25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಶಿಕ್ಷಕ ರಕ್ಷಕ ಸಂಘ ಮತ್ತು ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಎಪ್ಪತ್ತೇಳನೇ ಸ್ವಾತಂತ್ರ್ಯೋತ್ಸವ ಜರಗಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಮುಖ್ಯೋಪಾಧ್ಯಾಯರಾದ ಹರ್ಷಕುಮಾರ್ ಉಜರೆಯವರು ಮಾತನಾಡುತ್ತಾ, ವರ್ಷಕ್ಕೊಮ್ಮೆ ಆಚರಿಸುವ ರಾಷ್ಟ್ರೀಯ ಹಬ್ಬ ಇದು. ಈ ಮೂಲಕ ದೇಶಕ್ಕಾಗಿ ತ್ಯಾಗ ಮಾಡಿದವರನ್ನು ನೆನೆದು, ಅವರ ಬದುಕಿನ ಮೌಲ್ಯಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವುದೇ ನಿಜವಾದ ಸ್ವಾತಂತ್ರ್ಯ ದಿನಾಚರಣೆ ಎಂದು ಹೇಳಿದರು. ಇನ್ನೋರ್ವ ಅತಿಥಿಗಳಾದ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗಣೇಶ್ ಕನಿಕ್ಕಿಲರವರು ಉಪಸ್ಥಿತರಿದ್ದರು.
ಸಭೆಯ ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರು ವಹಿಸಿದ್ದರು.

ಆರಂಭದಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶೇಖರ ಕೊಲ್ಲಿಮಾರ್ ರವರು ಧ್ವಜಾರೋಹಣ ಮಾಡಿ ಶುಭಹಾರೃಸಿದರು. ಈ ಸಂದರ್ಭದಲ್ಲಿ ಶಿಕ್ಷಕರು ಮತ್ತು ಸಿಬ್ಬಂದಿಯವರು ಹಾಜರಿದ್ದರು.

ವಿದ್ಯಾರ್ಥಿಗಳಾದ ಮನೋಜ್, ಇಂದುಮತಿ ಮತ್ತು ಫಾತಿಮತ್ ಝುಹ ಅನಿಸಿಕೆ ವ್ಯಕ್ತಪಡಿಸಿದರು. ಶ್ರೇಯಸ್ ಸ್ವಾಗತಿಸಿ, ರಕ್ಷಾ ವಂದಿಸಿದರು, ತೃಷಾ ಜೈನ್ ಕಾರ್ಯಕ್ರಮ ನಿರೂಪಿಸಿದರು. ಕೊನೆಯಲ್ಲಿ ವಿದ್ಯಾರ್ಥಿಗಳಿಂದ ವಿವಿಧ ಕಲಾ ಕಾರ್ಯಕ್ರಮಗಳು ಜರಗಿತು.

Related posts

ಎಸ್.ಡಿ.ಎಂ. ಬಿ.ಎಡ್ , ಡಿ.ಇಎಲ್.ಇಡಿ ಹಾಗೂ ಶ್ರೀ ಧ.ಮಂ. ಮಹಿಳಾ ಐಟಿಐ ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ಕ್ರೀಡಾಕೂಟ

Suddi Udaya

ಅಯೋಧ್ಯೆ ಶ್ರೀರಾಮ ದೇವರ ಪ್ರಾಣಪ್ರತಿಷ್ಠೆಯ ಪ್ರಯುಕ್ತ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಶ್ರೀ ರಾಮೋತ್ಸವ

Suddi Udaya

ಕ್ಯಾಂಪ್ಕೊ “ಸಾಂತ್ವನ” ಯೋಜನೆಯಡಿ ಚಿಕಿತ್ಸಾ ನೆರವು

Suddi Udaya

ಮಂದಗತಿಯಿಂದ ಸಾಗುತ್ತಿರುವ ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ: ಕಾಮಗಾರಿಯ ವಿರುದ್ಧ ಬೆಳ್ತಂಗಡಿಯಲ್ಲಿ ಹೆದ್ದಾರಿ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ಬಿಗ್‌ಬಾಸ್ ಕನ್ನಡ ಸೀಸನ್ 11 ರ ಟ್ರೋಫಿ ಮುಡಿಗೇರಿಸಿಕೊಂಡ ಹಾವೇರಿಯ ಹಳ್ಳಿ ಹೈದ ಹನುಮಂತು

Suddi Udaya

ಭೀಕರ ಗಾಳಿ ಮಳೆ: ಕುವೆಟ್ಟು ವರಕಬೆ ಬಳಿ ರಸ್ತೆಗೆ ಬಿದ್ದ ಮರ: ಸಂಚಾರಕ್ಕೆ ಅಡಚಣೆ

Suddi Udaya
error: Content is protected !!