23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪೌಷ್ಟಿಕ ಆಹಾರ ಸಿರಿ ಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

ಶಿಶಿಲ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ .ಟ್ರಸ್ಟ್ ಬೆಳ್ತಂಗಡಿ ತಾಲೂಕು ಅರಸಿನಮಕ್ಕಿ ವಲಯದ ಶಿಶಿಲ ಒಕ್ಕೂಟ ಸಮುದಾಯ ಭವನದಲ್ಲಿ ಶಿಶಿಲ ಹೇವಾಜೆ ಬೂಡುದಮಕ್ಕಿ ಪೆರ್ಲ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪೌಷ್ಟಿಕ ಆಹಾರ ಸಿರಿ ಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಆ.16 ರಂದು ನಡೆಸಲಾಯಿತು .

ಕಾರ್ಯಕ್ರಮದ ಉದ್ಘಾಟನೆಯನ್ನು ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಶ್ರೀನಿವಾಸ ಮೂಡೆತ್ತಾಯರವರು ಉದ್ಘಾಟನೆ ಮಾಡಿ ಶುಭ ಹಾರೈಸಿದರು.

ಬರೋಡಾ ಬ್ಯಾಂಕ್ ಮೆನೇಜರ್ ರಾಕೇಶ್ ಪಿ ನಾಯ್ಕ್ ,ಸಿ.ಎ ಬ್ಯಾಂಕ್ ಮೆನೇಜರ್ ರಂಜಿತ್ ಶೆಟ್ಟಿ,ನಿರ್ದೇಶಕರು ಶ್ರೀಮತಿ ತಾರಾರವರು ಕಾರ್ಯಕ್ರಮಕ್ಕೆ ಸುಭ ಹಾರೈಸಿದರು.ವಲಯ ಮೇಲ್ವಿಚಾರಕರಾದ ಶಶಿಕಲಾರವರು ಜ್ನಾನವಿಕಾಸ ಕಾರ್ಯಕ್ರಮದ ಹುಟ್ಟು ಹಾಗೂ ಧ್ಯೇಯೋದ್ದೇಶಗಳ ಬಗ್ಗೆ ತಿಳಿಸುತ್ತಾ ಸಿರಿ ಧಾನ್ಯ ಬಳಕೆ ಮಾಡಿ ಆರೋಗ್ಯ ವೃದ್ದಿಸಿಕೊಳ್ಳುವಂತೆ ಮಹಿಳೆಯರು ಸೇವಿಸುವ ಪೌಷ್ಟಿಕ ಆಹಾರ ಸೇವನೆ ವಿಧಾನದ ಬಗ್ಗೆ ಮಾಹಿತಿ ನೀಡಿದರು.ಸಿರಿಧಾನ್ಯ ಮಾರುಕಟ್ಟೆ ಅಧಿಕಾರಿಯವರಾದ ವಿವಿಧ ಸಿರಿ ಧಾನ್ಯಗಳ ಪರಿಚಯ ಮಾಡುವುದರೊಂದಿಗೆ ನವಣೆ, ಊದಲು , ಕೊರಳು, ಸಜ್ಜೆ, ಸಾಮೆ ,ರಾಗಿ ಬಳಕೆ ವಿಧಾನ ಇವುಗಳಿಂದ ತಯಾರಿಸುವ ವಿವಿಧ ತಿಂಡಿಗಳ ಬಗ್ಗೆ ಬಳಕೆ ವಿಧಾನ & ರೋಗನಿರೋಧಕ ಶಕ್ತಿ ಬಗ್ಗೆ ಮಾಹಿತಿ ನೀಡಿದರು..

ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದ ಸಮನ್ವಯಧಿಕಾರಿಯವರಾದ ಮಧುರಾರವರು ನಿರೂಪಿಸಿದ ಕಾರ್ಯಕ್ರಮದಲ್ಲಿ ಪೆರ್ಲ ಸೇವಾಪ್ರತಿನಿಧಿ ಅರುಣಾರವರು ಸ್ವಾಗತಿಸಿ ಹೇವಾಜೆ ಸೇವಾಪ್ರತಿನಿಧಿ ರಶ್ಮಿತಾರವರು ಧನ್ಯವಾದ ನೀಡಿದರು ಶಿಶಿಲ ಸೇವಾಪ್ರತಿನಿಧಿ ಗಾಯತ್ರಿ ಉಪಸ್ಥಿತರಿದ್ದರು .

Related posts

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಸನತ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಜಾರಿ

Suddi Udaya

ಬೆಳ್ತಂಗಡಿಗೆ ಆಗಮಿಸಿದ ಎಸ್.ಐ.ಟಿ ಒಂದು ತಂಡ :ಬೆಳ್ತಂಗಡಿಯ ಎಸ್.ಐ.ಟಿ ಕಚೇರಿ ಪರಿಶೀಲನೆ

Suddi Udaya

ಬೆಳ್ತಂಗಡಿ : ರಸ್ತೆಯಲ್ಲಿ ಧೂಳೋ ಧೂಳ್ ಪ್ರಯಾಣಿಕರಿಗೆ ಸಂಕಟ

Suddi Udaya

ನಿರ್ಗತಿಕ ವಯೋ ವೃದ್ದನಿಗೆ ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ಆಶ್ರಯ

Suddi Udaya

ಭಗವಾನ್ ಶ್ರೀ ಮಹಾವೀರ ಸ್ವಾಮಿಯ ಜನ್ಮಕಲ್ಯಾಣೋತ್ಸವ ಕಾರ್ಯಕ್ರಮ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ

Suddi Udaya
error: Content is protected !!