30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಜೂರು ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕಾಜೂರು ಶಾಲಾ ವಠಾರದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯು ನಡೆಯಿತು. ಕಾಜೂರು ದರ್ಗಾ ಸಮಿತಿ ಅಧ್ಯಕ್ಷರಾದ ಕೆ ಯು ಇಬ್ರಾಹಿಂ ದ್ವಜಾರೋಹಣಗೈದರು. ಸಯ್ಯಿದ್ ಝೈನುಲ್ ಆಬಿದ್ ಜಮಲುಲೈಲಿ ತಂಙಳ್ ರವರು ಶುಭ ಸಂದೇಶ ನೀಡಿ ಆಶಿರ್ವಚನ ಮಾಡಿದರು.

ಮುದರ್ರಿಸರಾದ ತೌಸೀಫ್ ಸಅದಿ ಹರೇಕಳ ಹಾಗೂ ಶಿಕ್ಷಣ ಸಂಸ್ಥೆಗಳ ಮಾರ್ಗದರ್ಶಕ ಕೆ ಎಂ ಸಿದ್ದೀಕ್ ಮೋಂಟುಗೋಳಿ ಶುಭಕೋರಿದರು. ದರ್ಗಾ ಸಮಿತಿ ಪ್ರ.ಕಾರ್ಯದರ್ಶಿ ಹಾಗೂ ರಾಹ ಎಜ್ಯುಕೇಶನಲ್ ಟ್ರಸ್ಟ್ ಚೇರ್ಮನ್ ಜೆ ಹೆಚ್ ಅಬೂಬಕರ್ ಸಿದ್ದೀಕ್, ದರ್ಗಾ ಸಮಿತಿ ಕೋಶಾಧಿಕಾರಿ ಮಹಮ್ಮದ್ ಕಮಾಲ್, ರಾಹ ಎಜ್ಯುಕೇಶನ್ ಸಂಚಾಲಕರಾದ ಅಶ್ಫಾಕ್, ಫೈನಾನ್ಸ್ ಸೆಕ್ರೇಟರಿ ಆಸಿಫ್ ಜೆ.ಎಚ್, ಸದರ್ ಉಸ್ತಾದ್ ಜಮಾಲ್ ಲತೀಫಿ, ಆರ್.ಜೆ.ಎಂ ಕಾಜೂರು ಮಾಜಿ ಅಧ್ಯಕ್ಷರಾದ ಬಿ ಎ ಯೂಸುಫ್ ಶರೀಫ್ ಹಾಗೂ ದರ್ಗಾ ಸಮಿತಿಯ ಪದಾದಿಕಾರಿಗಳು, ನಿರ್ದೇಶಕರುಗಳು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ಸೆಸ್ಸೆಫ್, ಎಸ್ ವೈ ಎಸ್, ಅಂಗ ಸಂಸ್ಥೆಗಳಾದ ಸ್ವಲಾತ್ ಕಮಿಟಿ, ದಫ್ ಸಮಿತಿ, ಕೆ.ಡಿ.ಸಿ ಪದಾಧಿಕಾರಿಗಳು ಮತ್ತು ಸದಸ್ಯರು, ಕಾಜೂರು, ಕುಕ್ಕಾವು, ದಿಡುಪೆ ಮತ್ತು ಜಿ ನಗರ ಮದ್ರಸಗಳ ಆಡಳಿತ ಸಮಿತಿ, ಶಾಲಾ ಶಿಕ್ಷಕ-ರಕ್ಷಕ ಸಮಿತಿ ಮತ್ತು ಮದ್ರಸ ಶಿಕ್ಷಕ-ರಕ್ಷಕ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದರು. ಮದ್ರಸ, ದರ್ಸ್, ಪ್ರೌಢಶಾಲೆ, ಪಬ್ಲಿಕ್ ಸ್ಕೂಲ್, ಶರೀಅತ್ ಕಾಲೇಜು, ಪಿಯುಸಿ ಸಿಬ್ಬಂದಿ ವರ್ಗ, ಜಮಾಅತ್ ಭಾಂದವರು, ವಿದ್ಯಾರ್ಥಿಗಳು ಭಾಗವಹಿಸಿದರು.

ಈ ಸಂದರ್ಭದಲ್ಲಿ ರಾಹ ಪಬ್ಲಿಕ್ ಸ್ಕೂಲ್ ಇದರ ನೂತನ ಶಾಲಾ ವಾಹನ ಲೋಕಾರ್ಪಣೆ ಮಾಡಲಾಯಿತು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಪರಿಷ್ಕೃತ ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಶ್ರೀ ಕ್ಷೇತ್ರ ಧರ್ಮಸ್ಥಳ ಧಮಾ೯ಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಡಾ.ಗುರುರಾಜ ಕರ್ಜಗಿಯವರಿಂದ ಸರ್ವಧರ್ಮ ಸಮ್ಮೇಳನ 91ನೇ ಅಧಿವೇಶನ ಉದ್ಘಾಟನೆ

Suddi Udaya

ನಿಡ್ಲೆ ಅಗ್ರಿಲೀಫ್ ಸ್ಥಿರ ಉತ್ಪನ್ನ ನಾವೀನ್ಯತೆಗೆ ಫೈನಾನ್ಶಿಯಲ್ ಎಕ್ಸ್‌ಪ್ರೆಸ್ ಗ್ರೀನ್ ಸಾರಥಿ ಪ್ರಶಸ್ತಿ

Suddi Udaya

ಪಟ್ರಮೆ ಅನಾರು ಬೂತ್‌ಗೆ ಬಿಜೆಪಿ ಮಂಡಲದ ಅಧ್ಯಕ್ಷ ಶ್ರೀನಿವಾಸ ರಾವ್ ಭೇಟಿ

Suddi Udaya

ಧರ್ಮಸ್ಥಳದಲ್ಲಿ ಸೀರೆ ವಿತರಣೆ

Suddi Udaya

ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya
error: Content is protected !!