September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಶಿಕ್ಷಕ ರಕ್ಷಕ ಸಂಘ ಮತ್ತು ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಎಪ್ಪತ್ತೇಳನೇ ಸ್ವಾತಂತ್ರ್ಯೋತ್ಸವ ಜರಗಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಮುಖ್ಯೋಪಾಧ್ಯಾಯರಾದ ಹರ್ಷಕುಮಾರ್ ಉಜರೆಯವರು ಮಾತನಾಡುತ್ತಾ, ವರ್ಷಕ್ಕೊಮ್ಮೆ ಆಚರಿಸುವ ರಾಷ್ಟ್ರೀಯ ಹಬ್ಬ ಇದು. ಈ ಮೂಲಕ ದೇಶಕ್ಕಾಗಿ ತ್ಯಾಗ ಮಾಡಿದವರನ್ನು ನೆನೆದು, ಅವರ ಬದುಕಿನ ಮೌಲ್ಯಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವುದೇ ನಿಜವಾದ ಸ್ವಾತಂತ್ರ್ಯ ದಿನಾಚರಣೆ ಎಂದು ಹೇಳಿದರು. ಇನ್ನೋರ್ವ ಅತಿಥಿಗಳಾದ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗಣೇಶ್ ಕನಿಕ್ಕಿಲರವರು ಉಪಸ್ಥಿತರಿದ್ದರು.
ಸಭೆಯ ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರು ವಹಿಸಿದ್ದರು.

ಆರಂಭದಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶೇಖರ ಕೊಲ್ಲಿಮಾರ್ ರವರು ಧ್ವಜಾರೋಹಣ ಮಾಡಿ ಶುಭಹಾರೃಸಿದರು. ಈ ಸಂದರ್ಭದಲ್ಲಿ ಶಿಕ್ಷಕರು ಮತ್ತು ಸಿಬ್ಬಂದಿಯವರು ಹಾಜರಿದ್ದರು.

ವಿದ್ಯಾರ್ಥಿಗಳಾದ ಮನೋಜ್, ಇಂದುಮತಿ ಮತ್ತು ಫಾತಿಮತ್ ಝುಹ ಅನಿಸಿಕೆ ವ್ಯಕ್ತಪಡಿಸಿದರು. ಶ್ರೇಯಸ್ ಸ್ವಾಗತಿಸಿ, ರಕ್ಷಾ ವಂದಿಸಿದರು, ತೃಷಾ ಜೈನ್ ಕಾರ್ಯಕ್ರಮ ನಿರೂಪಿಸಿದರು. ಕೊನೆಯಲ್ಲಿ ವಿದ್ಯಾರ್ಥಿಗಳಿಂದ ವಿವಿಧ ಕಲಾ ಕಾರ್ಯಕ್ರಮಗಳು ಜರಗಿತು.

Related posts

ರಸ್ತೆ ಬದಿ ವಾಹನಕ್ಕಾಗಿ ತನ್ನ ತಾಯಿ ಜೊತೆ ಕಾಯುತ್ತಿದ್ದ ಪುಟ್ಟ ಬಾಲಕಿ ಸಾತ್ವಿಕಾ ದ್ವಿಚಕ್ರ ವಾಹನ ‌ ಡಿಕ್ಕಿ ಹೊಡೆದು ಗಾಯಗೊಂಡು ಆಸ್ಪತ್ರೆಗೆ

Suddi Udaya

ತಾ| ಮಟ್ಟದ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾದರಿಸಿದ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ನ ಕಂಪ್ಯೂಟರ್ ಸೈನ್ಸ್ ವಿಭಾಗದ ವತಿಯಿಂದ ಟೆಕ್ ವ್ಯುಹ್ ಕಾರ್ಯಕ್ರಮ

Suddi Udaya

ಎಸ್. ಎಸ್.ಎಲ್.ಸಿ ಫಲಿತಾಂಶ: ಮುಂಡಾಜೆ ಅನುದಾನಿತ ಪ್ರೌಢಶಾಲೆಗೆ ಶೇ. 98.24 ಫಲಿತಾಂಶ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ನಡ ಸರಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!