24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಜೂರು ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕಾಜೂರು ಶಾಲಾ ವಠಾರದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯು ನಡೆಯಿತು. ಕಾಜೂರು ದರ್ಗಾ ಸಮಿತಿ ಅಧ್ಯಕ್ಷರಾದ ಕೆ ಯು ಇಬ್ರಾಹಿಂ ದ್ವಜಾರೋಹಣಗೈದರು. ಸಯ್ಯಿದ್ ಝೈನುಲ್ ಆಬಿದ್ ಜಮಲುಲೈಲಿ ತಂಙಳ್ ರವರು ಶುಭ ಸಂದೇಶ ನೀಡಿ ಆಶಿರ್ವಚನ ಮಾಡಿದರು.

ಮುದರ್ರಿಸರಾದ ತೌಸೀಫ್ ಸಅದಿ ಹರೇಕಳ ಹಾಗೂ ಶಿಕ್ಷಣ ಸಂಸ್ಥೆಗಳ ಮಾರ್ಗದರ್ಶಕ ಕೆ ಎಂ ಸಿದ್ದೀಕ್ ಮೋಂಟುಗೋಳಿ ಶುಭಕೋರಿದರು. ದರ್ಗಾ ಸಮಿತಿ ಪ್ರ.ಕಾರ್ಯದರ್ಶಿ ಹಾಗೂ ರಾಹ ಎಜ್ಯುಕೇಶನಲ್ ಟ್ರಸ್ಟ್ ಚೇರ್ಮನ್ ಜೆ ಹೆಚ್ ಅಬೂಬಕರ್ ಸಿದ್ದೀಕ್, ದರ್ಗಾ ಸಮಿತಿ ಕೋಶಾಧಿಕಾರಿ ಮಹಮ್ಮದ್ ಕಮಾಲ್, ರಾಹ ಎಜ್ಯುಕೇಶನ್ ಸಂಚಾಲಕರಾದ ಅಶ್ಫಾಕ್, ಫೈನಾನ್ಸ್ ಸೆಕ್ರೇಟರಿ ಆಸಿಫ್ ಜೆ.ಎಚ್, ಸದರ್ ಉಸ್ತಾದ್ ಜಮಾಲ್ ಲತೀಫಿ, ಆರ್.ಜೆ.ಎಂ ಕಾಜೂರು ಮಾಜಿ ಅಧ್ಯಕ್ಷರಾದ ಬಿ ಎ ಯೂಸುಫ್ ಶರೀಫ್ ಹಾಗೂ ದರ್ಗಾ ಸಮಿತಿಯ ಪದಾದಿಕಾರಿಗಳು, ನಿರ್ದೇಶಕರುಗಳು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ಸೆಸ್ಸೆಫ್, ಎಸ್ ವೈ ಎಸ್, ಅಂಗ ಸಂಸ್ಥೆಗಳಾದ ಸ್ವಲಾತ್ ಕಮಿಟಿ, ದಫ್ ಸಮಿತಿ, ಕೆ.ಡಿ.ಸಿ ಪದಾಧಿಕಾರಿಗಳು ಮತ್ತು ಸದಸ್ಯರು, ಕಾಜೂರು, ಕುಕ್ಕಾವು, ದಿಡುಪೆ ಮತ್ತು ಜಿ ನಗರ ಮದ್ರಸಗಳ ಆಡಳಿತ ಸಮಿತಿ, ಶಾಲಾ ಶಿಕ್ಷಕ-ರಕ್ಷಕ ಸಮಿತಿ ಮತ್ತು ಮದ್ರಸ ಶಿಕ್ಷಕ-ರಕ್ಷಕ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದರು. ಮದ್ರಸ, ದರ್ಸ್, ಪ್ರೌಢಶಾಲೆ, ಪಬ್ಲಿಕ್ ಸ್ಕೂಲ್, ಶರೀಅತ್ ಕಾಲೇಜು, ಪಿಯುಸಿ ಸಿಬ್ಬಂದಿ ವರ್ಗ, ಜಮಾಅತ್ ಭಾಂದವರು, ವಿದ್ಯಾರ್ಥಿಗಳು ಭಾಗವಹಿಸಿದರು.

ಈ ಸಂದರ್ಭದಲ್ಲಿ ರಾಹ ಪಬ್ಲಿಕ್ ಸ್ಕೂಲ್ ಇದರ ನೂತನ ಶಾಲಾ ವಾಹನ ಲೋಕಾರ್ಪಣೆ ಮಾಡಲಾಯಿತು.

Related posts

ವಿಶಿಷ್ಟ ರೀತಿಯಲ್ಲಿ ಸಮಾಜಕ್ಕೆ ಮಾದರಿಯಾದ ನವ ಜೋಡಿಗಳು

Suddi Udaya

ನಡ ಸರಕಾರಿ ಪ್ರೌಢಶಾಲೆ ಶಾಲಾ ಪ್ರಾರಂಭೋತ್ಸವ

Suddi Udaya

ಬೆದ್ರಬೆಟ್ಟು: ಜಲ್ಸತುಲ್ ಜಮೀಲ್ ಮಿಲಾದ್ 2024 ಪ್ರತಿಭಾ ಕಾರ್ಯಕ್ರಮ

Suddi Udaya

ಆಪರೇಷನ್ ಸಿಂದೂರ್ ” ಯಶಸ್ವಿ: ಸೈನಿಕರಿಗೆ ಮನ್ ಶರ್ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳಿಂದ ಬಿಗ್ ಸೆಲ್ಯೂಟ್

Suddi Udaya

ಲಾಯಿಲ : ಪ್ರಸನ್ನ ಸಿ.ಬಿ.ಎಸ್.ಸಿ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಸ್ಥಾಪನೆಯ ಮತ್ತು ಧರ್ಮಪ್ರಾಂತ್ಯದ ಪ್ರಥಮ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಯಿಯವರ ಧರ್ಮಾಧ್ಯಕ್ಷದೀಕ್ಷೆಯ ರಜತ ಮಹೋತ್ಸವ ಸಂಭ್ರಮ ಉದ್ಘಾಟನೆ

Suddi Udaya
error: Content is protected !!