28.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಗಳ ವತಿಯಿಂದ 76ನೇ ಸ್ವಾತಂತ್ರ್ಯೋತ್ಸವವನ್ನು ಅತ್ಯಂತ ಅದ್ದೂರಿಯಾಗಿ ಆಚರಿಸಲಾಯಿತು. ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಂ| ಸ್ಟ್ಯಾನಿ ಗೋವಿಯಸ್ ಧ್ವಜಾರೋಹಣ ನೆರವೇರಿಸಿದರು.

ಅವರು ಆ. 15 ಭಾರತೀಯರು ಚರಿತ್ರೆಯನ್ನು ಅವಲೋಕಿಸುವ ಸುದಿನ. ಇಂದು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾತ್ಮರನ್ನು ಸ್ಮರಿಸುವುದು ಮುಖ್ಯವಾಗಿದೆ. ಪ್ರಪಂಚದಲ್ಲಿ ವಿವಿಧತೆಯಲ್ಲಿ ಏಕತೆಯನ್ನು ಸಾರಿದ ಏಕೈಕ ರಾಷ್ಟ್ರವೆಂದರೆ ಅದು ಭಾರತ ಮಾತ್ರ.
ನಿರುದ್ಯೋಗ, ಭ್ರಷ್ಟಾಚಾರ, ಅಸಹಿಷ್ಣುತೆ ದೂರವಾಗಿರಲಿ ಆಶಾವಾದಿಗಳಾಗಿ ಮಹಾತ್ಮ ಗಾಂಧೀಜಿ ಕಂಡ ಕನಸು ನನಸಾಗಿಸೋಣ, ರಾಷ್ಟ್ರ ನಮಗೆ ಏನನ್ನು ಕೊಡುತ್ತದೆ ಇದು ಮುಖ್ಯವಲ್ಲ ನಾವು ರಾಷ್ಟ್ರಕ್ಕಾಗಿ ಯಾವ ಕೊಡುಗೆಯನ್ನು ನೀಡುತ್ತೇವೆ ಇದು ಬಹಳ ಮುಖ್ಯ. ಕಾನೂನು, ಸೌಹಾರ್ದತೆ, ಸಾಮರಸ್ಯಕ್ಕೆ ಧಕ್ಕೆ ತರದೆ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡರೆ ದೇಶ ಸೇವೆ ಮಾಡಿದಂತೆ, ರಾಷ್ಟ್ರ ಅಭಿವೃದ್ಧಿಯ ಕಾರ್ಯದಲ್ಲಿ ಸರ್ವರು ಕೈಜೋಡಿಸೋಣ ಎಂದು ಅವರು ತಮ್ಮ ಸಂದೇಶವನ್ನು ನೀಡಿದರು.


ಸೇಕ್ರೆಡ್ ಹಾರ್ಟ್ ಚರ್ಚ್ ನ ಸಹಾಯಕ ಧರ್ಮ ಗುರುಗಳಾದ ವಂ|ವಿಲಿಯಂ ಡಿ ಸೋಜ ,ಸೇಕ್ರೆಡ್ ಹಾರ್ಟ್ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಜೆರಾಲ್ಡ್ ಮೋರಸ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಂ|ಜೆರೊಮ್ ಡಿಸೋಜಾ, ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕರಾದ ವಂ| ದೀಪಕ್ ಡೇಸಾ, ಗಾರ್ಡಿಯನ್ ಏಂಜಲ್ಸ್ ಹಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕಿ ಹೆಲೆನ್ ಮೋನಿಕಾ ಲೊಬೊ, ಸೇಕ್ರೆಡ್ ಹಾರ್ಟ್ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿ ಲಿಯೋ ನರೋನ್ಹಾ, ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ವಿನಯ್ ಡಿಸೋಜ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಎನ್. ಸಿ.ಸಿ, ಕಬ್ಸ್, ಸ್ಕೌಟ್ಸ್ , ಬುಲ್ ಬುಲ್,ಗೈಡ್ಸ್, ಮುಂತಾದ ತಂಡಗಳಿಂದ ಆಕರ್ಷಕ ಪಥ ಸಂಚಲನ ಜರುಗಿತು. ಸೇಕ್ರೆಡ್ ಹಾರ್ಟ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಅಲೆಕ್ಸ್ ಐವನ್ ಪಿಂಟೋ ಸ್ವಾಗತಿಸಿ, ವಿದ್ಯಾರ್ಥಿನಿ ಅಫ್ರೀನ್ ತಾಜ್ ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿದರು. ಸೇಕ್ರೆಡ್ ಹಾರ್ಟ್ ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಮೋಹನ್ ನಾಯಕ್ ವಂದಿಸಿದರು, ಉಪನ್ಯಾಸಕ ವಸಂತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Related posts

ಹರೀಶ್ ಪೂಂಜ ಗೆಲುವು: ಮುಗೇರಡ್ಕದಲ್ಲಿ ಸಂಭ್ರಮಾಚರಣೆ

Suddi Udaya

ಪೆರಾಡಿ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಶಾಸ್ತ್ರೀಯ ಸಂಗೀತ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಸರಸ್ವತಿ ಸಂಗೀತ ಶಾಲೆಗೆ ಶೇಕಡ 100 ಫಲಿತಾಂಶ

Suddi Udaya

ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಮತ್ತು ಸೈಕಲ್ ಪ್ಯೂರ್ ಅಗರಬತ್ತಿ ಸಂಸ್ಥೆಯ ಸಹ ಬ್ರಾಂಡಿಂಗ್ ನೂತನವಾಗಿ ತಯಾರಿಸಲಾದ ಅಗರಬತ್ತಿಗಳ ಲೋಕಾರ್ಪಣೆ

Suddi Udaya

ನಾರಾವಿ: ಮಾಂಡೋವಿ ಮೋಟಾರ್‍ಸ್ ನಾರಾವಿ ಶಾಖೆಯ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಕೃತಜ್ಞತಾ ಸಮಾರಂಭ

Suddi Udaya
error: Content is protected !!