23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ಜೂನಿಯರ್ ಕಾಲೇಜಿನಲ್ಲಿ ಸಿಇಟಿ ತರಬೇತಿ ಮತ್ತು ಸ್ಪೋಕನ್ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ

ಬೆಳ್ತಂಗಡಿ: ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹಾಗೂ ವೃತ್ತಿಪರ ಶಿಕ್ಷಣಕ್ಕೆ ಒತ್ತು ನೀಡುವ ದೃಷ್ಟಿಯಿಂದ ಬೆಳ್ತಂಗಡಿ ಜೂನಿಯರ್ ಕಾಲೇಜಿನಲ್ಲಿ ಸಿಇಟಿ ತರಬೇತಿ ಹಾಗೂ ಸ್ಪೋಕನ್ ಇಂಗ್ಲೀಷ್ ಕೋಚಿಂಗ್ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

ಕಾರ್ಯಕ್ರಮವನ್ನು ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಜಯಾನಂದ ಗೌಡ,ಸುವರ್ಣ ಮಹೋತ್ಸವ ಸಮಿತಿ ಕಾರ್ಯಧ್ಯಕ್ಷರು ರೊನಾಲ್ಡ್ ಲೋಬೊ ಹಾಗೂ ಮೇಲಂತಬೆಟ್ಟು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲರು ಡಾ. ಆಂಟನಿ ಇವರುಗಳು ಜಂಟಿಯಾಗಿ ಉದ್ಘಾಟಿಸಿದರು.

ಕಾರ್ಯಕ್ರಮದ ಯಶಸ್ಸು ವಿದ್ಯಾರ್ಥಿಗಳ ಕೈಯಲ್ಲಿದೆ ಇದರ ಸದ್ಬಳಕೆ ಮಾಡಿಕೊಂಡು ತಮ್ಮ ಅಮೂಲ್ಯವಾದ ಜೀವನವನ್ನು ರೂಪಿಸಿಕೊಳ್ಳಿ ಎಂಬ ಸಲಹೆ ನೀಡಿದರು. ಯಾವುದೇ ಫಲಾಫೇಕ್ಷೆ ಇಲ್ಲದೆ ತರಬೇತಿ ನೀಡುತ್ತಿರುವ ಉಪನ್ಯಾಸಕರನ್ನು ಮುಕ್ತ ಕಂಠದಿಂದ ಪ್ರಶಂಶಿಸಿದರು.

ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಸುಕುಮಾರ್ ಜೈನ್ ವಹಿಸಿದ್ದರು. ಗಣಿತಶಾಸ್ತ್ರ ಉಪನ್ಯಾಸಕರಾದ ಮೋಹನ್ ಭಟ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕರದ ಶೀನಾ ನಾಡೋಳಿ ಸ್ವಾಗತಿಸಿದರೆ ಉಪನ್ಯಾಸಕ ಗಣಪತಿ ಭಟ್. ವಂದನಾರ್ಪಣೆಗೈದರು. ಕಾಲೇಜಿನ ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿ ವೃಂದದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿನಿ 2026 ರ ವೈಎಸ್‌ಕೆಎ 3 ನೇ ರಾಜ್ಯ ಮಟ್ಟದ ಕರಾಟೆ ಗ್ರ್ಯಾಂಡ್ ಚಾಂಪಿಯನ್‌ಶಿಪ್‌ ಪ್ರಶಸ್ತಿ

Suddi Udaya

ಕರಂಬಾರು ಹಿ.ಪ್ರಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಉದ್ಘಾಟನೆ

Suddi Udaya

ಹದಗೆಟ್ಟ ರಸ್ತೆಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಿದ ಶಿಬಾಜೆ ಗ್ರಾ.ಪಂ.

Suddi Udaya

ಡಿ.6-8 ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ, ಶ್ರೀ ದುರ್ಗಾಗಣೇಶ ಸಭಾಭವನ ಲೋಕಾರ್ಪಣೆ

Suddi Udaya

ಎನ್‌ಎಸ್‌ಎಸ್ ರಾಜ್ಯ ಮಟ್ಟದ ಗಣರಾಜ್ಯೋತ್ಸವ ಶಿಬಿರಕ್ಕೆ ಟಿ. ಸುದರ್ಶನ್ ನಾಯಕ್ ಆಯ್ಕೆ

Suddi Udaya

ಕೆಎಸ್ಸಾರ್ಟಿಸಿ ಧರ್ಮಸ್ಥಳ ಘಟಕದ ಸಂಚಾರ ನಿಯಂತ್ರಕ ವರ್ಗೀಸ್ ನಿಧನ

Suddi Udaya
error: Content is protected !!