25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪೌಷ್ಟಿಕ ಆಹಾರ ಸಿರಿ ಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

ಶಿಶಿಲ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ .ಟ್ರಸ್ಟ್ ಬೆಳ್ತಂಗಡಿ ತಾಲೂಕು ಅರಸಿನಮಕ್ಕಿ ವಲಯದ ಶಿಶಿಲ ಒಕ್ಕೂಟ ಸಮುದಾಯ ಭವನದಲ್ಲಿ ಶಿಶಿಲ ಹೇವಾಜೆ ಬೂಡುದಮಕ್ಕಿ ಪೆರ್ಲ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪೌಷ್ಟಿಕ ಆಹಾರ ಸಿರಿ ಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಆ.16 ರಂದು ನಡೆಸಲಾಯಿತು .

ಕಾರ್ಯಕ್ರಮದ ಉದ್ಘಾಟನೆಯನ್ನು ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಶ್ರೀನಿವಾಸ ಮೂಡೆತ್ತಾಯರವರು ಉದ್ಘಾಟನೆ ಮಾಡಿ ಶುಭ ಹಾರೈಸಿದರು.

ಬರೋಡಾ ಬ್ಯಾಂಕ್ ಮೆನೇಜರ್ ರಾಕೇಶ್ ಪಿ ನಾಯ್ಕ್ ,ಸಿ.ಎ ಬ್ಯಾಂಕ್ ಮೆನೇಜರ್ ರಂಜಿತ್ ಶೆಟ್ಟಿ,ನಿರ್ದೇಶಕರು ಶ್ರೀಮತಿ ತಾರಾರವರು ಕಾರ್ಯಕ್ರಮಕ್ಕೆ ಸುಭ ಹಾರೈಸಿದರು.ವಲಯ ಮೇಲ್ವಿಚಾರಕರಾದ ಶಶಿಕಲಾರವರು ಜ್ನಾನವಿಕಾಸ ಕಾರ್ಯಕ್ರಮದ ಹುಟ್ಟು ಹಾಗೂ ಧ್ಯೇಯೋದ್ದೇಶಗಳ ಬಗ್ಗೆ ತಿಳಿಸುತ್ತಾ ಸಿರಿ ಧಾನ್ಯ ಬಳಕೆ ಮಾಡಿ ಆರೋಗ್ಯ ವೃದ್ದಿಸಿಕೊಳ್ಳುವಂತೆ ಮಹಿಳೆಯರು ಸೇವಿಸುವ ಪೌಷ್ಟಿಕ ಆಹಾರ ಸೇವನೆ ವಿಧಾನದ ಬಗ್ಗೆ ಮಾಹಿತಿ ನೀಡಿದರು.ಸಿರಿಧಾನ್ಯ ಮಾರುಕಟ್ಟೆ ಅಧಿಕಾರಿಯವರಾದ ವಿವಿಧ ಸಿರಿ ಧಾನ್ಯಗಳ ಪರಿಚಯ ಮಾಡುವುದರೊಂದಿಗೆ ನವಣೆ, ಊದಲು , ಕೊರಳು, ಸಜ್ಜೆ, ಸಾಮೆ ,ರಾಗಿ ಬಳಕೆ ವಿಧಾನ ಇವುಗಳಿಂದ ತಯಾರಿಸುವ ವಿವಿಧ ತಿಂಡಿಗಳ ಬಗ್ಗೆ ಬಳಕೆ ವಿಧಾನ & ರೋಗನಿರೋಧಕ ಶಕ್ತಿ ಬಗ್ಗೆ ಮಾಹಿತಿ ನೀಡಿದರು..

ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದ ಸಮನ್ವಯಧಿಕಾರಿಯವರಾದ ಮಧುರಾರವರು ನಿರೂಪಿಸಿದ ಕಾರ್ಯಕ್ರಮದಲ್ಲಿ ಪೆರ್ಲ ಸೇವಾಪ್ರತಿನಿಧಿ ಅರುಣಾರವರು ಸ್ವಾಗತಿಸಿ ಹೇವಾಜೆ ಸೇವಾಪ್ರತಿನಿಧಿ ರಶ್ಮಿತಾರವರು ಧನ್ಯವಾದ ನೀಡಿದರು ಶಿಶಿಲ ಸೇವಾಪ್ರತಿನಿಧಿ ಗಾಯತ್ರಿ ಉಪಸ್ಥಿತರಿದ್ದರು .

Related posts

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ಇದರ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

Suddi Udaya

ಆಕ್ಸಿಸ್ ಮ್ಯಾಕ್ಸ್ ಲೈಫ್ ಇನ್ಶುರೆನ್ಸ್ ಕಂಪನಿಯ ವತಿಯಿಂದ ಸಿನಿಮಾ , ಧಾರವಾಹಿ , ರಂಗಭೂಮಿಯಲ್ಲಿ ವಿಶೇಷ ಸಾಧನೆಗೈದ ಪ್ರಕಾಶ್ ಸವಣಾಲು ರವರಿಗೆ ಕಲಾರತ್ನ ಪ್ರಶಸ್ತಿ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ಡಿಸ್ಕೌಂಟ್, ಸೀರೆಗಳಿಗೆ ಕೇವಲ ರೂ 99

Suddi Udaya

ಪುದುವೆಟ್ಟು : ಸ್ವರಾಜ್ ನೇಣುಬಿಗಿದು ಆತ್ಮಹತ್ಯೆ

Suddi Udaya

ಕರಾಟೆ ಸ್ಪರ್ಧೆ : ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗೆ ಚಿನ್ನದ ಪದಕ

Suddi Udaya
error: Content is protected !!