೇಕಳ ಹಾಗೂ ಶಿಕ್ಷಣ ಸಂಸ್ಥೆಗಳ ಮಾರ್ಗದರ್ಶಕ ಕೆ ಎಂ ಸಿದ್ದೀಕ್ ಮೋಂಟುಗೋಳಿ ಶುಭಕೋರಿದರು. ದರ್ಗಾ ಸಮಿತಿ ಪ್ರ.ಕಾರ್ಯದರ್ಶಿ ಹಾಗೂ ರಾಹ ಎಜ್ಯುಕೇಶನಲ್ ಟ್ರಸ್ಟ್ ಚೇರ್ಮನ್ ಜೆ ಹೆಚ್ ಅಬೂಬಕರ್ ಸಿದ್ದೀಕ್, ದರ್ಗಾ ಸಮಿತಿ ಕೋಶಾಧಿಕಾರಿ ಮಹಮ್ಮದ್ ಕಮಾಲ್, ರಾಹ ಎಜ್ಯುಕೇಶನ್ ಸಂಚಾಲಕರಾದ ಅಶ್ಫಾಕ್, ಫೈನಾನ್ಸ್ ಸೆಕ್ರೇಟರಿ ಆಸಿಫ್ ಜೆ.ಎಚ್, ಸದರ್ ಉಸ್ತಾದ್ ಜಮಾಲ್ ಲತೀಫಿ, ಆರ್.ಜೆ.ಎಂ ಕಾಜೂರು ಮಾಜಿ ಅಧ್ಯಕ್ಷರಾದ ಬಿ ಎ ಯೂಸುಫ್ ಶರೀಫ್ ಹಾಗೂ ದರ್ಗಾ ಸಮಿತಿಯ ಪದಾದಿಕಾರಿಗಳು, ನಿರ್ದೇಶಕರುಗಳು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ಸೆಸ್ಸೆಫ್, ಎಸ್ ವೈ ಎಸ್, ಅಂಗ ಸಂಸ್ಥೆಗಳಾದ ಸ್ವಲಾತ್ ಕಮಿಟಿ, ದಫ್ ಸಮಿತಿ, ಕೆ.ಡಿ.ಸಿ ಪದಾಧಿಕಾರಿಗಳು ಮತ್ತು ಸದಸ್ಯರು, ಕಾಜೂರು, ಕುಕ್ಕಾವು, ದಿಡುಪೆ ಮತ್ತು ಜಿ ನಗರ ಮದ್ರಸಗಳ ಆಡಳಿತ ಸಮಿತಿ, ಶಾಲಾ ಶಿಕ್ಷಕ-ರಕ್ಷಕ ಸಮಿತಿ ಮತ್ತು ಮದ್ರಸ ಶಿಕ್ಷಕ-ರಕ್ಷಕ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದರು. ಮದ್ರಸ, ದರ್ಸ್, ಪ್ರೌಢಶಾಲೆ, ಪಬ್ಲಿಕ್ ಸ್ಕೂಲ್, ಶರೀಅತ್ ಕಾಲೇಜು, ಪಿಯುಸಿ ಸಿಬ್ಬಂದಿ ವರ್ಗ, ಜಮಾಅತ್ ಭಾಂದವರು, ವಿದ್ಯಾರ್ಥಿಗಳು ಭಾಗವಹಿಸಿದರು.

ಈ ಸಂದರ್ಭದಲ್ಲಿ ರಾಹ ಪಬ್ಲಿಕ್ ಸ್ಕೂಲ್ ಇದರ ನೂತನ ಶಾಲಾ ವಾಹನ ಲೋಕಾರ್ಪಣೆ ಮಾಡಲಾಯಿತು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಸಾಧನ ಪ್ರಶಸ್ತಿ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಗುತ್ತಿಗಾರು ಫಾ. ಆದರ್ಶ್ ಜೋಸೆಫ್ ರವರಿಗೆ ಹ್ಯೂಮನಿಟೆರಿಯನ್ ಎಕ್ಸಲೆನ್ಸ್ ಅವಾರ್ಡ್

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮತ್ತು ವಿಜ್ಞಾನ ಮಾದರಿಗಳ ಪ್ರದರ್ಶನ ಕಾರ್ಯಕ್ರಮ

Suddi Udaya

ಪುದುವೆಟ್ಟು ಶ್ರೀಧ.ಮಂ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ಗರ್ಡಾಡಿ ನಂದಿಬೆಟ್ಟು ಶ್ರೀ ನಂದಿಕೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya
error: Content is protected !!