April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಯನ್ಸ್ ಕ್ಲಬ್ ನಿಂದ ಸ್ವಾತಂತ್ರೋತ್ಸವ ಆಚರಣೆ, ಪ್ರತಿಭಾ ಪ್ರೋತ್ಸಾಹ

ಬೆಳ್ತಂಗಡಿ: ನಮ್ಮ ಕಾರ್ಯವನ್ನು ನಾವು ಪ್ರಾಮಾಣಿಕವಾಗಿ ಮಾಡುವುದೇ ದೇಶ ಸೇವೆ. ಭ್ರಷ್ಟಾಚಾರ ಮುಕ್ತ ಸೌಹಾರ್ದ ಭಾರತ ನಮ್ಮ ಗುರಿಯಾಗಿಸೋಣ ಎಂದು ನಿವೃತ್ತ ಸೇನಾನಿ ಕಾಂಚೋಡು ಗೋಪಾಲಕೃಷ್ಣ ಭಟ್ ಹೇಳಿದರು.


ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ ಲಯನ್ಸ್ ಭವನದಲ್ಲಿ ಮುಸ್ಸಂಜೆ ನಡೆದ ಸ್ವಾತಂತ್ರೋತ್ಸವ ಆಚರಣೆ, ಪ್ರತಿಭಾ ಪ್ರೋತ್ಸಾಹ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.


ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಗಲ್ಫ್ ಉದ್ಯಮಿ ಇಸ್ಮಾಯಿಲ್ ಅಬ್ದುಲ್ ಖಾದರ್ ಅವರನ್ನು ಸನ್ಮಾನಿಸಲಾಯಿತು.


ಬಡತನದ ಹಿನ್ನೆಲೆಯಿಂದ ಬಂದು ಎಂ ಕಾಂ ವಿದ್ಯಾಭ್ಯಾಸ ಪಡೆಯುತ್ತಿರುವ ಅರ್ಹ ಕುಟುಂಬದ ಇಬ್ಬರು ಪ್ರತಿಭಾನ್ವಿತೆ ವಿದ್ಯಾರ್ಥಿನಿಯರಿಗೆ ಲಯನ್ಸ್ ವಿದ್ಯಾ ಕಲಿಕಾ ನಿಧಿ ಹಸ್ತಾಂತರಿಸಲಾಯಿತು.
ದಿನದ ಮಹತ್ವದ ಬಗ್ಗೆ ನಿತ್ಯಾನಂದ ನಾವರ, ಹೇಮಂತ ರಾವ್, ವಸಂತ ಶೆಟ್ಟಿ ಮಾತನಾಡಿದರು.


ಅಧ್ಯಕ್ಷತೆ ವಹಿಸಿದ್ದ ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಶೆಟ್ಟಿ ಮಾತನಾಡಿ, ಲಯನ್ಸ್ ಸುವರ್ಣ ಮಹೋತ್ಸವದ ಭಾಗವಾಗಿ ಪ್ರತೀ ಸದಸ್ಯರ ಮನೆ ಭೇಟಿ, ಸರಳ ಕಾರ್ಯಕ್ರಮ, ಸಣ್ಣ ದೊಡ್ಡ ಎಂಬ ಭೇದವಿಲ್ಲದೆ ಜಾತಿ ಧರ್ಮದ ಅಂತರವಿಲ್ಲದೆ ಸೇವಾ ಚಟುವಟಿಕೆ ಹಮ್ಮಿಕೊಳ್ಳೋಣ ಎಂದರು.
ವೇದಿಕೆಯಲ್ಲಿ ನಿಕಟಪೂರ್ವಾಧ್ಯಕ್ಷ ಡಾ. ದೇವಿಪ್ರಸಾದ್ ಬೊಳ್ಮ ಉಪಸ್ಥಿತರಿದ್ದರು.


ಅಶ್ರಫ್ ಆಲಿಕುಂಞಿ ಮುಂಡಾಜೆ ಪ್ರಾರ್ಥನೆ ಹಾಡಿದರು. ಕಾರ್ಯದರ್ಶಿ ಅನಂತ ಕೃಷ್ಣ ವರದಿ ವಾಚಿಸಿದರು. ರವೀಂದ್ರ ಶೆಟ್ಟಿ ಬಳಂಜ ವೇದಿಕೆಗೆ ಆಹ್ವಾನಿಸಿದರು. ಲಾಂಗೂಲ ಚಾಲಕ ರಾಮಕೃಷ್ಣ ಗೌಡ ನಗೆಚಟಾಕಿ ನಡೆಸಿದರು. ದೇವಿದಾಸ್ ಶೆಟ್ಟಿ ಧ್ವಜವಂದನೆ ನಡೆಸಿದರು. ಕೋಶಾಧಿಕಾರಿ ಶುಭಾಷಿಣಿ ವಂದಿಸಿದರು.

Related posts

ಓಡಿಲ್ನಾಳ : ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ಧ್ವಜಾರೋಹಣ, ಪ್ರಥಮ ಜಾತ್ರೆ

Suddi Udaya

ಉಜಿರೆ : ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾನವೀಯತೆ ಮೆರೆದ ಉಜಿರೆಯ ದಿಕ್ಷೀತಾ

Suddi Udaya

ಬೆಳ್ತಂಗಡಿ: ಗೃಹಜ್ಯೋತಿ ಯೋಜನೆಗೆ ಜೂ.18ರಿಂದ ನೋಂದಣಿ

Suddi Udaya

ನಯನರಮ್ಯ ಧರ್ಮಸ್ಥಳ ಲಕ್ಷದೀಪೋತ್ಸದಲ್ಲಿ ಸನಾತನ ಸಂಸ್ಥೆಯ ಸಹಭಾಗ : ಡಾ. ಡಿ. ವೀರೇಂದ್ರ ಹೆಗ್ಡೆಯವರಿಂದ ಸನಾತನದ ವಿಶೇಷ ಗ್ರಂಥ ಪ್ರದರ್ಶನಕ್ಕೆ ಚಾಲನೆ

Suddi Udaya

ರಾಷ್ಟ್ರಮಟ್ಟದ ಚಿತ್ರಕಲಾ ಸ್ಪರ್ಧೆ: ಕೊಕ್ಕಡ ವಿನು ಸ್ಕೂಲ್ ಆಫ್ ಆರ್ಟ್ಸ್ ನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya
error: Content is protected !!