ಸ್ವಾತಂತ್ರ್ಯೋತ್ಸವ ಪ್ರಯುಕ್ತ ಎಸ್‌ವೈಎಸ್ ಉಜಿರೆ ಸರ್ಕಲ್ ವತಿಯಿಂದ ಎಂಡೋ ಪೀಡಿತರಿಗೆ ಆಹಾರದ ಕಿಟ್ ವಿತರಣೆ

Suddi Udaya

ಬೆಳ್ತಂಗಡಿ: ಎಸ್‌ವೈಎಸ್ ಉಜಿರೆ ಸರ್ಕಲ್ ವತಿಯಿಂದ ಭಾರತದ 77ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಎಂಡೋಸಲ್ಫಾನ್ ಸಂತ್ರಸ್ತರಿಗೆ ಆಹಾರದ ಕಿಟ್ ವಿತರಣಾ ಕಾರ್ಯಕ್ರಮವು ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಆ.16ರಂದು ನಡೆಯಿತು.

ಅಧ್ಯಕ್ಷತೆಯನ್ನು ಎಸ್‌ವೈಎಸ್ ಉಜಿರೆ ಸರ್ಕಲ್ ಅಧ್ಯಕ್ಷ ಸಲೀಂ ಕನ್ಯಾಡಿ ವಹಿಸಿದ್ದರು. ಉದ್ಘಾಟನೆಯನ್ನು ಸುನ್ನೀ ಮೆನೇಜ್‌ಮೆಂಟ್ ಅಸೋಸಿಯೇಷನ್ (ಎಸ್‌ಎಮ್‌ಎ) ರಾಜ್ಯಾಧ್ಯಕ್ಷ ಸಯ್ಯಿದ್ ಇಸ್ಮಾಯಿಲ್ ತಂಙಳ್ ನೆರವೇರಿಸಿದರು.ಉದ್ಯಮಿ ಪ್ರೇಮ್ ರಾಜ್, ರೋಷನ್ ಸಿಕ್ವೇರಾ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಎಸ್‌ವೈಎಸ್ ಉಜಿರೆ ಸರ್ಕಲ್ ಪ್ರಮುಖರಾದ ಹಾತಿಬ್ ಕಕ್ಕಿಂಜೆ, ಅಶ್ರಫ್,ಖಾದರ್, ಆದಂ ಬೆಳಾಲು, ಹಕೀಂ ಮದನಿ ಕರ್ನಾಟಕ ಮುಸ್ಲಿಂ ಜಮಾಅತ್ ಉಜಿರೆ ಸರ್ಕಲ್ ಅಧ್ಯಕ್ಷ ಹೈದರ್ ಮದನಿ ಉಜಿರೆ, ಇಬ್ರಾಹಿಂ ಹಾಜಿ ಅತ್ತಾಜೆ ಭಾಗವಹಿಸಿದ್ದರು. ಸರ್ಕಲ್ ನಾಯಕರಾದ ಹಾರಿಸ್ ಉಜಿರೆ ಸ್ವಾಗತಿಸಿ ಸಂಸ್ಥೆಯ ಮೇಲ್ವಿಚಾರಕಿ ಮಲ್ಲಿಕಾ ವಂದಿಸಿದರು.

Leave a Comment

error: Content is protected !!