July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಲಕ್ಷ್ಮಿ ಗ್ರೂಪ್ ಮಾಲಕ ಮೋಹನ್ ಕುಮಾರ್ ರವರಿಂದ ಯೋಗಾಸನ ಸ್ಪರ್ಧೆಗೆ ವಿದ್ಯಾರ್ಥಿಗಳಿಗೆ ಯೂನಿಪಾರ್ಮ್ ವಿತರಣೆ

ಉಜಿರೆ: ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಉಜಿರೆ ಲಕ್ಷ್ಮಿ ಗ್ರೂಪ್ ಮಾಲಕ,ಸಮಾಜ ಸೇವಕ ಮೋಹನ್ ಕುಮಾರ್ ರವರು ಯೋಗಾಸನ ಸ್ಪರ್ಧೆಗೆ ಕಲ್ಮಂಜ ವಿದ್ಯಾರ್ಥಿಗಳಿಗೆ ಯೂನಿಪಾರ್ಮ್ ವಿತರಿಸಿದ್ದರು.

ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಇತ್ತೀಚೆಗೆ ನಡ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಯೋಗಾಸನದಲ್ಲಿ 17 ರ ಒಳಗಿನ ವಯೋಮಾನದ ಕಲ್ಮಂಜ ಸರಕಾರಿ ಪ್ರೌಢ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ತಾಲೂಕು ಮಟ್ಟದಲ್ಲಿ ಚಾಂಪಿಯನ್ ಶಿಪ್ ಪಡೆದು ಉಜಿರೆ ಉದ್ಯಮಿ ಮೋಹನ್ ಕುಮಾರ್ ಅವರನ್ನು ವಿದ್ಯಾರ್ಥಿಗಳು ಕನಸಿನ ಮನೆ ಉಜಿರೆಯಲ್ಲಿ ಬೇಟಿಯಾಗಿ ಆಶೀರ್ವಾದ ಪಡೆದರು.

17 ರ ವಯೋಮಾನದ ವಿಭಾಗದಲ್ಲಿ ಕಲ್ಮಂಜ ಪ್ರೌಢ ಶಾಲೆಯ 5 ಬಾಲಕರು ಮತ್ತು ಇಬ್ಬರು ಬಾಲಕಿಯರು ವಿಜೇತರಾಗಿ ಆ.31 ರಂದು ನಡೆಯುವ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಇವರಿಗೆ ಸಂಸ್ಥೆಯ ಆಂಗ್ಲ ಭಾಷಾ ಶಿಕ್ಷಕಿ ಶ್ರೀಮತಿ ಪ್ರೇಮಲತಾ ಪಿ ರವರು ತರಬೇತಿಯನ್ನು ನೀಡಿರುತ್ತಾರೆ. ಈ ಸಂದರ್ಭದಲ್ಲಿ ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಉಪಸ್ಥಿತರಿದ್ದರು.

Related posts

ಭಾರೀ ಗಾಳಿ ಮಳೆ: ರೆಖ್ಯದಲ್ಲಿ ಮನೆಯ ಮೇಲ್ಚಾವಣಿ ಮತ್ತು ಗೋಡೆ ಕುಸಿತ

Suddi Udaya

ಲಾಯಿಲ ರಾಘವೇಂದ್ರ ಮಠದಲ್ಲಿ ದೃಢಕಲಶ ಉತ್ಸವ

Suddi Udaya

ನಿಟ್ಟಡೆ ಕುಂಭ ಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಕುಂಭ ಕಾರ್ನಿವಾಲ್ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಗುರುಮಿಠ್ಕಲ್ ಕ್ಷೇತ್ರದ ಶಾಸಕ ಶರಣ ಗೌಡ ಕಂದಕೂರ ಭೇಟಿ

Suddi Udaya

ಬಂದಾರು: ಬೈಹುಲ್ಲು ಸಾಗಾಟದ ಲಾರಿಗೆ ಬೆಂಕಿ

Suddi Udaya

KCET, NEET ಹಾಗೂ JEE (Mains) ಪರೀಕ್ಷೆಗಳಿಗಾಗಿ ಮಾ.18ರಿಂದ ವಿದ್ವತ್‌ ಕಾಲೇಜಿನಲ್ಲಿ ಕ್ರ್ಯಾಶ್ ಕೋರ್ಸ್ ಆರಂಭ

Suddi Udaya
error: Content is protected !!