30.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ:  ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಗಮ್ಮತ್ತ್’

ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತುಳುನಾಡಿನ ಸಂಸ್ಕೃತಿ ಹಾಗೂ ಆಟಿ ತಿಂಗಳ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸುವ ಸಲುವಾಗಿ ‘ಆಟಿದ ಗಮ್ಮತ್ತ್’ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು.
 
ಕಾರ್ಯಕ್ರಮವನ್ನು ದೈವನರ್ತಕ ಹಾಗೂ ಉಜಿರೆ ಎಸ್ ಡಿ ಎಂ ಐಟಿ ಕಾಲೇಜಿನ ಪ್ರಾಧ್ಯಾಪಕರಾದ ಡಾ. ರವೀಶ್ ಪಡುಮಲೆ ಇವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಆಟಿ ತಿಂಗಳಲ್ಲಿ ಹಿರಿಯರು ಸಾಗಿಸುತ್ತಿದ್ದ ಜೀವನ ಮತ್ತು ಆಟಿ ತಿಂಗಳಲ್ಲಿ ಸೇವಿಸುತ್ತಿದ್ದ ಆಹಾರಗಳ ಬಗ್ಗೆ ತಿಳಿಸಿದರು. 
 
ಶಾಲೆಯ ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಎಲ್ಲರೂ ಸೇರಿ ಒಂದೇ ತಾಯಿಯ ಮಕ್ಕಳಂತೆ ಕಾರ್ಯಕ್ರಮವನ್ನು ಹಬ್ಬದಂತೆ ಆಚರಿಸಿದ್ದಕ್ಕೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಡಾ. ರವೀಶ್ ಪಡುಮಲೆ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
 
ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ, ತುಳುನಾಡಿನ ಸಂಸ್ಕೃತಿ ಸಾರುವ ಹಳೆಯ ವಸ್ತುಗಳ ಪ್ರದರ್ಶನ, ಆಟಿ ತಿಂಗಳಿನ ವಿಶೇಷ ಆಹಾರ ವಸ್ತುಗಳ ಪ್ರದರ್ಶನ, ಶಾಲೆಯ ಗದ್ದೆಯಲ್ಲಿ ಹಗ್ಗ ಜಗ್ಗಾಟ, ಲೆಮನ್ ಮತ್ತು ಸ್ಪೂನ್ ಓಟ ಹಾಗೂ ಅಡಿಕೆ ಹಾಳೆ ಎಳೆಯುವ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.
 
ವಿದ್ಯಾರ್ಥಿಗಳಾದ ಚಿನ್ಮಯ್ ಪ್ರಾರ್ಥಿಸಿ, ಅನುಶ್ರೀ ಸ್ವಾಗತಿಸಿ, ನಿಧಿ ವಂದಿಸಿದರು. ವಿದ್ಯಾರ್ಥಿನಿ ನಿಧಿ ಸಾಲಿಯಾನ್ ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡದಲ್ಲಿ ಸುದರ್ಶನ ಹೋಮ, ವಾಸ್ತು ಪೂಜೆ ಹಾಗೂ ಗಣಹೋಮ ಪೂಜೆ

Suddi Udaya

ವಾಣಿ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಧರ್ಮಸ್ಥಳದಲ್ಲಿ ನೂತನ ಶಿಲಾಮಯ ಧ್ವಜಸ್ತಂಭಕ್ಕೆ ಭವ್ಯ ಸ್ವಾಗತ

Suddi Udaya

ತಣ್ಣೀರುಪಂತ: ಕುದ್ರಡ್ಕದಲ್ಲಿ ಮೂವರು ಮಕ್ಕಳಿಗೆ ಹಾವು ಕಡಿತ

Suddi Udaya

ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ರಂಜನ್ ಜಿ ಗೌಡ, ಹಾಗೂ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ನೇಮಕ

Suddi Udaya

ಮರೋಡಿ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya
error: Content is protected !!