23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿಶಾಲಾ ಕಾಲೇಜು

ತುಳು ಲಿಪಿ ಆನ್-ಲೈನ್ ಪರೀಕ್ಷೆ: ಪಂಚಮಿ ಬಿ.ಆರ್ ಶತಃ ಪ್ರತಿಶತ ಸಾಧನೆ

ಬೆಳ್ತಂಗಡಿ: ತುಳುನಾಡು ಸಹಿತ ವಿಶ್ವದ ನಾನಾ ಭಾಗಗಳಲ್ಲಿ ಇರುವ ತುಳು ಭಾಷಿಕರಲ್ಲಿ ತುಳು ಲಿಪಿಯ ಬಗ್ಗೆ ಅರಿವು ಮತ್ತು ಆಸಕ್ತಿ ಮೂಡಿಸುವ ಉದ್ದೇಶದಿಂದ ‘ಜೈ ತುಳುನಾಡು (ರಿ.) ಸಂಘಟನೆ ನಡೆಸುವ ತುಳು ಲಿಪಿ ಆನ್-ಲೈನ್ ತರಗತಿಯಲ್ಲಿ ಭಾಗವಹಿಸಿ ಬಳಿಕ ನಡೆದ ಆನ್-ಲೈನ್ ಪರೀಕ್ಷೆಯಲ್ಲಿ ಪಂಚಮಿ ಬಿ.ಆರ್. 100 ಕ್ಕೆ 100 ಅಂಕಗಳನ್ನು ಗಳಿಸುವ ಮೂಲಕ ವಿಶೇಷ ಸಾಧನೆಯನ್ನು ಮಾಡಿದ್ದಾರೆ.

ಧಾರವಾಡದಲ್ಲಿರುವ JJS ಮಂಜುನಾಥೇಶ್ವರ ಸೆಂಟ್ರಲ್ ಸ್ಕೂಲ್ ನಲ್ಲಿ 8ನೇ ತರಗತಿ ವ್ಯಾಸಾಂಗ ಮಾಡುತ್ತಿರುವ ಇವರು ಕಾಸರಗೂಡಿನ ದೇಲಂಪಾಡಿ ಗ್ರಾಮದ ಬಂದ್ಯಡ್ಕ ರಾಜೇಶ್ ಹಾಗೂ ಚಿತ್ರಕಲಾ ದಂಪತಿಯ ಪುತ್ರಿ.

ಕಳೆದ ವರ್ಷ ನವಂಬರ್ 22ರಂದು ತುಳು ಲಿಪಿ ತರಗತಿಯನ್ನು ಆನ್ ಲೈನ್ ಮುಖಾಂತರ ಜೈ ತುಳುನಾಡು (ರಿ) ಸಂಘಟನೆ ಆಯೋಜಿಸಿತ್ತು. ಸುಮಾರು 3-4 ತಿಂಗಳುಗಳ ಕಾಲ ನಡೆದ ಈ ತರಗತಿಯಲ್ಲಿ ಮೂವರು ಶಿಕ್ಷಕರು ತುಳು ವರ್ಣಮಾಲೆ, ಕಾಗುಣಿತ ಮತ್ತು ಅಂಕೆಗಳ ಪಾಠವನ್ನು ಹೇಳಿಕೊಡುತ್ತಿದ್ದರು.

ಬಳಿಕ, ಶಬ್ದಗಳು, ವಾಕ್ಯ ರಚನೆ, ತುಳುವಿನಿಂದ ಕನ್ನಡಕ್ಕೆ ಬರೆಯೋದು, ಕನ್ನಡದಿಂದ ತುಳು ಭಾಷೆಯ ಲಿಪಿಯಲ್ಲಿ ಬರೆಯೋದನ್ನು ಶಿಕ್ಷಕರು ದಿನನಿತ್ಯ ಹೇಳಿಕೊಡುತ್ತಿದ್ದರು.

ಈ ಪಾಠವೆಲ್ಲಾ ಮುಗಿದ ಬಳಿಕ, ಜುಲೈ. 23ರಂದು ಜೈ ತುಳುನಾಡು ಸಂಘಟನೆ ಮುಖಾತರ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಪರೀಕ್ಷೆಗಳ ಫಲಿತಾಂಶ ಆಗಸ್ಟ್ 15ರಂದು ಬಂದಿದ್ದು ಇದರಲ್ಲಿ ಪಂಚಮಿ ಬಿ ಆರ್ 100ಕ್ಕೆ 100 ಅಂಕಗಳನ್ನು ತೆಗೆದುಕೊಂಡು ಮೊದಲ ಸ್ಥಾನ ಪಡೆದಿಕೊಂಡಿದ್ದಾರೆ. ಕರ್ನಾಟಕ ತುಳು ಅಕಾಡೆಮಿ ಶೀಘ್ರದಲ್ಲೇ ಪ್ರಮಾಣ ಪತ್ರವನ್ನು ವಿತರಿಸಲಿದೆ.

Related posts

ವಲಯ ಮಟ್ಟದ ಥ್ರೋಬಾಲ್ ಪಂದ್ಯಾಟ: ಸಂತ ತೆರೆಸಾ ಆಂ.ಮಾ. ಶಾಲೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಉಜಿರೆ: ಪದ್ಮನಾಭ ಕುಂಜತ್ತಾಯ ಹೃದಯಾಘಾತದಿಂದ ನಿಧನ

Suddi Udaya

ಕಡಿರುದ್ಯಾವರ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಓಮ್ನಿ ಕಾರು

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ಡಿಸ್ಕೌಂಟ್, ಸೀರೆಗಳಿಗೆ ಕೇವಲ ರೂ 99

Suddi Udaya

ಕಲ್ಮಂಜ ಬೆರ್ಕೆಯಲ್ಲಿ ಕೃಷಿ ತೋಟಕ್ಕೆ ಆನೆ ದಾಳಿ: ಅಪಾರ ಪ್ರಮಾಣ ಕೃಷಿ ನಾಶ

Suddi Udaya

ಅಂತರ್ ಕಾಲೇಜು ಚರ್ಚಾ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆ -ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಥಮ ಹಾಗೂ ತೃತೀಯ ಸ್ಥಾನ

Suddi Udaya
error: Content is protected !!