July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂಗಳೂರಿನ ಕೃಷಿ ವಿಜ್ಞಾನ ಕೇಂದ್ರದಿಂದ ಕರಾವಳಿ ಭತ್ತದ ಬೆಳೆಯಲ್ಲಿ ಮೆಗ್ನೀಶಿಯಂ ಸಲ್ಫೇಟ್ ನ ಪ್ರಭಾವದ ಕುರಿತು ಕ್ಷೇತ್ರ ಪರಿಶೀಲನಾ ಕಾರ್ಯಕ್ರಮ


ಬೆಳ್ತಂಗಡಿ : ಐ.ಸಿ.ಎ.ಆರ್. ಕೃಷಿ ವಿಜ್ಞಾನ ಕೇಂದ್ರ, ಮಂಗಳೂರು ವತಿಯಿಂದ ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಕರಂಬಾರು ಗುತ್ತು ಮನೆಯಲ್ಲಿ ಕರಾವಳಿ ಭತ್ತದ ಬೆಳೆಯ ಬೆಳವಣಿಗೆ ಹಾಗೂ ಇಳುವರಿಯ ಮೇಲೆ ಮೆಗ್ನೀಶಿಯಂ ಸಲ್ಫೇಟ್ ನ ಪ್ರಭಾವದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಮಣ್ಣು ವಿಜ್ಞಾನಿ ಡಾ. ಮಲ್ಲಿಕಾರ್ಜುನ ಎಲ್. ಮಾತನಾಡಿ, ಭತ್ತದ ಬೆಳೆಯಲ್ಲಿ ಸಮಗ್ರ ಪೋಷಕಾಂಶಗಳ ನಿರ್ವಹಣೆ ಹಾಗೂ ಮೆಗ್ನೀಶಿಯಂ ಬಳಕೆಯಿಂದಾಗುವ ಪ್ರಯೋಜನಗಳ ಕುರಿತು ಮಾಹಿತಿ ನೀಡಿದರು. ತಂತ್ರಜ್ಞಾನದ ಪರಿಶೀಲನೆಗಾಗಿ ಆಯ್ದ ಐದು ಜನ ರೈತರಿಗೆ ರಸಗೊಬ್ಬರಗಳ ಪರಿಕರಗಳನ್ನು ವಿತರಿಸಲಾಯಿತು.


ನಂತರ ಮಾತನಾಡಿದ ಸಸ್ಯ ಸಂರಕ್ಷಣಾ ವಿಜ್ಞಾನಿ ಡಾ. ಕೇದಾರನಾಥ, ಭತ್ತದ ಬೆಳೆಯಲ್ಲಿ ಕಂಡು ಬರುವ ರೋಗ ಮತ್ತು ಕೀಟಗಳ ನಿರ್ವಹಣೆ ಕುರಿತು ರೈತರಿಗೆ ಮಾಹಿತಿ ನೀಡಿದರು. ಈ ಕಾರ್ಯಕ್ರಮದಲ್ಲಿ ಕೃಷಿ ಪರಿಕರ ಮಾರಟಗಾರರಾದ ಚೇತನಾ, ಸುಕೇಶ ಪೂಜಾರಿ, ಕರಂಬಾರು ಗುತ್ತು ಮನೆಯ ಸುಮಿತ್ರಾ ಹೆಗಡೆ, ಲ್ಯಾನ್ಸಿ ಡಿಸೋಜಾ, ಸದಾನಂದ ಹೆಗಡೆ, ಪ್ರಕಾಶ ಹೆಗಡೆ, ಸಂಜೀವ ದೆವಾಡಿಗ ಮುಂತಾದವರು ಭಾಗವಹಿಸಿದ್ದರು.

Related posts

ತುಮಕೂರಿನಲ್ಲಿ ‘ಜಿ.ಎನ್.ಆರ್ ಕಲ್ಪತರು ಸಿರಿ ಮಾರ್ಟ್’ ಸಿರಿ ಉತ್ಪನ್ನಗಳ ನೂತನ ಮಾರಾಟ ಮಳಿಗೆ ಶುಭಾರಂಭ

Suddi Udaya

ವೈಬ್ರೆಂಟ್ ಪ.ಪೂ. ಕಾಲೇಜಿನ ಕನ್ನಡ ಉಪನ್ಯಾಸಕ ನಿಕೇತ್ ಮೋಹನ್ ದಾಸ್ ಶೆಟ್ಟಿರವರಿಗೆ ಅತ್ಯುತ್ತಮ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ

Suddi Udaya

ನಾಪತ್ತೆಯಾಗಿದ್ದ ತೋಟತ್ತಾಡಿ ಯುವಕನ ಮೃತದೇಹ ಅಣಿಯೂರು ನದಿಯಲ್ಲಿ ಪತ್ತೆ

Suddi Udaya

ಕ್ಯಾಂಪ್ಕೊ ನಿಯಮಿತ ಮಂಗಳೂರು “ಸಾಂತ್ವನ” ಯೋಜನೆಯಡಿ ಕನ್ನಾಜೆಯ ಬೆನೆಡಿಕ್ಟ್ ವೇಗಸ್ ರಿಗೆ ವೈದ್ಯಕೀಯ ನೆರವು

Suddi Udaya

ಕಕ್ಕಿಂಜೆ: ಖ್ಯಾತ ಮೇಸ್ತ್ರಿ ಕೆಲಸಗಾರ ಮೊಯಿದಿನ್‌ಕುಂಞಿ ಮೋಣುಚ್ಚ ನಿಧನ

Suddi Udaya

ಮಂಜೂಷಾ ವಸ್ತು ಸಂಗ್ರಹಾಲಯವನ್ನು ವಿಶ್ವದಲ್ಲೇ ಅತಿದೊಡ್ಡ ಏಕ ವ್ಯಕ್ತಿ ಸಂಗ್ರಹಾಲಯ ಎಂದು ಗುರುತಿಸಿ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೌರವ

Suddi Udaya
error: Content is protected !!