25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಜೂರು ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕಾಜೂರು ಶಾಲಾ ವಠಾರದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯು ನಡೆಯಿತು. ಕಾಜೂರು ದರ್ಗಾ ಸಮಿತಿ ಅಧ್ಯಕ್ಷರಾದ ಕೆ ಯು ಇಬ್ರಾಹಿಂ ದ್ವಜಾರೋಹಣಗೈದರು. ಸಯ್ಯಿದ್ ಝೈನುಲ್ ಆಬಿದ್ ಜಮಲುಲೈಲಿ ತಂಙಳ್ ರವರು ಶುಭ ಸಂದೇಶ ನೀಡಿ ಆಶಿರ್ವಚನ ಮಾಡಿದರು.

ಮುದರ್ರಿಸರಾದ ತೌಸೀಫ್ ಸಅದಿ ಹರೇಕಳ ಹಾಗೂ ಶಿಕ್ಷಣ ಸಂಸ್ಥೆಗಳ ಮಾರ್ಗದರ್ಶಕ ಕೆ ಎಂ ಸಿದ್ದೀಕ್ ಮೋಂಟುಗೋಳಿ ಶುಭಕೋರಿದರು. ದರ್ಗಾ ಸಮಿತಿ ಪ್ರ.ಕಾರ್ಯದರ್ಶಿ ಹಾಗೂ ರಾಹ ಎಜ್ಯುಕೇಶನಲ್ ಟ್ರಸ್ಟ್ ಚೇರ್ಮನ್ ಜೆ ಹೆಚ್ ಅಬೂಬಕರ್ ಸಿದ್ದೀಕ್, ದರ್ಗಾ ಸಮಿತಿ ಕೋಶಾಧಿಕಾರಿ ಮಹಮ್ಮದ್ ಕಮಾಲ್, ರಾಹ ಎಜ್ಯುಕೇಶನ್ ಸಂಚಾಲಕರಾದ ಅಶ್ಫಾಕ್, ಫೈನಾನ್ಸ್ ಸೆಕ್ರೇಟರಿ ಆಸಿಫ್ ಜೆ.ಎಚ್, ಸದರ್ ಉಸ್ತಾದ್ ಜಮಾಲ್ ಲತೀಫಿ, ಆರ್.ಜೆ.ಎಂ ಕಾಜೂರು ಮಾಜಿ ಅಧ್ಯಕ್ಷರಾದ ಬಿ ಎ ಯೂಸುಫ್ ಶರೀಫ್ ಹಾಗೂ ದರ್ಗಾ ಸಮಿತಿಯ ಪದಾದಿಕಾರಿಗಳು, ನಿರ್ದೇಶಕರುಗಳು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ಸೆಸ್ಸೆಫ್, ಎಸ್ ವೈ ಎಸ್, ಅಂಗ ಸಂಸ್ಥೆಗಳಾದ ಸ್ವಲಾತ್ ಕಮಿಟಿ, ದಫ್ ಸಮಿತಿ, ಕೆ.ಡಿ.ಸಿ ಪದಾಧಿಕಾರಿಗಳು ಮತ್ತು ಸದಸ್ಯರು, ಕಾಜೂರು, ಕುಕ್ಕಾವು, ದಿಡುಪೆ ಮತ್ತು ಜಿ ನಗರ ಮದ್ರಸಗಳ ಆಡಳಿತ ಸಮಿತಿ, ಶಾಲಾ ಶಿಕ್ಷಕ-ರಕ್ಷಕ ಸಮಿತಿ ಮತ್ತು ಮದ್ರಸ ಶಿಕ್ಷಕ-ರಕ್ಷಕ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದರು. ಮದ್ರಸ, ದರ್ಸ್, ಪ್ರೌಢಶಾಲೆ, ಪಬ್ಲಿಕ್ ಸ್ಕೂಲ್, ಶರೀಅತ್ ಕಾಲೇಜು, ಪಿಯುಸಿ ಸಿಬ್ಬಂದಿ ವರ್ಗ, ಜಮಾಅತ್ ಭಾಂದವರು, ವಿದ್ಯಾರ್ಥಿಗಳು ಭಾಗವಹಿಸಿದರು.

ಈ ಸಂದರ್ಭದಲ್ಲಿ ರಾಹ ಪಬ್ಲಿಕ್ ಸ್ಕೂಲ್ ಇದರ ನೂತನ ಶಾಲಾ ವಾಹನ ಲೋಕಾರ್ಪಣೆ ಮಾಡಲಾಯಿತು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಪೋಸ್ಟ್‌ : ಮುಂಬಯಿಯ ಶ್ರೀನಾಥ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲು

Suddi Udaya

ವೇಣೂರು: ಶಿಕ್ಷಣ ಮಾರ್ಗದರ್ಶನ – ಡಾ. ಆಳ್ವರಿಗೆ ನಾಗರೀಕ‌ ಸನ್ಮಾನ

Suddi Udaya

ಜು.19: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಲಾಯಿಲ: ಗುರಿಂಗಾನದಲ್ಲಿ ಅಪಾಯ ಮಟ್ಟದಲ್ಲಿ ನದಿ ನೀರು,: ಸುತ್ತಮುತ್ತಲ ಮನೆಗಳಿಗೆ ತುಂಬಿದ ನೀರು, ಸ್ಥಳಿಯ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

Suddi Udaya

ಹೊಸಂಗಡಿ : ಬಡಕೋಡಿ ಕರಿಮಣೇಲು ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಸಂತೋಷ್ ಕುಮಾರ್ ಜೈನ್ ಅಭಿಮಾನಿ ಬಳಗದಿಂದ ಪಡಂಗಡಿಯಲ್ಲಿ ಲೆಜೆಂಡ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ ಆಮಂತ್ರಣ ಪತ್ರಿಕೆ ಬಿಡುಗಡೆ: ರ್‍ಯಾಶ್ ತಂಡದಲ್ಲಿ ಆಡಲಿದ್ದಾರೆ ಶಾಸಕ ಹರೀಶ್ ಪೂಂಜ,ಆಟಗಾರರು ಪುಲ್ ಖುಷ್

Suddi Udaya
error: Content is protected !!