July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿಶಾಲಾ ಕಾಲೇಜು

ತುಳು ಲಿಪಿ ಆನ್-ಲೈನ್ ಪರೀಕ್ಷೆ: ಪಂಚಮಿ ಬಿ.ಆರ್ ಶತಃ ಪ್ರತಿಶತ ಸಾಧನೆ

ಬೆಳ್ತಂಗಡಿ: ತುಳುನಾಡು ಸಹಿತ ವಿಶ್ವದ ನಾನಾ ಭಾಗಗಳಲ್ಲಿ ಇರುವ ತುಳು ಭಾಷಿಕರಲ್ಲಿ ತುಳು ಲಿಪಿಯ ಬಗ್ಗೆ ಅರಿವು ಮತ್ತು ಆಸಕ್ತಿ ಮೂಡಿಸುವ ಉದ್ದೇಶದಿಂದ ‘ಜೈ ತುಳುನಾಡು (ರಿ.) ಸಂಘಟನೆ ನಡೆಸುವ ತುಳು ಲಿಪಿ ಆನ್-ಲೈನ್ ತರಗತಿಯಲ್ಲಿ ಭಾಗವಹಿಸಿ ಬಳಿಕ ನಡೆದ ಆನ್-ಲೈನ್ ಪರೀಕ್ಷೆಯಲ್ಲಿ ಪಂಚಮಿ ಬಿ.ಆರ್. 100 ಕ್ಕೆ 100 ಅಂಕಗಳನ್ನು ಗಳಿಸುವ ಮೂಲಕ ವಿಶೇಷ ಸಾಧನೆಯನ್ನು ಮಾಡಿದ್ದಾರೆ.

ಧಾರವಾಡದಲ್ಲಿರುವ JJS ಮಂಜುನಾಥೇಶ್ವರ ಸೆಂಟ್ರಲ್ ಸ್ಕೂಲ್ ನಲ್ಲಿ 8ನೇ ತರಗತಿ ವ್ಯಾಸಾಂಗ ಮಾಡುತ್ತಿರುವ ಇವರು ಕಾಸರಗೂಡಿನ ದೇಲಂಪಾಡಿ ಗ್ರಾಮದ ಬಂದ್ಯಡ್ಕ ರಾಜೇಶ್ ಹಾಗೂ ಚಿತ್ರಕಲಾ ದಂಪತಿಯ ಪುತ್ರಿ.

ಕಳೆದ ವರ್ಷ ನವಂಬರ್ 22ರಂದು ತುಳು ಲಿಪಿ ತರಗತಿಯನ್ನು ಆನ್ ಲೈನ್ ಮುಖಾಂತರ ಜೈ ತುಳುನಾಡು (ರಿ) ಸಂಘಟನೆ ಆಯೋಜಿಸಿತ್ತು. ಸುಮಾರು 3-4 ತಿಂಗಳುಗಳ ಕಾಲ ನಡೆದ ಈ ತರಗತಿಯಲ್ಲಿ ಮೂವರು ಶಿಕ್ಷಕರು ತುಳು ವರ್ಣಮಾಲೆ, ಕಾಗುಣಿತ ಮತ್ತು ಅಂಕೆಗಳ ಪಾಠವನ್ನು ಹೇಳಿಕೊಡುತ್ತಿದ್ದರು.

ಬಳಿಕ, ಶಬ್ದಗಳು, ವಾಕ್ಯ ರಚನೆ, ತುಳುವಿನಿಂದ ಕನ್ನಡಕ್ಕೆ ಬರೆಯೋದು, ಕನ್ನಡದಿಂದ ತುಳು ಭಾಷೆಯ ಲಿಪಿಯಲ್ಲಿ ಬರೆಯೋದನ್ನು ಶಿಕ್ಷಕರು ದಿನನಿತ್ಯ ಹೇಳಿಕೊಡುತ್ತಿದ್ದರು.

ಈ ಪಾಠವೆಲ್ಲಾ ಮುಗಿದ ಬಳಿಕ, ಜುಲೈ. 23ರಂದು ಜೈ ತುಳುನಾಡು ಸಂಘಟನೆ ಮುಖಾತರ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಪರೀಕ್ಷೆಗಳ ಫಲಿತಾಂಶ ಆಗಸ್ಟ್ 15ರಂದು ಬಂದಿದ್ದು ಇದರಲ್ಲಿ ಪಂಚಮಿ ಬಿ ಆರ್ 100ಕ್ಕೆ 100 ಅಂಕಗಳನ್ನು ತೆಗೆದುಕೊಂಡು ಮೊದಲ ಸ್ಥಾನ ಪಡೆದಿಕೊಂಡಿದ್ದಾರೆ. ಕರ್ನಾಟಕ ತುಳು ಅಕಾಡೆಮಿ ಶೀಘ್ರದಲ್ಲೇ ಪ್ರಮಾಣ ಪತ್ರವನ್ನು ವಿತರಿಸಲಿದೆ.

Related posts

ಬ್ರಹ್ಮಾನಂದ ಶ್ರೀ ಯವರಿಂದ ಕನ್ಯಾಡಿ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಳಂಜ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲಾ ವಾರ್ಷಿಕೋತ್ಸವ “ಮನೋಲ್ಲಾಸ ಸಾಂಸ್ಕೃತಿಕ ಸಂಭ್ರಮ -2025”

Suddi Udaya

ವೇಣೂರು ಪೋಲಿಸ್ ಠಾಣೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!