30.3 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿಶಾಲಾ ಕಾಲೇಜು

ತುಳು ಲಿಪಿ ಆನ್-ಲೈನ್ ಪರೀಕ್ಷೆ: ಪಂಚಮಿ ಬಿ.ಆರ್ ಶತಃ ಪ್ರತಿಶತ ಸಾಧನೆ

ಬೆಳ್ತಂಗಡಿ: ತುಳುನಾಡು ಸಹಿತ ವಿಶ್ವದ ನಾನಾ ಭಾಗಗಳಲ್ಲಿ ಇರುವ ತುಳು ಭಾಷಿಕರಲ್ಲಿ ತುಳು ಲಿಪಿಯ ಬಗ್ಗೆ ಅರಿವು ಮತ್ತು ಆಸಕ್ತಿ ಮೂಡಿಸುವ ಉದ್ದೇಶದಿಂದ ‘ಜೈ ತುಳುನಾಡು (ರಿ.) ಸಂಘಟನೆ ನಡೆಸುವ ತುಳು ಲಿಪಿ ಆನ್-ಲೈನ್ ತರಗತಿಯಲ್ಲಿ ಭಾಗವಹಿಸಿ ಬಳಿಕ ನಡೆದ ಆನ್-ಲೈನ್ ಪರೀಕ್ಷೆಯಲ್ಲಿ ಪಂಚಮಿ ಬಿ.ಆರ್. 100 ಕ್ಕೆ 100 ಅಂಕಗಳನ್ನು ಗಳಿಸುವ ಮೂಲಕ ವಿಶೇಷ ಸಾಧನೆಯನ್ನು ಮಾಡಿದ್ದಾರೆ.

ಧಾರವಾಡದಲ್ಲಿರುವ JJS ಮಂಜುನಾಥೇಶ್ವರ ಸೆಂಟ್ರಲ್ ಸ್ಕೂಲ್ ನಲ್ಲಿ 8ನೇ ತರಗತಿ ವ್ಯಾಸಾಂಗ ಮಾಡುತ್ತಿರುವ ಇವರು ಕಾಸರಗೂಡಿನ ದೇಲಂಪಾಡಿ ಗ್ರಾಮದ ಬಂದ್ಯಡ್ಕ ರಾಜೇಶ್ ಹಾಗೂ ಚಿತ್ರಕಲಾ ದಂಪತಿಯ ಪುತ್ರಿ.

ಕಳೆದ ವರ್ಷ ನವಂಬರ್ 22ರಂದು ತುಳು ಲಿಪಿ ತರಗತಿಯನ್ನು ಆನ್ ಲೈನ್ ಮುಖಾಂತರ ಜೈ ತುಳುನಾಡು (ರಿ) ಸಂಘಟನೆ ಆಯೋಜಿಸಿತ್ತು. ಸುಮಾರು 3-4 ತಿಂಗಳುಗಳ ಕಾಲ ನಡೆದ ಈ ತರಗತಿಯಲ್ಲಿ ಮೂವರು ಶಿಕ್ಷಕರು ತುಳು ವರ್ಣಮಾಲೆ, ಕಾಗುಣಿತ ಮತ್ತು ಅಂಕೆಗಳ ಪಾಠವನ್ನು ಹೇಳಿಕೊಡುತ್ತಿದ್ದರು.

ಬಳಿಕ, ಶಬ್ದಗಳು, ವಾಕ್ಯ ರಚನೆ, ತುಳುವಿನಿಂದ ಕನ್ನಡಕ್ಕೆ ಬರೆಯೋದು, ಕನ್ನಡದಿಂದ ತುಳು ಭಾಷೆಯ ಲಿಪಿಯಲ್ಲಿ ಬರೆಯೋದನ್ನು ಶಿಕ್ಷಕರು ದಿನನಿತ್ಯ ಹೇಳಿಕೊಡುತ್ತಿದ್ದರು.

ಈ ಪಾಠವೆಲ್ಲಾ ಮುಗಿದ ಬಳಿಕ, ಜುಲೈ. 23ರಂದು ಜೈ ತುಳುನಾಡು ಸಂಘಟನೆ ಮುಖಾತರ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಪರೀಕ್ಷೆಗಳ ಫಲಿತಾಂಶ ಆಗಸ್ಟ್ 15ರಂದು ಬಂದಿದ್ದು ಇದರಲ್ಲಿ ಪಂಚಮಿ ಬಿ ಆರ್ 100ಕ್ಕೆ 100 ಅಂಕಗಳನ್ನು ತೆಗೆದುಕೊಂಡು ಮೊದಲ ಸ್ಥಾನ ಪಡೆದಿಕೊಂಡಿದ್ದಾರೆ. ಕರ್ನಾಟಕ ತುಳು ಅಕಾಡೆಮಿ ಶೀಘ್ರದಲ್ಲೇ ಪ್ರಮಾಣ ಪತ್ರವನ್ನು ವಿತರಿಸಲಿದೆ.

Related posts

ಜು.13: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಷ್ಟ್ರೀಯ ಲೋಕ ಅದಾಲತ್ : ವಿವಿಧ ಪ್ರಕರಣಗಳು ಇತ್ಯರ್ಥಗೊಳಿಸಲು ಅವಕಾಶ

Suddi Udaya

ಲಾಯಿಲ ಸೈಂಟ್ ಮೇರಿಸ್ ಶಾಲೆ ರಜತ ಮಹೋತ್ಸವ ಸಂಭ್ರಮ: ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ ಶಾಲೆಯ ಆಡಳಿತ ಮಂಡಳಿ

Suddi Udaya

ಎಸ್ ಡಿ ಎಂ ಬೆಳ್ತಂಗಡಿ ಆಂಗ್ಲ ಮಾಧ್ಯಮ ಶಾಲೆಗೆ ಸಿ ಡಬ್ಲ್ಯೂ ಬಿ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಬೆಳ್ತಂಗಡಿ ವಕೀಲರ ಭವನಕ್ಕೆ ಕರ್ನಾಟಕ ಲೋಕಾಯುಕ್ತ ರಿಜಿಸ್ಟರ್ ಶ್ರೀಮತಿ ಉಷಾರಾಣಿ ಭೇಟಿ

Suddi Udaya

ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ನ ಮಹಾಸಭೆ ಮತ್ತು ಮಾಹಿತಿ ಕಾರ್ಯಗಾರ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ಕುಮಾರ್ ರವರಿಗೆ ಶಾಲೆಯ ವತಿಯಿಂದ ಅಭಿನಂದನೆ

Suddi Udaya
error: Content is protected !!