23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂಗಳೂರಿನ ಕೃಷಿ ವಿಜ್ಞಾನ ಕೇಂದ್ರದಿಂದ ಕರಾವಳಿ ಭತ್ತದ ಬೆಳೆಯಲ್ಲಿ ಮೆಗ್ನೀಶಿಯಂ ಸಲ್ಫೇಟ್ ನ ಪ್ರಭಾವದ ಕುರಿತು ಕ್ಷೇತ್ರ ಪರಿಶೀಲನಾ ಕಾರ್ಯಕ್ರಮ


ಬೆಳ್ತಂಗಡಿ : ಐ.ಸಿ.ಎ.ಆರ್. ಕೃಷಿ ವಿಜ್ಞಾನ ಕೇಂದ್ರ, ಮಂಗಳೂರು ವತಿಯಿಂದ ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಕರಂಬಾರು ಗುತ್ತು ಮನೆಯಲ್ಲಿ ಕರಾವಳಿ ಭತ್ತದ ಬೆಳೆಯ ಬೆಳವಣಿಗೆ ಹಾಗೂ ಇಳುವರಿಯ ಮೇಲೆ ಮೆಗ್ನೀಶಿಯಂ ಸಲ್ಫೇಟ್ ನ ಪ್ರಭಾವದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಮಣ್ಣು ವಿಜ್ಞಾನಿ ಡಾ. ಮಲ್ಲಿಕಾರ್ಜುನ ಎಲ್. ಮಾತನಾಡಿ, ಭತ್ತದ ಬೆಳೆಯಲ್ಲಿ ಸಮಗ್ರ ಪೋಷಕಾಂಶಗಳ ನಿರ್ವಹಣೆ ಹಾಗೂ ಮೆಗ್ನೀಶಿಯಂ ಬಳಕೆಯಿಂದಾಗುವ ಪ್ರಯೋಜನಗಳ ಕುರಿತು ಮಾಹಿತಿ ನೀಡಿದರು. ತಂತ್ರಜ್ಞಾನದ ಪರಿಶೀಲನೆಗಾಗಿ ಆಯ್ದ ಐದು ಜನ ರೈತರಿಗೆ ರಸಗೊಬ್ಬರಗಳ ಪರಿಕರಗಳನ್ನು ವಿತರಿಸಲಾಯಿತು.


ನಂತರ ಮಾತನಾಡಿದ ಸಸ್ಯ ಸಂರಕ್ಷಣಾ ವಿಜ್ಞಾನಿ ಡಾ. ಕೇದಾರನಾಥ, ಭತ್ತದ ಬೆಳೆಯಲ್ಲಿ ಕಂಡು ಬರುವ ರೋಗ ಮತ್ತು ಕೀಟಗಳ ನಿರ್ವಹಣೆ ಕುರಿತು ರೈತರಿಗೆ ಮಾಹಿತಿ ನೀಡಿದರು. ಈ ಕಾರ್ಯಕ್ರಮದಲ್ಲಿ ಕೃಷಿ ಪರಿಕರ ಮಾರಟಗಾರರಾದ ಚೇತನಾ, ಸುಕೇಶ ಪೂಜಾರಿ, ಕರಂಬಾರು ಗುತ್ತು ಮನೆಯ ಸುಮಿತ್ರಾ ಹೆಗಡೆ, ಲ್ಯಾನ್ಸಿ ಡಿಸೋಜಾ, ಸದಾನಂದ ಹೆಗಡೆ, ಪ್ರಕಾಶ ಹೆಗಡೆ, ಸಂಜೀವ ದೆವಾಡಿಗ ಮುಂತಾದವರು ಭಾಗವಹಿಸಿದ್ದರು.

Related posts

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಕೆಸರುಗದ್ದೆ ಕ್ರೀಡಾಕೂಟದ ಸಮಾರೋಪ ಸಮಾರಂಭ

Suddi Udaya

ಕುಪ್ಪೆಟ್ಟಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ನೂತನ ಶೌಚಾಲಯದ ಉದ್ಘಾಟನೆ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ಕ್ಷೇತ್ರ ಸಮಿತಿ ವತಿಯಿಂದ ಪಕ್ಷ ಸಮಾವೇಶ ಕಾರ್ಯಕ್ರಮ

Suddi Udaya

ನ್ಯಾಯ್ಯತರ್ಪು: ಮನೆಗಳಿಗೆ ಸಿಡಿಲು ಬಡಿದು ಹಾನಿ: ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ

Suddi Udaya

ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿರುವ ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಸದಸ್ಯರು ಎಸ್.ಎಸ್.ಎಲ್.ಸಿ ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ, ಸಾಧಕರಿಗೆ ಸನ್ಮಾನ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya
error: Content is protected !!